ಹೊಸಕೋಟೆ: ಕೊಳತೂರು ಗೇಟ್ ಬಳಿ ಚೆನೈ ಎಕ್ಸ್ಪ್ರೆಸ್ ಹೈವೇಗೆ ಸಂಪರ್ಕ ಕಲ್ಪಿಸಲು ಮೇಲ್ಸೇತುವೆ ನಿರ್ಮಾಣ ಮಾಡಿ ಅಂಡರ್ ಪಾಸ್ ಮೂಲಕ ಕೊಳತೂರು ಗ್ರಾಮಕ್ಕೆ ಪ್ರವೇಶ ಮಾಡಲು ಅನುವು ಮಾಡಿ ಕೊಡುವಂತೆ ಗ್ರಾಮಸ್ಥರು ಸಲ್ಲಿಸಿದ ಮನವಿ ಮೇರೆಗೆ ಸಂಸದ ಡಾ.ಕೆ ಸುಧಾಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೊಸಕೋಟೆ: ಕೊಳತೂರು ಗೇಟ್ ಬಳಿ ಚೆನೈ ಎಕ್ಸ್ಪ್ರೆಸ್ ಹೈವೇಗೆ ಸಂಪರ್ಕ ಕಲ್ಪಿಸಲು ಮೇಲ್ಸೇತುವೆ ನಿರ್ಮಾಣ ಮಾಡಿ ಅಂಡರ್ ಪಾಸ್ ಮೂಲಕ ಕೊಳತೂರು ಗ್ರಾಮಕ್ಕೆ ಪ್ರವೇಶ ಮಾಡಲು ಅನುವು ಮಾಡಿ ಕೊಡುವಂತೆ ಗ್ರಾಮಸ್ಥರು ಸಲ್ಲಿಸಿದ ಮನವಿ ಮೇರೆಗೆ ಸಂಸದ ಡಾ.ಕೆ ಸುಧಾಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೊಸಕೋಟೆಯಿಂದ ಚೆನ್ನೈ ಎಕ್ಸ್ಪ್ರೆಸ್ ಹೈವೇ ಕಾಮಗಾರಿ ನಡೆಯುತ್ತಿದ್ದು, ಕೊಳತೂರು ಜಂಕ್ಷನ್ ಬಳಿ ಈಗಾಗಲೆ ಬಟರ್ ಫ್ಲೈ ಮೇಲ್ಸೇತುವೆ ನಿರ್ಮಾಣ ಮಾಡಲಾಗಿದೆ. ಕೋಲಾರ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ-೭೫ರಲ್ಲಿ ಬರುವ ವಾಹನಗಳು ಚೆನ್ನೈ ಎಕ್ಸ್ಪ್ರೆಸ್ ಹೈವೆಗೆ ಸಂಪರ್ಕಿಸಲು ಬಟರ್ ಫ್ಲೈ ಮೇಲ್ಸೇತುವೆ ಬಳಿ ಎಡತಿರುವು ಪಡೆಯಲು ಹಾಗೂ ಹೊಸಕೋಟೆ ಕಡೆಯಿಂದ ಬಂದು ಬಲ ತಿರುವು ಪಡೆದು ಕೊಳತೂರು ಗ್ರಾಮಕ್ಕೆ ಪ್ರವೇಶಿಸುವ ವಾಹನಗಳಿಗೆ ಬಲ ತಿರುವು ಮುಚ್ಚಿ, ಹಲಸಹಳ್ಳಿ ಗೇಟ್ ಬಳಿಗೆ ತೆರಳಿ ಯೂ ತಿರುವು ಪಡೆದು ವಾಪಸ್ ಬಂದು ಕೊಳತೂರು ಗ್ರಾಮಕ್ಕೆ ಪ್ರವೇಶಿಸಲು ಯೋಜನೆ ಸಿದ್ದಪಡಿಸಿದ್ದಾರೆ. ಕೊಳತೂರು ಗೇಟ್ ಬಳಿ ಬಲ ತಿರುವು ಮುಚ್ಚುವುದರಿಂದ ಸಾವಿರಾರು ವಾಹನ ಸವಾರರು ಹಲಸಹಳ್ಳಿ ಗೇಟ್ ಬಳಿಗೆ ತೆರಳಿ ಯೂ ತಿರುವು ಪಡೆದು ವಾಪಸ್ ಬಂದು ಗ್ರಾಮಕ್ಕೆ ತೆರಳಲು ಐದಾರು ಕಿ.