ಸರ್ವರಿಗೂ ಸಮಾನತೆ ಕಲ್ಪಿಸಿದ ಸಂವಿಧಾನ: ಆಹಾರ ಇಲಾಖೆಯ ಮಂಟೇಸ್ವಾಮಿ

KannadaprabhaNewsNetwork |  
Published : Jul 05, 2024, 12:51 AM IST
ತುಮಕೂರುವಿವಿ ಸ್ನಾತಕೋತ್ತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳು ಗುರುವಾರ ಆಯೋಜಿಸಿದ್ದ ‘ಸಂವಿಧಾನ ಪೀಠಿಕೆ ಫಲಕಗಳ ಅನಾವರಣ’ಕಾರ್ಯಕ್ರಮವನ್ನುಆಹಾರ ಮತ್ತು ನಾಗರಿಕ ಸರಬರಾಜುಇಲಾಖೆಯಜಂಟಿ ನಿರ್ದೇಶಕ ಮಂಟೇಸ್ವಾಮಿ ಉದ್ಘಾಟಿಸಿದರು. ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಪ್ರೊ.ಪ್ರಸನ್ನಕುಮಾರ್ ಕೆ., ದೇವರಾಜ್, ಪ್ರೊ.ಕೇಶವ, ಪ್ರೊ.ರಮೇಶ್ ಬಿ., ಪ್ರೊ. ಬಸವರಾಜ ಜಿ., ಸುರೇಶ್ ಜಿ. ಆರ್.ಹಾಗೂ ಇತರರುಇದ್ದಾರೆ. | Kannada Prabha

ಸಾರಾಂಶ

ಪ್ರಪಂಚದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಎಲ್ಲಾ ವಿಧಾನಗಳಿಂದಲೂ ಸಮಾನತೆಯನ್ನು ಸಾರುವ ಸರ್ವ ಶ್ರೇಷ್ಠ ಸಂವಿಧಾನವೆಂದರೆ ಭಾರತದ ಸಂವಿಧಾನ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಹೇಳಿದರು. ತುಮಕೂರಿನಲ್ಲಿ ‘ಸಂವಿಧಾನ ಪೀಠಿಕೆ ಫಲಕಗಳ ಅನಾವರಣ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನ ಪೀಠಿಕೆ ಫಲಕಗಳ ಅನಾವರಣ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ತುಮಕೂರು

ಪ್ರಪಂಚದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಎಲ್ಲಾ ವಿಧಾನಗಳಿಂದಲೂ ಸಮಾನತೆಯನ್ನು ಸಾರುವ ಸರ್ವ ಶ್ರೇಷ್ಠ ಸಂವಿಧಾನವೆಂದರೆ ಭಾರತದ ಸಂವಿಧಾನ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಹೇಳಿದರು.

ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪುರುಷ ಮತ್ತು ಮಹಿಳಾ ವಿದ್ಯಾರ್ಥಿನಿಲಯಗಳು ಗುರುವಾರ ಆಯೋಜಿಸಿದ್ದ ‘ಸಂವಿಧಾನ ಪೀಠಿಕೆ ಫಲಕಗಳ ಅನಾವರಣ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅನ್ಯಾಯಕ್ಕೆ ಒಳಪಟ್ಟ ನಿಕೃಷ್ಠ ವರ್ಗಗಳಿಗೆ ಸಮಾನತೆ ಸಿಗಬೇಕು, ಸರ್ವರಿಗೂ ಸಮಾನವಾದ ನ್ಯಾಯವನ್ನು ಒದಗಿಸಿಕೊಡಬೇಕು ಎಂಬ ದೃಷ್ಟಿಯಿಂದ ಸಂವಿಧಾನ ರಚನೆಯಾಗಿದೆ. ಭಾರತದ ಸಂವಿಧಾನಕ್ಕೆ ಬಡವ ಮತ್ತು ಶ್ರೀಮಂತನೆಂಬ ಭೇದವಿಲ್ಲ ಎಂದು ಹೇಳಿದರು.

