ಶಿರಾಳಕೊಪ್ಪ: ಸ್ವಾತಂತ್ರ್ಯ ನಂತರ ಭಾರತದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಪ್ರತಿಯೊಬ್ಬ ಪ್ರಜೆಗಳು ತಮ್ಮ ಮೂಲಭೂತ ಹಕ್ಕುಗಳನ್ನು ಹೊಂದಲು ಸಂವಿಧಾನ ಸಹಾಯಕವಾಗಿದೆ. ನಮ್ಮ ಸಂವಿಧಾನವನ್ನು ರಚಿಸಿ, ಜಾರಿಗೆ ತಂದ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದು ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಡೊಳ್ಳೆ ಹೇಳಿದರು.
ಸಂವಿಧಾನದಲ್ಲಿರುವ 5 ಅಂಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಸ್ವತಂತ್ರ ಭಾರತಕ್ಕೆ ಹೆಮ್ಮೆ ತರುವಂತಹ ಕಾರ್ಯ ಮಾಡಬೇಕಿದೆ. ಮುಂಬರುವ ದಿನಗಳಲ್ಲಿ ಪುರಸಭೆ ಸದಸ್ಯರು, ನಮ್ಮ ನೆಚ್ಚಿನ ಶಾಸಕರು, ರಾಜ್ಯ ಸಚಿವರ ಸಹಕಾರ ಪಡೆದು ಒಳಾಂಗಣ ಕ್ರೀಡಾಂಗಣ ನಿರ್ಮಿಸಿ, ಉತ್ತಮ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಹಕಾರಿ ಆಗುವಂತಹ ಕ್ರೀಡಾಂಗಣವಾಗಿ ರೂಪಿಸಲಾಗುವುದು ಎಂದರು.
ಪ್ರಾರಂಭದಲ್ಲಿ ಪಟ್ಟಣದ ಎಲ್ಲ ಶಾಲಾ- ಕಾಲೇಜು ವಿದ್ಯಾರ್ಥಿಗಳು ಪ್ರಭಾತ್ ಪೇರಿಯಲ್ಲಿ ಭಾಗವಹಿಸಿದ್ದರು. ಪ್ರಾಥಮಿಕ ಶಾಲೆ ಮಕ್ಕಳು ದೇಶದ ಮಹಾನ್ ನಾಯಕರ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಭಾಗವಹಿಸಿ ವಿಶೇಷ ಮೆರಗನ್ನು ತಂದರು.ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರು, ಸಿಬ್ಬಂದಿ, ಎಲ್ಲಾ ಶಾಲೆಗಳ ಶಿಕ್ಷಕರು ಹಾಗೂ ಜನತೆ ಭಾಗವಹಿಸಿದ್ದರು. ಪುರಸಭೆ ಸಿಬ್ಬಂದಿ ಗಜೇಂದ್ರ ವಂದಿಸಿದರು.
ಶಿರಾಳಕೊಪ್ಪ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮುಖ್ಯಾಧಿಕಾರಿ ಹೇಮಂತ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.