ಕೆರೆಗಳ ರಕ್ಷಣೆಯಿಂದ ಪ್ರಾಕೃತಿಕ ಸಂಪನ್ಮೂಲಗಳ ಉಳಿವು

KannadaprabhaNewsNetwork |  
Published : Feb 15, 2026, 02:15 AM IST
14ಕೆಆರ್ ಎಂಎನ್ 1.ಜೆಪಿಜಿರಾಮನಗರ ತಾಲೂಕಿನ ಕೆಂಪದ್ಯಾಪನಹಳ್ಳಿಯಲ್ಲಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಗಣ್ಯರು ಪೂಜೆ ಸಲ್ಲಿಸಿದರು. | Kannada Prabha

ಸಾರಾಂಶ

ರಾಮನಗರ: ಕೆರೆಗಳಲ್ಲಿ ಹೂಳೆತ್ತುವುದರಿಂದ ಅಂತರ್ಜಲ ವೃದ್ಧಿಯ ಜತೆಗೆ ಪ್ರಾಕೃತಿಕ ಸಂಪನ್ಮೂಲಗಳನ್ನು ಉಳಿಸಬಹುದಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಎನ್.ನಟರಾಜು ಹೇಳಿದರು.ಬಿಡದಿ ಹೋಬಳಿ ಬನ್ನಿಕುಪ್ಪೆ(ಬಿ) ಗ್ರಾಪಂ ವ್ಯಾಪ್ತಿಯ ಕೆಂಪದ್ಯಾಪನಹಳ್ಳಿ ಗ್ರಾಮದಲ್ಲಿ ಟಯೋಡ ಗೋಸಾಯಿ ಪ್ರೈ.ಲಿ ವತಿಯಿಂದ ಸಿಎಸ್‌ಆರ್ ನಿಧಿಯಡಿ ಕೈಗೊಂಡಿರುವ ಕೆರೆ ಹೂಳೆತ್ತುವ ಕಾರ್ಯಕ್ಕೆ ಪೂಜೆ ನೆರವೇರಿಸಿ ಅವರು ಮಾತನಾಡಿದರು

ರಾಮನಗರ: ಕೆರೆಗಳಲ್ಲಿ ಹೂಳೆತ್ತುವುದರಿಂದ ಅಂತರ್ಜಲ ವೃದ್ಧಿಯ ಜತೆಗೆ ಪ್ರಾಕೃತಿಕ ಸಂಪನ್ಮೂಲಗಳನ್ನು ಉಳಿಸಬಹುದಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಎನ್.ನಟರಾಜು ಹೇಳಿದರು.

ಬಿಡದಿ ಹೋಬಳಿ ಬನ್ನಿಕುಪ್ಪೆ(ಬಿ) ಗ್ರಾಪಂ ವ್ಯಾಪ್ತಿಯ ಕೆಂಪದ್ಯಾಪನಹಳ್ಳಿ ಗ್ರಾಮದಲ್ಲಿ ಟಯೋಡ ಗೋಸಾಯಿ ಪ್ರೈ.ಲಿ ವತಿಯಿಂದ ಸಿಎಸ್‌ಆರ್ ನಿಧಿಯಡಿ ಕೈಗೊಂಡಿರುವ ಕೆರೆ ಹೂಳೆತ್ತುವ ಕಾರ್ಯಕ್ಕೆ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕೆರೆಗಳ ಸಂರಕ್ಷಣೆ ಮಾಡುವುದರಿಂದ ಅಂತರ್ಜಲ ವೃದ್ಧಿ ಜತೆಗೆ ವಿವಿಧ ಅನುಕೂಲಗಳು ದೊರೆಯುತ್ತವೆ. ಈ ನಿಟ್ಟಿನಲ್ಲಿ ಟಯೋಡ ಗೋಸಾಯಿ ಕಂಪೆನಿ ಪ್ರತಿ ವರ್ಷವೂ ಒಂದು ಕೆರೆಯಲ್ಲಿ ಹೂಳು ತೆಗೆಯುವುದು ಕೆರೆಯ ಏರಿ ದುರಸ್ತಿ ಕಾರ್ಯ ಕೈಗೊಳ್ಳುವ ಮೂಲಕ ಕೆರೆ ಸಂರಕ್ಷಣೆ ಮತ್ತು ನೀರು ಸಂಗ್ರಹಣೆಗೆ ಒತ್ತು ನೀಡುತ್ತಿದೆ. ಇದರಿಂದ ಜಾನುವಾರುಗಳಿಗೆ ಮತ್ತು ರೈತರಿಗೆ ಹೆಚ್ಚು ಉಪಯುಕ್ತವಾಗಲಿದೆ ಜತೆಗೆ ಕೊಳವೆಬಾವಿಗಳಲ್ಲಿ ಜಲ ಮರುಪೂರಣ ಹೆಚ್ಚಾಗಲಿದೆ ಎಂದರು.