ವಿವಿ ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ಮಾತನಾಡಿ, ಅಧಿಕಾರದಲ್ಲಿರುವ ವ್ಯಕ್ತಿ ತನ್ನ ಕೆಲಸದ ಮೂಲಕ ಮಾತನಾಡಬೇಕು ಎಂಬ ಸೂಕ್ಷ್ಮವನ್ನು ಬಿ.ಆರ್. ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನ ತಿಳಿಸುತ್ತದೆ. ಸಂವಿಧಾನದ ಪೂರ್ವ ಪೀಠಿಕೆಯು ಸಂವಿಧಾನದ ಮೂಲ ಆಶಯವನ್ನು ತಿಳಿಸುತ್ತದೆ ಎಂದು ತಿಳಿಸಿದರು.

ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ. ಮಾತನಾಡಿ, ವೈವಿಧ್ಯತೆ ತುಂಬಿರುವ, ವಿಭಿನ್ನ ಜನಾಂಗ, ಧರ್ಮವಿರುವ ರಾಷ್ಟ್ರದಲ್ಲಿ ಎಲ್ಲರೂ ಸಮಾನರು ಎಂದು ಬೋಧಿಸುವ ಹಕ್ಕು ಸಂವಿಧಾನಕ್ಕೆ ಮಾತ್ರ ಇರುವುದು. ಶಾಂತಿ, ಶಿಸ್ತು, ಸುವ್ಯವಸ್ಥೆಯನ್ನು ಕಾಪಾಡಲು ಸಂವಿಧಾನವಿರಬೇಕು. ಸರ್ವರಲ್ಲೂ ಸಂವಿಧಾನದ ಅರಿವು ಮೂಡಬೇಕು ಎಂದು ಅಭಿಪ್ರಾಯಪಟ್ಟರು.

ವಿವಿಯ ಸಿಂಡಿಕೇಟ್ ಸದಸ್ಯ ದೇವರಾಜ್ ಮಾತನಾಡಿ, ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬ ಪ್ರಜೆಗೂ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದ್ದಾರೆ. ಅದನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಸೂಕ್ಷ್ಮ ವಿಚಾರ ವಿದ್ಯಾರ್ಥಿಗಳಿಗೆ ಇನ್ನೂ ತಿಳಿದಿಲ್ಲ. ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕದ ನಿರ್ದೇಶಕ ಪ್ರೊ. ಬಸವರಾಜ ಜಿ., ಐಕ್ಯೂಎಸಿ ನಿರ್ದೇಶಕ ಪ್ರೊ.ರಮೇಶ್ ಬಿ, ಕಾರ್ಯಪಾಲಕ ಅಭಿಯಂತರ ಸುರೇಶ್ ಜಿ.ಆರ್. ಅಂಬೇಡ್ಕರ್‌ ಅಧ್ಯಯನ ಪೀಠದ ನಿರ್ದೇಶಕ ಪ್ರೊ. ಕೇಶವ, ಸ್ನಾತಕೋತ್ತರ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪುರುಷ ವಿದ್ಯಾರ್ಥಿನಿಲಯದ ನಿಲಯಪಾಲಕ ಡಾ.ಕುಮಾರ್ ಬಿ., ಡಾ. ಲಕ್ಷೀರಂಗಯ್ಯ ಕೆ.ಎನ್., ಮಹಿಳಾ ವಿದ್ಯಾರ್ಥಿನಿಲಯದ ನಿಲಯ ಪಾಲಕಿ ಡಾ.ಅಶ್ವಿನಿ ಬಿ.ಜಾನೆ, ಪ್ರೊ. ಪರಶುರಾಮ ಕೆ.ಜಿ., ಡಾ. ದ್ವಾರಕಾನಾಥ್ ವಿ., ಡಾ.ನಾಗಭೂಷಣ ಬಗ್ಗನಡು ಇದ್ದರು.

PREV

Recommended Stories

ರಾಹುಲ್‌ ಗಾಂಧಿ ಧರಣಿಗೆ 4500 ಪೊಲೀಸರ ಭದ್ರತೆ
ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು