ಕನ್ನಡಪ್ರಭ ವಾರ್ತೆ ಬೀದರ್
ಅವರು ಭಾನುವಾರ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಪಂ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಸವಣ್ಣನವರ ಸಂಸತ್ತಿನಲ್ಲಿ ವಿವಿಧ ಸಮಾಜದ 770 ಶರಣರಿದ್ದರು. ಮಹಿಳೆಯರ ಸಮಾನತೆಗಾಗಿಯು ಅವರು ಶ್ರಮಿಸಿದ್ದರು. ಅವರ ತತ್ವ ಸಿದ್ದಾಂತಗಳನ್ನು ಡಾ.ಅಂಬೇಡ್ಕರರು ಸಂವಿಧಾನದ ಮೂಲಕ ಜಾರಿಗೆ ತಂದು ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಮಾನವ ಸರಪಳಿ ಕಾರ್ಯಕ್ರಮ ಬಸವಣ್ಣನವರ ಅನುಭವ ಮಂಟಪದಿಂದ ಚಾಲನೆಯಾಗುತ್ತಿರುವುದು ಮತ್ತೊಂದು ವಿಶೇಷವಾಗಿದೆ ಎಂದು ಹೇಳಿದರು.ರಾಜ್ಯದಾದ್ಯಂತ 2500 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ. ಬೀದರ್ ಜಿಲ್ಲೆಯಲ್ಲಿ 45 ಕಿ.ಮೀ ಇರಲಿದ್ದು. ಇದರಲ್ಲಿ 35 ಸಾವಿರ ಜನ ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಅನೇಕ ಕನ್ನಡ ಪರ ಸಂಘಟನೆಗಳು. ವಿವಿಧ ಸಂಘ- ಸಂಸ್ಥೆಗಳು. ದಲಿತಪರ ಸಂಘಟನೆಗಳು ಮತ್ತು ಕಾರ್ಯಕ್ರಮದ ಮೆರಗು ತರಲಿರುವ ವಿವಿಧ ಶಾಲಾ ಕಾಲೇಜುಗಳಿಂದ ಆಗಮಿಸಿದ ವಿದ್ಯಾರ್ಥಿ, ವಿಧ್ಯಾರ್ಥಿನಿಯರು ಹಾಗೂ ಸಾರ್ವಜನಿಕರಿಗೆ ಅಭಿನಂದಿಸುತ್ತೇನೆ ಎಂದರು.
ಭಾರತದ ಸಂವಿಧಾನ ಜಗತ್ತಿನ ಶ್ರೇಷ್ಠ ಸಂವಿಧಾನವಾಗಿದೆ. ನಮ್ಮ ಮುಂದಿನ ಪೀಳಿಗೆಗೆ ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ, ದೇಶದ ಏಕತೆ, ಅಖಂಡತೆಯ ಬಗ್ಗೆ ತಿಳಿಸಬೇಕಿದೆ. ಭವಿಷ್ಯದ ಪ್ರಜೆಗಳು ನಮ್ಮ ಮಕ್ಕಳು ಹಿಂದು, ಮುಸ್ಲಿಂ, ಸಿಖ್, ಇಸಾಯಿ ಎಲ್ಲರೂ ಸಹೋದರರಾಗಿದ್ದಾರೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಅವರು ಎಲ್ಲರಿಗೂ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಮ್ಖಾನ್, ಅನುಭವ ಮಂಟಪದ ಅಧ್ಯಕ್ಷರಾದ ನಾಡೋಜ ಬಸವಲಿಂಗ ಪಟ್ಟದ್ದೇವರು, ಹಿರೇಮಠ ಸಂಸ್ಥಾನ ಭಾಲ್ಕಿಯ ಗುರುಬಸವ ಪಟ್ಟದ್ದೇವರು, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಸಿಇಒ ಡಾ. ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬೀದರ್ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ., ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ವಿವಿಧ ಕನ್ನಡ ಪರ ಸಂಘಟನೆಗಳು, ಸ್ವ- ಸಹಾಯ ಸಂಘಗಳು, ದಲಿತಪರ ಸಂಘಟನೆಗಳ ಮುಖಂಡರು ಪದಾಧಿಕಾರಿಗಳು, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಹಲವಾರು ಜನರು ಭಾಗವಹಿಸಿದ್ದರು.