ಧರ್ಮಸ್ಥಳದಲ್ಲಿ ಷಡ್ಯಂತ್ರ: ಡಿಸಿಎಂ ಹೇಳಿಕೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಸಹಮತ

KannadaprabhaNewsNetwork |  
Published : Aug 16, 2025, 12:02 AM IST
ಹೆಬ್ಬಾಳ್ಕರ್‌ | Kannada Prabha

ಸಾರಾಂಶ

ಧರ್ಮಸ್ಥಳ ವಿಚಾರದಲ್ಲಿ ಉಪಮುಖ್ಯಮಂತ್ರಿ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅವರು ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು, ಧರ್ಮಾಧಿಕಾರಿ ಹೆಗ್ಗಡೆ ಅವರ ಸಾಮಾಜಿಕ ಕಾರ್ಯಗಳು ಇತರರಿಗೂ ಆದರ್ಶವಾಗಿವೆ. ಅಲ್ಲಿ ಷಡ್ಯಂತ್ರ ನಡೆದಿದೆ ಎಂಬ ಅವರ ವ್ಯಾಖ್ಯಾನಕ್ಕೆ ನನ್ನ ಸಹಮತವಿದೆ ಎಂದು ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿಧರ್ಮಸ್ಥಳದ ವಿಚಾರದಲ್ಲಿ ಷಡ್ಯಂತ್ರ ನಡೆದಿದೆ ಎಂಬ ಡಿಸಿಎಂ ಡಿ.ಕೆ.ಶಿವಕಮಾರ್ ಅವರ ಹೇಳಿಕೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಧ್ವನಿಗೂಡಿಸಿದ್ದಾರೆ. ಈ ಷಡ್ಯಂತರದ ಹಿಂದಿರುವ ಸತ್ಯಾಸತ್ಯತೆ ಸದ್ಯವೇ ಹೊರಬೀಳಲಿದೆ ಎಂದವರು ಹೇಳಿದ್ದಾರೆ.ಶುಕ್ರವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಧರ್ಮಸ್ಥಳ ವಿಚಾರದಲ್ಲಿ ಉಪಮುಖ್ಯಮಂತ್ರಿ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅವರು ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು, ಧರ್ಮಾಧಿಕಾರಿ ಹೆಗ್ಗಡೆ ಅವರ ಸಾಮಾಜಿಕ ಕಾರ್ಯಗಳು ಇತರರಿಗೂ ಆದರ್ಶವಾಗಿವೆ. ಅಲ್ಲಿ ಷಡ್ಯಂತ್ರ ನಡೆದಿದೆ ಎಂಬ ಅವರ ವ್ಯಾಖ್ಯಾನಕ್ಕೆ ನನ್ನ ಸಹಮತವಿದೆ ಎಂದರು.ಧರ್ಮಸ್ಥಳದಲ್ಲಿ ಎಸ್‌ಐಟಿಯವರು ಬಹಳ ಆಳವಾಗಿ ತನಿಖೆ ನಡೆಸುತಿದ್ದಾರೆ. ಅವರ ವಿವರಗಳನ್ನು ಗೃಹಸಚಿವರು ಪಡೆದುಕೊಳ್ಳುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಒಂದು ವೇಳೆ ಅಲ್ಲಿ ಏನೂ ಇಲ್ಲ, ಎಲ್ಲ ಭೋಗಸ್ ಅಂತಾದ್ರೂ ಬಹಿರಂಗ ಆಗಬೇಕಲ್ಲ. ಆದ್ದರಿಂದ ಈ ಎಲ್ಲಾ ಆರೋಪಗಳ ಸತ್ಯಾಸತ್ಯತೆ ಜನಸಾಮಾನ್ಯರ ಮುಂದೆ ಬರಬೇಕಲ್ಲ, ಅದೆಲ್ಲಾ ಎಸ್‌ಐಟಿ ತನಿಖೆಯಿಂದ ಹೊರಬರುತ್ತದೆ. ಈ ಬಗ್ಗೆ ರಾಜಕೀಯ ಮಾಡುವುದು ಬೇಡ ಎಂದು ಹೇಳಿದರು.

ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ವಿರುದ್ಧ ಅವಹೇಳನಕಾರಿ, ಪ್ರಚೋದನಕಾರಿ ಹೇಳಿಕೆಗಳು ನಡೆಯುತ್ತಿದೆ. ಈ ಪ್ರಕರಣವೇ ಸೂಕ್ಷ್ಮವಾದ ವಿಚಾರ, ಸೌಜನ್ಯಳಿಗೆ ಅನ್ಯಾಯ ಆಗಿದ್ರೆ ನಾನೊಬ್ಬ ಮಹಿಳೆಯಾಗಿ ಸಚಿವೆಯಾಗಿ ನ್ಯಾಯ ಸಿಗಬೇಕು ಎನ್ನುವ ವಾದ ನನ್ನದೂ ಆಗಿದೆ. ಆದರೆ ಹಿಂದಿನ ಪ್ರಕರಣಗಳು ಮತ್ತು ಈಗ ನೀಡಿರುವ ದೂರುಗಳಿಗೆ ವ್ಯತ್ಯಾಸ ಇದೆ. ಅದ್ಯಾರೋ ಮುಸುಕುಧಾರಿ, ಅನಾಮಿಕ ದೂರುದಾರ ಬಂದು ಇವತ್ತು ಇಲ್ಲಿ, ನಾಳೆ ಅಲ್ಲಿ, ಇನ್ನೊಂದು ಕಡೆ ತೋರಿಸ್ತಾನೆ, ಇದನ್ನೆಲ್ಲಾ ತನಿಖೆ ನಡೆಸಿ ಫುಲ್‌ಸ್ಟಾಪ್ ಹಾಕಬೇಕು ಅಂತಾನೇ ಎಸ್‌ಐಟಿ ರಚನೆಯಾಗಿದೆ. ಎಲ್ಲದಕ್ಕೂ ಆದಷ್ಟೂ ಬೇಗ ಉತ್ತರ ಸಿಗಲಿದೆ ಎಂದು ಸಚಿವೆ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