ಮದ್ದೂರಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆ

KannadaprabhaNewsNetwork |  
Published : Feb 25, 2024, 01:47 AM IST
24ಕೆಎಂಎನ್ ಡಿ30 | Kannada Prabha

ಸಾರಾಂಶ

ತಾಲೂಕು ಹಾಗೂ ಪಟ್ಟಣದಾದ್ಯಂತ ಸಂಚರಿಸಿದ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಗೆ ಶಾಸಕ ಕೆ.ಎಂ.ಉದಯ್ ಬೀಳ್ಕೊಟ್ಟರು.ತಾಲೂಕಿನಾದ್ಯಂತ ಯಶಸ್ವಿಯಾಗಿ ಯಾತ್ರೆ ಮುಗಿಸಿ ಪಟ್ಟಣದ ಶಿವಪುರದ ಧ್ವಜಾ ಸತ್ಯಾಗ್ರಹದ ಬಳಿ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ತಾಲೂಕು ಆಡಳಿತ ವತಿಯಿಂದ ಗೊರವ ಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕು ಹಾಗೂ ಪಟ್ಟಣದಾದ್ಯಂತ ಸಂಚರಿಸಿದ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಗೆ ಶಾಸಕ ಕೆ.ಎಂ.ಉದಯ್ ಬೀಳ್ಕೊಟ್ಟರು.ತಾಲೂಕಿನಾದ್ಯಂತ ಯಶಸ್ವಿಯಾಗಿ ಯಾತ್ರೆ ಮುಗಿಸಿ ಪಟ್ಟಣದ ಶಿವಪುರದ ಧ್ವಜಾ ಸತ್ಯಾಗ್ರಹದ ಬಳಿ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ತಾಲೂಕು ಆಡಳಿತ ವತಿಯಿಂದ ಗೊರವ ಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಯಿತು. ಈ ವೇಳೆ ಮಾತನಾಡಿದ ಶಾಸಕ ಕೆ.ಎಂ.ಉದಯ್ , ಡಾ.ಬಿ.ಆರ್ .ಅಂಬೇಡ್ಕರ್ ದೇಶದ್ದೆ ಉತ್ತಮ ಸಂವಿಧಾನ ನೀಡಿದ್ದು, ಮ್ಮ ಜನರಲ್ಲಿ ಅರಿವು ಮೂಡಿಸಲು ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಯನ್ನು ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದರು. ಸಾಮಾನತೆ, ವ್ಯಕ್ತಿ ಸ್ವಾತಂತ್ರ್ಯ, ಬ್ರಾತೃತ್ವ, ಜಾತ್ಯಾತೀತ ತತ್ವಗಳ ಮೂಲ ಆಶಯಗಳನ್ನು ಒಳಗೊಂಡ ನಮ್ಮ ಸಂವಿಧಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶ ನಮ್ಮ ಸರ್ಕಾರದ್ದಾಗಿದೆ. ಸಂವಿಧಾನವೇ ಭಾರತೀಯರ ಶ್ರೇಷ್ಠ ಗ್ರಂಥ. ಬದುಕಿನ ಮೌಲ್ಯಗಳನ್ನು ಸಂವಿಧಾನ ಬೋಧಿಸುವುದಕ್ಕಿಂತ ಬೇರೆ ಯಾವ ಗ್ರಂಥಗಳೂ ಬೋಧಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಪಟ್ಟಣದಾದ್ಯಂತ ಜಾಥಾ ಸಂಚಾರ:

