ಕನ್ನಡಪ್ರಭ ವಾರ್ತೆ ಕಾರಟಗಿ
ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಭಾನುವಾರ ನಡೆದ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.
ಸಮಾಜ ಸುಧಾರಕ, ಶಿಕ್ಷಣ ತಜ್ಞ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞರಾಗಿ ದೇಶಕ್ಕೆ ವಿಶ್ವವೇ ಮೆಚ್ಚುವಂತಹ ಸಂವಿಧಾನ ನೀಡಿದರು. ನಮ್ಮ ರಾಷ್ಟ್ರ ಕಂಡ ಶ್ರೇಷ್ಠ ನಾಯಕರಲ್ಲಿ ಅಂಬೇಡ್ಕರ್ ಒಬ್ಬರಾಗಿದ್ದಾರೆ. ಅವರ ವಿಚಾರಧಾರೆಗಳು, ತತ್ವಾದರ್ಶಗಳು ಸುಂದರ ಸಮಾಜ ನಿರ್ಮಾಣಕ್ಕೆ ಇಂದಿಗೂ ಪ್ರಸ್ತುತವಾಗಿವೆ. ಭಾರತೀಯರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನ ರಚನೆಯ ಹಿಂದಿನ ಬಹುದೊಡ್ಡ ಶಕ್ತಿಯೆಂದರೆ ಅದು ಅಂಬೇಡ್ಕರ್. ಅಂಥಹ ಮಹಾನ್ ವ್ಯಕ್ತಿ ನಮ್ಮ ನಡುವೆ ಆಗಿ ಹೋಗಿದ್ದಾರೆ ಎನ್ನುವುದೇ ಶತಕೋಟಿ ಭಾರತೀಯರಿಗೆ ಸ್ಪೂರ್ತಿಯ ವಿಚಾರ ಎಂದರು.ನಂತರ ಉಪತಹಸೀಲ್ದಾರ ವಿಶ್ವೇಶ್ವರಯ್ಯಸ್ವಾಮಿ ಸಾಲಿಮಠ ಮಾತನಾಡಿ, ಸಮಾಜದ ಎಲ್ಲ ಜನರ ಸಮಾನತೆಗಾಗಿ ಜಾತಿ ಅಡೆತಡೆಗಳನ್ನು ಕೆಡವಲು, ದೀನ ದಲಿತರಿಗೆ ಶಿಕ್ಷಣ ತಲುಪುವಂತೆ ಮಾಡಲು ಅವಿರತ ಶ್ರಮಿಸಿದರು ಎಂದರು.
ಈ ಸಂದರ್ಭದಲ್ಲಿ ಕಿರಿಯ ಅಭಿಯಂತರ ಮಂಜುನಾಥ, ನಾಗರಾಜ ತಳವಾರ, ಅಕ್ಷತಾ ಕಮ್ಮಾರ್, ಮಲ್ಲಮ್ಮ, ಚನ್ನಬಸವಸ್ವಾಮಿ, ನಾಗೇಶ್, ಪವನ್ ಕುಮಾರ್, ರಾಮಣ್ಣ, ಹನುಮೇಶ ವಿವಿಧ ಸಂಘಟನೆಗಳ ಯಲ್ಲಪ್ಪ ಕಟ್ಟಿಮನಿ, ಮೌನೇಶ ಜಮದಗ್ನಿ, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇತರರಿದ್ದರು.
ಶಾಲೆಯ ಮುಖ್ಯಗುರು ಅಮರೇಶ ಪಾಟೀಲ್ ಮಾತನಾಡಿ, ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠ ಗ್ರಂಥ ಎಂದು ಹೆಗ್ಗಳಿಕೆ ಪಡೆದಿರುವ ನಮ್ಮ ಸಂವಿಧಾನವನ್ನುಅಂಬೇಡ್ಕರ್ ರಚಿಸಿದ್ದಾರೆ. ಅವರೊಬ್ಬ ವೈಜ್ಞಾನಿಕ ಚಿಂತಕ, ರಾಜಕೀಯ ಮುತ್ಸದ್ದಿ, ಕಾನೂನು ಮತ್ತು ಆರ್ಥಿಕ ತಜ್ಞರಾಗಿದ್ದಾರೆ. ಅವರು ತೋರಿದ ಸಾಮಾಜಿಕ ಮಾರ್ಗದರ್ಶನಗಳು ಇಂದು ಆಧುನಿಕ ಭಾರತ ನಿರ್ಮಾಣದಲ್ಲಿ ಸಹಕಾರಿಯಾಗಿವೆ. ಸಾಮಾಜಿಕ ತಾರತಮ್ಯ ನಿವಾರಣೆಗೆ ಶಿಕ್ಷಣವೇ ಉತ್ತರ ಎಂಬುದು ಅವರ ವೇದವಾಕ್ಯವಾಗಿತ್ತು ಎಂದರು.