ಪಟ್ಟಣದ ಜೆಸಿಬಿಎಂ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ, ಕಾನೂನು ಅರಿವು ನೆರವು
ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು. ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಹೊಸ ಶಕೆ ಆರಂಭಗೊಂಡಿತು. ಸಂವಿಧಾನ ದೇಶದ ಮೂಲಭೂತ ಕಾನೂನು ಎಂದು ವಕೀಲ ಕೆ.ಆರ್.ಸುರೇಶ್ ಹೇಳಿದರು.
ಪಟ್ಟಣದ ಜೆಸಿಬಿಎಂ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಆಶ್ರಯದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು. ಸಂವಿಧಾನ ಸರ್ಕಾರದ ಅಧಿಕಾರಗಳು, ಮಿತಿ, ನಾಗರಿಕ ಹಕ್ಕು, ಕರ್ತವ್ಯಗಳನ್ನು ಒಳಗೊಂಡಿದೆ. ನಮ್ಮ ದೇಶದಲ್ಲಿ ಜಾರಿಯಲ್ಲಿರುವ ಆಡಳಿತ, ನ್ಯಾಯಾಂಗ ವ್ಯವಸ್ಥೆ ಎಲ್ಲಾ ಕಾನೂನುಗಳಿಗೂ ಸಂವಿಧಾನವೇ ಮೂಲ.ಭಾರತದ ಸಂವಿಧಾನ ದಿನ ಅಪಾರ ಮಹತ್ವ ಹೊಂದಿದೆ. ನಮ್ಮ ಸಂವಿಧಾನ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ನ್ಯಾಯ, ಸ್ವಾತಂತ್ರ್ಯ ನೀಡುತ್ತದೆ. ಭ್ರಾತೃತ್ವ ಮೌಲ್ಯಗಳನ್ನು ಉತ್ತೇಜಿಸುತ್ತದೆ. 70 ವರ್ಷಗಳ ಕಾಲ ವಿವಿಧ ಸಂಸ್ಕೃತಿ, ವಿವಿಧ ಭಾಷೆ, ಜನಾಂಗಗಳೊಂದಿಗೆ ಸಾಮರಸ್ಯ ಕಾಪಾಡಲು ಸಂವಿಧಾನ ದೇಶದ ಏಕತೆ ಬೆನ್ನೆಲುಬಾಗಿದೆ.
ರಾಷ್ಟ್ರಧ್ವಜ, ರಾಷ್ಟ್ರಗೀತೆ ಗೌರವಿಸುವ ಜೊತೆಗೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಸ್ಮರಿಸಿ ಅವರ ಆದರ್ಶ ಗಳನ್ನು ಪಾಲಿಸಬೇಕು. ರಾಷ್ಟ್ರ ರಕ್ಷಣೆಗೆ ಸೇವೆ ಸಲ್ಲಿಸಲು ಮುಂದಾಗಬೇಕು. ದೇಶದ ಏಕತೆ, ಸಮಗ್ರತೆಗೆ ಪಣತೊಡಬೇಕಿದೆ. ಸಂವಿಧಾನ, ಕಾನೂನನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದರು.
27 ಶ್ರೀ ಚಿತ್ರ 1-