ಅಂತರ್ಜಲ ಮಟ್ಟ ಕುಸಿಯುವುದನ್ನು ತಡೆಯಲು ಹಾಗೂ ರೈತರಿಗೆ ಅನುಕೂಲ ಕಲ್ಪಿಸಲು ಕೆರೆಯ ಹೂಳು ತೆಗೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು ಕೆರೆಯಲ್ಲಿ ನೀರು ತುಂಬಿ ಅಂತರ್ಜಲ ವೃದ್ಧಿಯಾಗಲಿದೆ. ಕೆರೆಗಳಲ್ಲಿ ತೆಗೆದ ಗೋಡುಮಣ್ಣನ್ನು ರೈತರಿಗೆ ನೀಡಲಾಗುತ್ತಿದ್ದು ಭೂಮಿಗಳನ್ನು ಫಲವತ್ತಾಗಿ ಮಾರ್ಪಸಲು ಅವಕಾಶವಿದೆ. ಕಂಪೆನಿ ಇಂತಹ ಒಳ್ಳೆಯ ಕಾರ್ಯಕ್ಕೆ ಹಣ ಸದ್ವಿನಿಯೋಗಪಡಿಸಿ ಸಮಾಜಕ್ಕೆ ಕೊಡುಗೆ ನೀಡುತ್ತಿದೆ ಎಂದು ಶ್ಲಾಘಿಸಿದರು.

ಬನ್ನಿಕುಪ್ಪೆ(ಬಿ) ಗ್ರಾಪಂ ವ್ಯಾಪ್ತಿಯಲ್ಲಿ ಟಯೋಡಾ ಗೋಸಾಯಿ ಸಂಸ್ಥೆ ವತಿಯಿಂದ ಈಗಾಗಲೇ ಗಾಣಕಲ್, ಮುತ್ತರಾಯನಪುರ ಹಾಗೂ ಕೆಂಪಯ್ಯನಪಾಳ್ಯ ಗ್ರಾಮಗಳಿಗೆ ಹೈಮಾಸ್ಕ್ ಲೈಟ್ ಸ್ಥಾಪಿಸಿದೆ. ಕಳೆದ ವರ್ಷ ರೈತರಿಗೆ ೫ ಸಾವಿರ ತೆಂಗಿನ ಸಸಿ ವಿತರಿಸಿ ಗ್ರಾಮಿಣಾಭಿವೃದ್ಧಿಗೆ ಸಹಕರಿಸಿದೆ ಕಂಪೆನಿಯ ಸೇವಾ ಕಾರ್ಯಕ್ಕೆ ಗ್ರಾಮಸ್ಥರು ಚಿರಋಣಿಯಾಗಿದ್ದಾರೆ ಎಂದು ಗಾಣಕಲ್ ನಟರಾಜ್ ಹೇಳಿದರು.

ಈ ವೇಳೆ ಟಯೋಡಾ ಗೋಸಾಯಿ ಕಂಪೆನಿ ಉಪವ್ಯವಸ್ಥಾಪಕ ಮಂಜುನಾಥ್, ಮಾನವ ಸಂಪನ್ಮೂಲ(ಹೆಚ್.ಆರ್) ಅಧಿಕಾರಿ ನಾಗಮಣಿ, ದಯಾನಂದ, ಮುಖಂಡರಾದ ಯತಿರಾಜು, ಮಹದೇವಯ್ಯ, ಬ್ಯಾಟಪ್ಪ ಗೋವಿಂದರಾಜು, ಸತೀಶ್.ವಿ, ನವೀನ್, ಮಹೇಶ್, ಅಂಜನ್ ಮುಂತಾದವರು ಇದ್ದರು.

14ಕೆಆರ್ ಎಂಎನ್ 1.ಜೆಪಿಜಿ

ರಾಮನಗರ ತಾಲೂಕಿನ ಕೆಂಪದ್ಯಾಪನಹಳ್ಳಿಯಲ್ಲಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಗಣ್ಯರು ಪೂಜೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ಮಾ. 13 ರವರೆಗೆ ಕಪ್ಪಡಿ ಜಾತ್ರಾ ಮಹೋತ್ಸವ
ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ನಂದಿಗ್ರಾಮ ಸಜ್ಜು