ಶ್ರೀರಂಗಪಟ್ಟಣದಲ್ಲಿ ಪ್ರಜ್ಞಾವಂತರ ವೇದಿಕೆಯಿಂದ ಸಂವಿಧಾನೋತ್ಸವ ಮೆರವಣಿಗೆ

KannadaprabhaNewsNetwork |  
Published : Nov 27, 2024, 01:02 AM IST
26ಕೆಎಂಎನ್ ಡಿ28 | Kannada Prabha

ಸಾರಾಂಶ

ದೇಶದ ಸಂವಿಧಾನ ತಿಳಿಯಲು ಪ್ರತಿ ಮನೆಯಲ್ಲಿ ಸಂವಿಧಾನ ಪುಸ್ತಕವನ್ನು ಓದಿದರೆ ಇಲ್ಲಿನ ಕಾನೂನುಗಳ ಬಗ್ಗೆ ಸುಲಭವಾಗಿ ತಿಳಿದು ಸಮಾನ ಬದುಕನ್ನು ರೂಪಿಸಿಕೊಳ್ಳಬಹುದು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಸಂವಿಧಾನ ದಿನಾಚರಣೆ ಅಂಗವಾಗಿ ಪ್ರಜ್ಞಾವಂತರ ವೇದಿಕೆಯಿಂದ ಸಂವಿಧಾನೋತ್ಸವ ಮೆರವಣಿಗೆ ಕಾರ್ಯಕ್ರಮ ನಡೆಯಿತು.

ಪಟ್ಟಣದ ಕುವೆಂಪು ವೃತ್ತದಲ್ಲಿ ವೇದಿಕೆ ಕಾರ್ಯಕರ್ತರು ಹಾಗೂ ಡಿಎಸ್‌ಎಸ್ ಮುಖಂಡರು ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಮುಖ್ಯ ಬೀದಿ ಮೂಲಕ ಅಂಬೇಡ್ಕರ್ ವೃತ್ತದ ವರೆಗೆ ಜಾಥ ನಡೆಸಿ ಸಂವಿಧಾನ ಆಶಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿದರು.

ವೇದಿಕೆ ಸಂಚಾಲಕ ವಕೀಲ ಸಿ.ಎಸ್.ವೆಂಕಟೇಶ್ ಮಾತನಾಡಿ, ದೇಶದ ಸಂವಿಧಾನ ತಿಳಿಯಲು ಪ್ರತಿ ಮನೆಯಲ್ಲಿ ಸಂವಿಧಾನ ಪುಸ್ತಕವನ್ನು ಓದಿದರೆ ಇಲ್ಲಿನ ಕಾನೂನುಗಳ ಬಗ್ಗೆ ಸುಲಭವಾಗಿ ತಿಳಿದು ಸಮಾನ ಬದುಕನ್ನು ರೂಪಿಸಿಕೊಳ್ಳಬಹುದು ಎಂದರು.

ಸಂವಿಧಾನೋತ್ಸವದ ಮೆರವಣಿಗೆ ನೇತೃತ್ವದ ವಹಿಸಿದ್ದ ವೇದಿಕೆ ಅಧ್ಯಕ್ಷ ವಕೀಲ ಸಿಎಸ್.ವೇಂಕಟೇಶ್ ವಾಹನಗಳ ಮೇಲೆ ಸಂವಿಧಾನದ ಕುರಿತ ಮಾಹಿತಿ ಪುಸ್ತಕಗಳ ಭಾವಚಿತ್ರಗಳನ್ನಿರಿಸಿ ಹೂವಿನಿಂದ ಅಲಂಕಾರಗೊಳಿಸಿದರು. ಟಮಟೆ ವಾದ್ಯಗಳೊಂದಿಗೆ ವೇದಿಕೆ ಸದಸ್ಯರು ಇತರ ಜನಪ್ರತಿನಿಧಿಗಳು ಭಾಗವಹಿಸಿ, ರಸ್ತೆಯುದ್ದಕ್ಕೂ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರಕ್ಕೆ ಸಾರ್ವಜನಿಕರಿಂದ ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ಬೌದ್ದ ಮಹಾಸಭಾ ಅಧ್ಯಕ್ಷ ಕೆ.ಟಿ ರಂಗಪ್ಪ, ಬಸವಣ್ಣ, ಮುಸ್ಮೀಂ ಸೌಹಾರ್ಥ ವೇದಿಕೆ ಎಜಾಜ್ ಪಾಷ, ಪ್ರಜ್ಞಾವಂತರ ವೇದಿಕೆ ಕಾರ್ಯದರ್ಶಿ ಚಿಕ್ಕ ತಿಮ್ಮೆಗೌಡ, ಡಿಎಸ್‌ಎಸ್ ಮುಖಂಡರಾದ ರವಿಚಂದ್ರ, ಪಾಂಡು, ಚಂದ್ರಶೇಖರ್ ಸೇರಿದಂತೆ ಇತರರು ಮೆರವಣಿಗೆಯಲ್ಲಿದ್ದರು.ಸಿ.ಬಿ.ಚಲುವೇಗೌಡರಿಗೆ ಚಿನ್ನ, ಬೆಳ್ಳಿ ಪದಕ

ಪಾಂಡವಪುರ: ತಾಲೂಕಿನ ಚಿನಕುರಳಿ ಗ್ರಾಮದ ಸಿ.ಬಿ.ಚಲುವೇಗೌಡರಿಗೆ ಅಂತರ ಜಿಲ್ಲಾ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಲಭಿಸಿದೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಹಿರಿಯರ (75 ವರ್ಷ ಮೇಲ್ಪಟ್ಟ ವಿಭಾಗ) ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದ ಚಲುವೇಗೌಡರು ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನ ಮತ್ತು ತಟ್ಟೆ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

PREV

Recommended Stories

ಮಾಧ್ಯಮ ಸಾಧಕರಿಗೆ ನ್ಯೂ ಇಂಡಿಯನ್‌ ಟೈಮ್ಸ್‌ ಪ್ರಶಸ್ತಿ
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