ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಮಲ್ಲಿಕಾರ್ಜುನ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ತೆಂಡೇಕೆರೆ ಸುಕ್ಷೇತ್ರದ ಪೀಠಾಧ್ಯಕ್ಷ ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಸುಕ್ಷೇತ್ರ ಕಾಪನಹಳ್ಳಿ ಗವಿಮಠದ ಸ್ವತಂತ್ರ ಚೆನ್ನವೀರ ಸ್ವಾಮೀಜಿ, ಸುಕ್ಷೇತ್ರ ಬೇಬಿ ಮಠದ ಶಿವಬಸವ ಸ್ವಾಮೀಜಿ ನೇತೃತ್ವದಲ್ಲಿ ತಾಲೂಕಿನ ಸಹಸ್ರಾರು ಅಭಿಮಾನಿಗಳು ಪ್ರವಾಸಿ ಮಂದಿರ ವೃತ್ತದಿಂದ ತಾಲೂಕು ಕಚೇರಿಯವರೆಗೂ ಮೆರವಣಿಗೆ ನಡೆಸಿ ತಹಸೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದರು.
ಒಂದು ಜವಾಬ್ದಾರಿಯುತ ಸರ್ಕಾರ ಮಾಡಬೇಕಾದ ಕೆಲಸವನ್ನು ಧರ್ಮಸ್ಥಳ ಸಂಸ್ಥೆ ಮಾಡುತ್ತಿದೆ. ಇಂದು ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಶ್ರೀಕ್ಷೇತ್ರದ ಕೊಡುಗೆ ದೊಡ್ಡದು. ರೈತರ ನೆರವಿಗೆ ಧಾರ್ಮಿಕ ಸಂಸ್ಥೆಯೊಂದು ಕೆಲಸ ಮಾಡುತ್ತಿರುವುದು ಇಡೀ ದೇಶದಲ್ಲಿಯೆ ಪ್ರಪ್ರಥಮವಾಗಿದೆ ಎಂದರು.ಧರ್ಮಸ್ಥಳದ ವಿರುದ್ಧ ಯಾರೋ ಒಬ್ಬ ಮುಸುಕುದಾರಿ ಬಂದು ಹೇಳಿದ ತಕ್ಷಣ ಎಸ್ಐಟಿ ತನಿಖೆ ಮಾಡುತ್ತಿರುವುದೆ ತಪ್ಪು. ಕಳೆದ 15 ದಿನಗಳಿಂದ ನೆಲ ಅಗೆಸಿ ಬುರುಡೆ ಬಿಡುತ್ತಿರುವ ಮುಸುಕುದಾರಿಯನ್ನು ಏಕೆ ಬಂಧಿಸಿಲ್ಲ ಎಂದು ರಘು ಕಿಡಿಕಾರಿದರು.
ಕೆಲ ಯೂ ಟ್ಯೂಬರ್ಗಳು ಸಾಮಾಜಿಕ ಸ್ವಾಸ್ಥ್ಯವನ್ನು ಕೆಡಿಸುತ್ತಿದ್ದಾರೆ. ಇವರೆಲ್ಲರಿಗೂ ಬುದ್ಧಿ ಕಲಿಸುವ ಕೆಲಸವನ್ನು ಸರ್ಕಾರ ಮಾಡುವವರೆವಿಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಇವರಿಗೆ ಆರ್ಥಿಕ ಸಹಕಾರ ನೀಡುತ್ತಿರುವವರ ವಿರುದ್ಧವೂ ತನಿಖೆಯಾಗಬೇಕು ಎಂದು ಆಗ್ರಹಿಸಿದರು.