ಜಾತೀಕರಣದತ್ತ ಸಮಾಜ ಕೊಂಡೊಯ್ಯುವ ಷಡ್ಯಂತ್ರ: ಶಾಸಕ ಶ್ರೀನಿವಾಸ ಮಾನೆ

KannadaprabhaNewsNetwork |  
Published : Dec 14, 2024, 12:47 AM IST
ಫೋಟೊ: ೧೩ಎಚ್‌ಎನ್‌ಎಲ್೧ | Kannada Prabha

ಸಾರಾಂಶ

ಸ್ವಾರ್ಥ ಸಾಧನೆಗೆ ಮನಸ್ಸು ಒಡೆಯುವರನ್ನು ಭಗವಂತ ಸಹ ಕ್ಷಮಿಸಲಾರ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಹಾನಗಲ್ಲ: ಜಾಗತೀಕರಣದ ಬದಲಿಗೆ ಜಾತೀಕರಣದ ಕಡೆಗೆ ಸಮಾಜ ಕೊಂಡೊಯ್ಯುವ ಷಡ್ಯಂತ್ರ ನಡೆದಿದೆ. ಸ್ವಾರ್ಥ ಸಾಧನೆಗೆ ಮನಸ್ಸು ಒಡೆಯುವರನ್ನು ಭಗವಂತ ಸಹ ಕ್ಷಮಿಸಲಾರ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ತಾಲೂಕಿನ ಆಡೂರು ಗ್ರಾಮದ ಮಾಲತೇಶ ದೇವಸ್ಥಾನದಲ್ಲಿ ನಡೆದ ಜಿಪಂ ಮಾಜಿ ಸದಸ್ಯ ಎನ್.ಬಿ. ಪೂಜಾರ ಅವರ ಮಾಲತೇಶ ವಿಜಯ ಪುಸ್ತಕ ಬಿಡುಗಡೆ ಮತ್ತು ಪಾಕ ಶಾಲೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಹಾನಗಲ್ ಮಣ್ಣಿನಲ್ಲಿ ವಿಶಿಷ್ಟ ಶಕ್ತಿ ಅಡಗಿದೆ. ಅಂದಿನ ದಿನಗಳಲ್ಲಿಯೇ ಕುಮಾರ ಸ್ವಾಮೀಜಿ ಸಮಾನತೆ ಸಾರಿದ್ದಾರೆ. ಇಂಥ ಮಹಾನ್ ಪುರುಷನ ನಾಡಿನಲ್ಲಿ ಸಾಮರಸ್ಯ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಮಾತನಾಡಿ, ದಿನಗಳು ಕಳೆದಂತೆ ಆಧುನಿಕತೆಯ ಪ್ರಭಾವ ನಮ್ಮೆಲ್ಲರ ಮೇಲಾಗುತ್ತಿದೆ. ಸಂಸ್ಕೃತಿ, ಸಂಪ್ರದಾಯ ನಿಧಾನವಾಗಿ ನಶಿಸಿ ಹೋಗುತ್ತಿದೆ. ವಿದೇಶಿ ಸಂಸ್ಕೃತಿ ಮೋಡಿ ಮಾಡುತ್ತಿದೆ. ನಮ್ಮತನ ಕಳೆದುಕೊಳ್ಳುತ್ತಿದ್ದೇವೆ ಎಂದು ಆತಂಕ ವ್ಯಕ್ತಪಡಿಸಿದ ಅವರು ದ್ವೇಷ, ಅಸೂಯೆ ಬದಿಗೊತ್ತಿ ಪ್ರೀತಿಯಿಂದ ಎಲ್ಲರೂ ಜೊತೆಗೂಡಿ ಉತ್ತಮ ಜೀವನ ಸಾಗಿಸುವ ಸಂಕಲ್ಪ ತೊಡಬೇಕಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಹುಬ್ಬಳ್ಳಿ ಮೂರುಸಾವಿರ ಮಠದ ಡಾ. ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ಸಾಹಿತ್ಯದಲ್ಲಿ ಆಸಕ್ತಿ ಕಳೆದುಕೊಳ್ಳುತ್ತಿದ್ದೇವೆ. ಅಂತರ್ಜಾಲದ ಬಳಕೆಯಿಂದಾಗಿ ಆಂತರಿಕವಾಗಿ ಬಳಲುತ್ತಿದ್ದೇವೆ ಎಂದು ಹೇಳಿದ ಅವರು ಎಲ್ಲರೂ ಅರಿತು, ಬೆರೆತು ಒಂದಾಗಿ ಬಾಳಿದರಷ್ಟೇ ಚೆಂದ ಎಂದರು.

ಹಾವೇರಿಯ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಅಕ್ಕಿಆಲೂರಿನ ವಿರಕ್ತಮಠದ ಶಿವಬಸವ ಸ್ವಾಮೀಜಿ, ಕೂಡಲದ ಗುರುನಂಜೇಶ್ವರ ಮಠದ ಗುರುಮಹೇಶ್ವರ ಸ್ವಾಮೀಜಿ, ಹೋತನಹಳ್ಳಿಯ ಸಿದ್ದಾರೂಢ ಮಠದ ಸದ್ಗುರು ಶಂಕರಾನಂದ ಸ್ವಾಮೀಜಿ, ಹೇರೂರಿನ ಗುಬ್ಬಿ ನಂಜುಂಡೇಶ್ವರ ಮಠದ ನಂಜುಂಡ ಪಂಡಿತಾರಾಧ್ಯ ಸ್ವಾಮೀಜಿ ಸಮ್ಮುಖ ವಹಿಸಿದ್ದರು.

ಹಾವೇರಿಯ ಮಾಜಿ ಶಾಸಕ ಶಿವರಾಜ ಸಜ್ಜನರ, ಜಿಪಂ ಮಾಜಿ ಸದಸ್ಯರಾದ ಎನ್.ಬಿ. ಪೂಜಾರ, ಪದ್ಮನಾಭ ಕುಂದಾಪೂರ, ಬಸವರಾಜ ಹಾದಿಮನಿ, ಮಾಲತೇಶ ಸೊಪ್ಪಿನ, ಸಾಹಿತಿ ಸಂಕಮ್ಮ ಸಂಕಣ್ಣನವರ, ಡಾ. ಕೆ.ಎಸ್. ಕುಲಕರ್ಣಿ, ಸಿದ್ದಲಿಂಗಪ್ಪ ಶಂಕರಿಕೊಪ್ಪ, ಶಿವಬಸಪ್ಪ ಪೂಜಾರ, ಚಂದ್ರಪ್ಪ ನಿಕ್ಕಂ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ
ನಾಳೆ ಸಿದ್ದರಾಮಯ್ಯ ಬಜೆಟ್‌ : ವಲಯವಾರು ನಿರೀಕ್ಷೆಗಳೇನು?