ಪಟ್ಟಣದ ಪುರಸಭೆಯಿಂದ ಪ್ರಾರಂಭವಾಗಿ ಸಂವಿಧಾನ ಜಾಗೃತಿ ಜಾಥಾದ ರಥಯಾತ್ರೆ ವಿವಿಧ ಬಡಾವಣೆಗಳಲ್ಲಿ ಸಂಚರಿಸಿತು. ಈ ವೇಳೆ ಸಂವಿಧಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಮೈಸೂರು-ಬೆಂಗಳೂರು ಮುಖ್ಯರಸ್ತೆಯಲ್ಲಿ ಸಾಗಿದ ಜಾಗೃತಿ ರಥವು ಚನ್ನೇಗೌಡನದೊಡ್ಡಿ, ಲೀಲಾವತಿ ಬಡಾವಣೆ, ವಿ.ವಿ ನಗರ, ಕಾವೇರಿ ನಗರ, ಸಿದ್ದಾರ್ಥ ನಗರ, ಹಳೇ ಎಂ.ಸಿ ರಸ್ತೆ, ಎಸ್.ಬಿ.ಎಂ ರಸ್ತೆ, ದೊಡ್ಡಿ ಬೀದಿ ಗಳಲ್ಲಿ ಸಂಚರಿಸಿ ಕೊಲ್ಲಿಸರ್ಕಲ್ ಮೂಲಕ ಶಿವಪುರದಲ್ಲಿರುವ ಸತ್ಯಾಗ್ರಹ ಸೌಧವನ್ನು ತಲುಪಿತು. ಜಾಥಾ ಸಂಚರಿಸಿದ ವ್ಯಾಪ್ತಿಯಲ್ಲಿನ ಶಾಲಾ ಮಕ್ಕಳಿಗೆ ರಸಪ್ರಶ್ನೆ, ಪ್ರಬಂಧ, ಚರ್ಚಾ ಸ್ಪರ್ಧೆಗಳನ್ನು ಏರ್ಪಡಿಸಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪುರಸಭೆ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು. ಜಾಥಾ ಸಂಚರಿಸಿದ ಪಟ್ಟಣದ ವ್ಯಾಪ್ತಿಯಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯಿತು. ಸಾರ್ವಜನಿಕರಿಗೆ ಸಂವಿಧಾನದ ಮಹತ್ವ, ಪ್ರಜೆಗಳಿಗೆ ನೀಡಿರುವ ಹಕ್ಕುಗಳು ಹಾಗೂ ಜವಾಬ್ಧಾರಿಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರಿವು ಮೂಡಿಸಲಾಯಿತು. ಜಾಥಾ ಸಾಗುವ ದಾರಿಯುದ್ದಕ್ಕೂವಿವಿಧ ಕಲಾ ತಂಡಗಳಿಂದ ಪೂಜಾ ಕುಣಿತ, ಡೊಳ್ಳು ಕುಣಿತ, ಕಂಸಾಳೆ ನೃತ್, ಕುಂಭಮೇಳಗಳು ಮತ್ತು ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ವಾದ್ಯಗಳು ಜಾಥಾಕ್ಕೆ ಮೆರುಗು ತಂದವು. ಶಾಲಾ ಪುಟಾಣಿಗಳ ರಾಷ್ಟ್ರ ನಾಯಕರ ವೇಷಭೂಷಣವು ಎಲ್ಲರ ಗಮನ ಸೆಳೆಯುತ್ತಿದ್ದು ವಿಶೇಷವಾಗಿತ್ತು. ಜಾಥಾ ಸಂಚರಿಸುವ ವೇಳೆ ಪುರಸಭೆ ಅಧ್ಯಕ್ಷರು, ಪುರಸಭೆ ಅಧಿಕಾರಿಗಳು ,ಸದಸ್ಯರು,ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಮತ್ತು ಕಾಲೇಜಿನ ವಿದ್ಯಾರ್ಥಿಗಳು,ಶಿಕ್ಷಕರು ವಿವಿದ ಸಂಘ ಸಂಸ್ಥೆಯ ಪ್ರತಿನಿಧಿಗಳು, ಸಿಬ್ಬಂದಿಗಳು, ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನಕ್ಷರತೆ ಬಾಲ್ಯ ವಿವಾಹ ಕೇಸ್‌ ರದ್ದತಿಗೆ ಆಧಾರವಾಗದು: ಕೋರ್ಟ್‌
ಕೆಎಸ್‌ಡಿಎಲ್‌ನಿಂದ ₹400ನ ಮಲ್ಲಿಗೆ ಸೋಪ್‌!