ಕನ್ನಡಪ್ರಭ ವಾರ್ತೆ ನಾಪೋಕ್ಲು
ನಾಪೋಕ್ಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ಮೇಲೆ ದ್ವೇಷ ರಾಜಕೀಯ ಮಾಡುತ್ತಿದೆ. ರಾಜ್ಯದ ಜನತೆ ಎಲ್ಲವನ್ನು ಕೂಡ ಗಮನಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಿ ಚುನಾವಣೆಯಲ್ಲಿ ನನ್ನನ್ನು ಹಣಿಯಲು ಸಿದ್ದರಾಮಯ್ಯ ಷಡ್ಯಂತ್ರ ಮಾಡಿದ್ದಾರೆ. ಮರ ಕಳ್ಳತನ ಪ್ರಕರಣದಲ್ಲಿ ಅಮಾನತು ಆದ ಅರಣ್ಯ ಅಧಿಕಾರಿಗಳನ್ನು ತನಿಖೆಗೆ ಬಿಟ್ಟು ತಮ್ಮ ವಿಕ್ರಂಸಿಂಹನನ್ನು ವಿಚಾರಣೆ ಮಾಡುತ್ತಿದ್ದಾರೆ. ಎಫ್ಐಆರ್ನಲ್ಲಿ ಸಹೋದರನ ಹೆಸರು ಇಲ್ಲದಿದ್ದರೂ ಆತನನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ದೂರಿದರು.
ಸಚಿವ ಮಧು ಬಂಗಾರಪ್ಪ ವಿರುದ್ಧ 6.50 ಕೋಟಿ ರು. ಚೆಕ್ ಅಮಾನ್ಯ ಪ್ರಕರಣದಲ್ಲಿ ಶಿಕ್ಷೆ ಆಗಿದೆ. ಸಚಿವ ಮಧು ತಪ್ಪಿತಸ್ಥ ಅಂಥ ಕೋರ್ಟ್ ಹೇಳಿದೆ. ಈ ಪ್ರಕರಣದ ಗಮನ ಬೇರೆಡೆ ಸೆಳೆಯಲು ನನ್ನ ತಮ್ಮನ ಪ್ರಕರಣಕ್ಕೆ ಸರ್ಕಾರ ಗಮನ ನೀಡಿದೆ ಎಂದು ಸಂಸದ ಹೇಳಿದರು.