ಕನ್ನಡಪ್ರಭ ವಾರ್ತೆ ನಂಜನಗೂಡು
ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಜೂನಿಯರ್ ಕಾಲೇಜು ಕ್ರಿಕೆಟ್ ಕ್ಲಬ್ ವತಿಯಿಂದ ಏರ್ಪಡಿಸಲಾಗಿದ್ದ ಸಂವಿಧಾನ ಕಪ್- ಕ್ರಿಕೆಟ್ ಲೀಗ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ನಂಜನಗೂಡು ಧಾರ್ಮಿಕ ಇತಿಹಾಸದ ಜೊತೆಗೆ ಕ್ರೀಡೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಖ್ಯಾತಿ ಹೊಂದಿತ್ತು. ಇತ್ತೀಚಿನ ದಿನಗಳಲ್ಲಿ ನಾಗರಿಕರು ಮತ್ತು ಯುವಕರು ದೈಹಿಕ ಕಸರತ್ತಿನ ಕ್ರೀಡೆಯಲ್ಲಿ ತೊಡಗಿಕೊಳ್ಳದೆ ಇರುವುದರಿಂದ ಕ್ರೀಡಾಪಟುಗಳ ಕೊರತೆ ಎದ್ದು ಕಾಣುತ್ತಿದೆ. ಇದೇ ರೀತಿ ಎಲ್ಲಾ ಕ್ರೀಡೆಗಳ ಪಂದ್ಯಾವಳಿಗಳ ಆಯೋಜಿಸುವ ಮೂಲಕ ನಂಜನಗೂಡಿನ ಕ್ರೀಡಾ ಇತಿಹಾಸ ಮರುಕಳಿಸುವಂತಾಗಲಿ ಎಂದು ಅವರು ಆಶಿಸಿದರು.ಆಯೋಜಕ ಚೇತನ್ ಮಾತನಾಡಿ, ಸ್ಥಳೀಯ ಕ್ರೀಡಾ ಪ್ರತಿಭೆಗಳಿಗೆ ಒಂದು ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿದ್ದು, ಪಂದ್ಯಾವಳಿಯಲ್ಲಿ ವಿವಿಧ ಜಿಲ್ಲೆಗಳಿಂದ 25 ಹೆಚ್ಚು ತಂಡಗಳು ಭಾಗಿಯಾಗಿದ್ದವು ಎಂದರು.
ವಿಶ್ವಕರ್ಮ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ನಂದಕುಮಾರ್, ತಾಪಂ ಮಾಜಿ ಉಪಾಧ್ಯಕ್ಷ ಮಹದೇವಯ್ಯ, ಮುಖಂಡರಾದ ಎಂ. ಮಾದಪ್ಪ, ಚೇತನ್, ತ್ರಿಲೋಚನ, ಮಧು, ಅಭಿ ಅವಿನಾಶ್, ಕುಮಾರಸ್ವಾಮಿ, ರಘು ಮೊದಲಾದವರು ಇದ್ದರು.