)
ಕನ್ನಡಪ್ರಭ ವಾರ್ತೆ ಬೆಂಗಳೂರು
ಪುದುಚೇರಿಯಲ್ಲಿ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನೆತ್ನನ್ನು ಬಂಧಿಸಿದ ಬಳಿಕ ನಗರಕ್ಕೆ ಕರೆತಂದು ಕೆ.ಆರ್.ಪುರ ಠಾಣೆ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ತಮ್ಮ ಸಂಚಿನ ಕುರಿತು ಪೂರ್ಣ ಚಿತ್ರಣವನ್ನು ಇಬ್ಬರು ಬಾಯ್ಬಿಟ್ಟಿದ್ದು, ಹತ್ಯೆಗೂ ಮುನ್ನ ಎರಡು ಬಾರಿ ಸಂಚು ವಿಫಲವಾಗಿದ್ದ ಸಂಗತಿ ಬಯಲಾಗಿದೆ ಎಂದು ತಿಳಿದು ಬಂದಿದೆ.
ಸೀಗೇನಹಳ್ಳಿ ಸಮೀಪದ ತಮ್ಮ ಅಪಾರ್ಟ್ಮೆಂಟ್ಗೆ ಬಂದ ತಂದೆ ಸೋಮಸುಂದರ್, ತಾಯಿ ಮುತ್ತುಲಕ್ಷ್ಮೀ ಹಾಗೂ ತಂಗಿ ಸುಪ್ರಿಯಾ ಅವರನ್ನು ಸೋಮವಾರ ರಾತ್ರಿ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನೆತ್ ಹತ್ಯೆಗೈದಿದ್ದರು. ಬಳಿಕ ಪುದುಚೇರಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಸ್ಥಳೀಯ ಪೊಲೀಸರ ನೆರವಿನಿಂದ ಬಂಧಿಸಿ ಕೆ.ಆರ್.ಪುರ ಪೊಲೀಸರು ಕರೆತಂದು ವಿಚಾರಣೆಗೊಳಪಡಿಸಿದ್ದಾರೆ.ಮೋಜಿನ ಜೀವನಕ್ಕೆ ಅಡ್ಡಿ
ಅಂತೆಯೇ 2 ಬಾರಿ ಕೊಲೆಗೆ ಯತ್ನಿಸಿ ಕೆನೆತ್ ವಿಫಲನಾಗಿದ್ದಾನೆ. ಈ ನಡುವೆ ಸಾಲ ಪಾವತಿಸದ ಕಾರಣಕ್ಕೆ ಶ್ವೇತಾ ತಾಯಿ ಮುತ್ತುಲಕ್ಷ್ಮೀ ಅವರಿಗೆ ಬ್ಯಾಂಕ್ನಿಂದ ನೋಟಿಸ್ ಜಾರಿಯಾಗಿದ್ದವು. ಈ ನೋಟಿಸ್ ಬಗ್ಗೆ ಮಗಳಿಗೆ ಕರೆ ಮಾಡಿ ಅವರು ಕೇಳಿದಾಗ ಜಗಳವಾಗಿತ್ತು. ಆಗ ತಾನೇ ನಿಮ್ಮ ಮನೆಗೆ ಬಂದು ಮಾತನಾಡುತ್ತೇನೆ ಎಂದಿದ್ದರು. ಅದರಂತೆ ಮಗಳ ಫ್ಲ್ಯಾಟ್ಗೆ ಭಾನುವಾರ ಮುತ್ತುಲಕ್ಷ್ಮೀ ಬಂದಿದ್ದರು. ಆ ರಾತ್ರಿ ಮಗಳ ಮನೆಯಲ್ಲೇ ಅವರು ತಂಗಿದ್ದರು. ಇದಾದ ನಂತರ ಆಕೆಯ ಮನೆಗೆ ಸೋಮವಾರ ರಾತ್ರಿ ತಂದೆ ಸೋಮಸುಂದರ್ ಹಾಗೂ ತಂಗಿ ಸುಪ್ರಿಯಾ ತೆರಳಿದ್ದರು. ಆಗ ಹಣಕಾಸು ವಿಷಯಕ್ಕೆ ಜಗಳವಾಗಿ ಮೊದಲು ತಾಯಿ ಬಳಿಕ ತಂದೆ ಹಾಗೂ ತಂಗಿಯನ್ನು ಪ್ರಿಯಕರನ ಜತೆ ಸೇರಿ ಶ್ವೇತಾ ಹತ್ಯೆ ಮಾಡಿದ್ದಳು. ಈ ಮೂವರಿಗೆ ಕೆನೆತ್ ಚಾಕು ಇರಿದಿದ್ದಾನೆ. ಆತನಿಗೆ ಮೃತರ ಮಗಳು ನೆರವಾಗಿದ್ದಳು ಎಂದು ಮೂಲಗಳು ವಿವರಿಸಿವೆ.