ಮೀ. ದೂರ ಕ್ರಮಿಸಬೇಕಾಗಿದೆ. ಇದಕ್ಕೆ 30 ಗ್ರಾಮಗಳ ರೈತರ ತೀವ್ರ ವಿರೋಧಿಸಿ ಸಂಸದರಿಗೆ ಮನವಿ ಸಲ್ಲಿಸಿದ ಪರಿಣಾಮ ಡಾ.ಸುಧಾಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಸಂಸದ ಡಾ.ಕೆ.ಸುಧಾಕರ್ ಮಾತನಾಡಿ, ಜನರಿಗೆ ಅನುಕೂಲವಾಗುವ ರೀತಿ ರಸ್ತೆ ನಿರ್ಮಾಣ ಮಾಡುವುದು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಕರ್ತವ್ಯ. ಗ್ರಾಮಸ್ಥರ ಮನವಿ ಮೇರೆಗೆ ಸ್ಥಳ ಪರಿಶೀಲಿಸಿದ್ದು, ಮುಂದಿನ ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಜನರಲ್ ಮ್ಯಾನೇಜರ್ ಜತೆ ಸಭೆ ನೆಡೆಸಿ ಗ್ರಾಮಸ್ಥರ ಅನುಕೂಲಕ್ಕೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್, ಯೋಜನಾ ಮುಖ್ಯಸ್ಥೆ ಆರ್ಚನಾ, ತಾಪಂ ಮಾಜಿ ಅಧ್ಯಕ್ಷ ಓರೋಹಳ್ಳಿ ಜಯಣ್ಣ, ತಾಲೂಕು ಬಿಜೆಪಿ ಅಧ್ಯಕ್ಷ ಸತೀಶ್ ಗೌಡ, ಗ್ರಾಮದ ಮುಖಂಡರಾದ ಲಕ್ಷ್ಮಣಮೂರ್ತಿ, ರಮೇಶ್, ಬಸವರಾಜು, ಮುನಿರಾಜು, ಕೆ.ಎಚ್.ಸುರೇಶ್, ರವಿ, ಸೋಲೂರು ಮುನಿಯಪ್ಪ, ಮುನೇಗೌಡ, ಅಶ್ವಥ್, ಬೈರೇಗೌಡ, ಭಾಸ್ಕರ್, ಪಟೇಲ್ ಶ್ರೀನಿವಾಸ್, ಶ್ರೀನಿವಾಸ್, ಶುಬ್ರಾಯಪ್ಪ, ಪ್ರವೀಣ್, ಸುನಿಲ್ ಹಾಜರಿದ್ದರು.
ಫೋಟೋ: 17 ಹೆಚ್ಎಸ್ಕೆ 3 ಮತ್ತು 4
ಹೊಸಕೋಟೆ ಬಳಿಯ ಕೊಳತೂರು ಗೇಟ್ ಬಳಿ ಅವೈಜ್ಞಾನಿಕ ರಸ್ತೆ ನಿರ್ಮಾಣದ ಬಗ್ಗೆ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಸಂಸದ ಡಾ.ಸುಧಾಕರ್ ಹಾಗೂ ಮಾಜಿ ಸಚಿವ ಎಂಟಿಬಿ ನಾಗರಾಜ್ ಸ್ಥಳ ಪರಿಶೀಲಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.