ಸವಣೂರು: ಶಿಕ್ಷಣ ಕೇವಲ ಉದ್ಯೋಗ ಪಡೆಯಲು ಸೀಮಿತವಾಗದೆ, ಉತ್ತಮ ನಾಗರಿಕರಾದಾಗ ಮಾತ್ರ ಸಂವಿಧಾನ ದಿನ ಅರ್ಥಪೂರ್ಣವಾಗಲಿದೆ ಎಂದು ತಹಸೀಲ್ದಾರ್ ರವಿಕುಮಾರ್ ಕೊರವರ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸುಭಾಸ ಮಜ್ಜಗಿ ಮಾತನಾಡಿ, ಮೇಲು, ಕೀಳು ಎಂಬ ಭೇದ-ಭಾವಗಳನ್ನು ಕಿತ್ತೊಗೆದು, ಸಮಾನತೆಯ ತತ್ವದ ಮೇಲೆ ದೇಶದ ಆಡಳಿತಯಂತ್ರ ಸಾಗಬೇಕು ಎಂಬುದು ಸಂವಿಧಾನದ ಗುರಿಯಾಗಿದೆ. ಮಕ್ಕಳು ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ದೇಶದ ಅಭಿವೃದ್ಧಿಗೆ ಕಾರಣೀಭೂತರಾಗಬೇಕು ಎಂದು ಕರೆ ನೀಡಿದರು.
ಸಂವಿಧಾನ ದಿನದ ಕುರಿತಾಗಿ ಏರ್ಪಡಿಸಿದ್ದ ಚಿತ್ರಕಲೆ, ಭಾಷಣ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ವಿಜೇತರಾದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಸಂವಿಧಾನ ಪೀಠಿಕೆಯ ಸ್ಮರಣಿಕೆ ನೀಡಿ ಗೌರವಿಸಲಾಯಿತು.ಶ್ರೀಮತಿ ಲಲಿತಾದೇವಿ ಗುರುಸಿದ್ದಪ್ಪ ಸಿಂಧೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಮಹೇಂದ್ರ ದೊಡ್ಡಮನಿ ಸಂವಿಧಾನದ ಕುರಿತು ಉಪನ್ಯಾಸ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜೀವನ್ ಪಮ್ಮಾರ, ಎಸ್ಐ ರಂಗನಾಥ ಅಂತರಗಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಫ್. ಬಾರ್ಕಿ, ಕೃಷಿ ಸಹಾಯಕ ನಿರ್ದೇಶಕಿ ಸವಿತಾ ಚಕ್ರಸಾಲಿ, ಶಿರಸ್ತೇದಾರ್ ಎಸ್.ಎಸ್. ಪಾಟೀಲ, ದಲಿತ ಮುಖಂಡರಾದ ಉಮೇಶ್ ಮೈಲಮ್ಮನವರ, ಸಿದ್ದಪ್ಪ ಬಾಲಪ್ಪನವರ, ರಂಗಣ್ಣ ಮಲ್ಲಮ್ಮನವರ, ಪ್ರವೀಣ್ ಬಾಲೆಹೊಸೂರ್, ನಾಗರಾಜ್ ಹರಿಜನ, ಮಲ್ಲೇಶ್ ಹರಿಜನ, ಕರವೇ ತಾಲೂಕಾಧ್ಯಕ್ಷ ಸುರೇಶ್ ತಳವಾರ, ರಾಘವೇಂದ್ರ ಬಾಲೆಹೊಸೂರ, ನಮ್ಮ ಕರ್ನಾಟಕ ಸೇನೆ ತಾಲೂಕಾಧ್ಯಕ್ಷ ಪರಶುರಾಮ ಈಳಗೇರ ಇದ್ದರು. ನಿಲಯ ಮೇಲ್ವಿಚಾರಕರಾದ ಶಶಿಧರ ಚರಂತಿಮಠ ಕಾರ್ಯಕ್ರಮ ನಿರೂಪಿಸಿದರು. ಸರೋಜಾ ಕುಂಬಾರ ಸ್ವಾಗತಿಸಿ, ವಂದಿಸಿದರು.