ಸಂವಿಧಾನ ಪ್ರತಿ ನಾಗರಿಕನ ದಾರಿದೀಪ: ತಹಸೀಲ್ದಾರ್‌ ಪ್ರಕಾಶ

KannadaprabhaNewsNetwork |  
Published : Nov 27, 2024, 01:00 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಮಂಗಳವಾರ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಮಂಗಳವಾರ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು.

ಈ ವೇಳೆ ತಹಸೀಲ್ದಾರ್ ಪ್ರಕಾಶ ಸಿಂದಗಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚಿಸಿ, ನ.261949ರಂದು ದೇಶಕ್ಕೆ ಕೊಡುಗೆಯಾಗಿ ನೀಡಿದರು. ಆ ದಿನವನ್ನ ಸಂವಿಧಾನ ಸಮರ್ಪಣಾ ದಿನವಾಗಿ ಆಚರಿಸಲಾಗುತ್ತಿದೆ. ದೇಶದ ಪ್ರತಿಯೊಬ್ಬ ಪ್ರಜೆಗೆ ಸಂವಿಧಾನ ದಾರಿದೀಪ. ಕಾನೂನು, ನ್ಯಾಯ, ನೀತಿ, ಸಮಾನತೆ, ಸಹಬಾಳ್ವೆ ತತ್ವಗಳ ತಳಹದಿಯ ಮೇಲೆ ನಿಂತಿದ್ದು, ಎಲ್ಲರೂ ಸಂವಿಧಾನವನ್ನು ಗೌರವಿಸಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅರುಣ ಕೋರವಾರ ವಿಶೇಷ ಉಪನ್ಯಾಸ ನೀಡಿದರು. ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ತಾಲ್ಲೂಕು ಆಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಹಾಗೂ ಸಂವಿಧಾನ ಪೀಠಿಕೆಗೆ ಹೂವಿನ ಹಾರಹಾಕಿ ಗೌರವ ಸಲ್ಲಿಸಿದರು. ಅಲ್ಲದೇ, ಸಂವಿಧಾನ ಪೀಠಿಕೆ ಬೋಧಿಸಿ ಸಂವಿಧಾನ ಸಮರ್ಪಣಾ ದಿನ ಆಚರಿಸಿದರು.

ಈ ವೇಳೆ ಪ.ಪಂ ಅಧ್ಯಕ್ಷರ ಪ್ರತಿನಿಧಿಯಾದ ಬಸವರಾಜ ದೇವಣಗಾಂವ, ಸದಸ್ಯರಾದ ಕಾಸುಗೌಡ ಬಿರಾದಾರ, ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ, ದಲಿತ ಸಂಘಟನೆಗಳ ಮುಖಂಡರಾದ ರಾವುತ್ ತಳಕೇರಿ, ಕಾಶೀನಾಥ ತಳಕೇರಿ, ಜಾನು ಗುಡಿಮನಿ, ಬಸವರಾಜ ತಳಕೇರಿ, ಯುವ ಮುಖಂಡರಾದ ಮುನೀರ್ ಅಹ್ಮದ್ ಮಳಖೇಡ, ವಿರೇಶ ಕುದುರಿ, ರಾಘವೇಂದ್ರ ಗುಡಿಮನಿ ಸೇರಿದಂತೆ ತಹಸೀಲ್ದಾರ್‌, ಪ.ಪಂ, ಪೊಲೀಸ್‌, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಘಟನೆಗಳ ಮುಖಂಡರು ಹಾಜರಿದ್ದರು. ಕಂದಾಯ ಇಲಾಖೆ ಶಿರಸ್ತೇದಾರ ಸುರೇಶ ಮ್ಯಾಗೇರಿ ಸ್ವಾಗತಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