ಭಕ್ತರ ಸಂಕಲ್ಪದಂತೆ ನೂತನ ರಥ ನಿರ್ಮಾಣ: ವರರುದ್ರಮುನಿ ಶ್ರೀ

KannadaprabhaNewsNetwork |  
Published : Feb 12, 2024, 01:34 AM IST
10-ಎಂಎಸ್ಕೆ-1:  | Kannada Prabha

ಸಾರಾಂಶ

ಮಸ್ಕಿಯ ಮಲ್ಲಿಕಾರ್ಜುನ ದೇವರ ರಥೋತ್ಸವದ ಆಮಂತ್ರಣ ಪತ್ರಿಕೆ, ಪೋಸ್ಟರ್‌ನ್ನು ಮಸ್ಕಿ ಗಚ್ಚಿನ ಮಠದ ಶ್ರೀವರರುದ್ರಮುನಿ ಶಿವಾಚಾರ್ಯರು ಬಿಡುಗಡೆ ಮಾಡಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಸ್ಕಿ

ಎರಡನೇ ಶ್ರೀಶೈಲ ಎಂದೆ ಪ್ರಸಿದ್ಧವಾದ ಮಸ್ಕಿ ಮಲ್ಲಿಕಾರ್ಜುನ ಭಕ್ತರ ದೃಢವಾದ ಸಂಕಲ್ಪದಿಂದ ನೂತನ ರಥ ನಿರ್ಮಾಣವಾಗಿದೆ. ರಥೋತ್ಸವದ ಯಶಸ್ವಿಗೆ ಸಾರ್ವಜನಿಕರ ಹಾಗೂ ಭಕ್ತಾದಿಗಳ ಸಹಕಾರ ಮುಖ್ಯವಾಗಿದೆ ಎಂದು ಮಸ್ಕಿ ಗಚ್ಚಿನ ಮಠದ ಶ್ರೀವರರುದ್ರಮುನಿ ಶಿವಾಚಾರ್ಯರು ಹೇಳಿದರು.

ಪಟ್ಟಣದ ಗಚ್ಚಿನ ಮಠದಲ್ಲಿ ಮಲ್ಲಿಕಾರ್ಜುನ ದೇವರ ನೂತನ ಮಹಾರಥೋತ್ಸವದ ಆಮಂತ್ರಣ ಪತ್ರಿಕೆ ಮತ್ತು ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಶತಮಾನ ಕಂಡ ರಥ ಶಿಥಿಲವಾದ ಹಿನ್ನೆಲೆಯಲ್ಲಿ ಭಕ್ತರ ಸಹಕಾರದಿಂದ 1 ಕೋಟಿ ರು. ವೆಚ್ಚದಲ್ಲಿ ನೂತನ ರಥ ನಿರ್ಮಾಣ ಮಾಡಲಾಗಿದೆ. ಈ ರಥವು ಶತಮಾನ ಪೂರೈಸಿ ಮುಂದಿನ ಜನಾಂಗಕ್ಕೆ ನಮ್ಮ ಪರಂಪರೆಯನ್ನು ಕೊಂಡೊಯ್ಯುವ ದ್ಯೂತಕವಾಗಿದೆ ಎಂದರು.

ರಥ ನಿರ್ಮಾಣ ಸಮಿತಿಯ ಮುಖ್ಯಸ್ಥ ಹಾಗೂ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹಾಗೂ ರಥ ನಿರ್ಮಾಣ ಸಮಿತಿಯ ಪ್ರಮುಖರಾದ ಸಿದ್ಧಲಿಂಗಯ್ಯ ಹಿರೇಮಠ ಮಾತನಾಡಿದರು.

ಗ್ರಾಮದ ಮುಖಂಡರು ರಥ ನಿರ್ಮಾಣ ಸಮಿತಿಯ ಪ್ರಮುಖರುಗಳಾದ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ, ಡಾ. ಬಿ.ಎಚ್.ದಿವಟರ್, ಅಂದಾನಪ್ಪ ಗುಂಡಳ್ಳಿ, ಎಚ್.ಬಿ ಮುರಾರಿ, ಅಪ್ಪಾಜಿಗೌಡ ಪಾಟೀಲ್, ಪಂಚಾಕ್ಷರಯ್ಯ ಕಂಬಾಳಿಮಠ, ಘನಮಠದಯ್ಯ ಸಾಲಿಮಠ, ಉಮೇಶ ನಾಗಲಿಕರ್ ಮಾತನಾಡಿದರು. ವರ್ತಕರಾದ ಮಲ್ಲಪ್ಪ ಕುಡತನಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!