ರಾಮನಗರ: ಅಪಘಾತ, ಅವಘಡ ಸಂಭವಿಸಿದರೆ ಇಲ್ಲವೇ ತುರ್ತು ಚಿಕಿತ್ಸೆಗಾಗಿ ಸಾವು - ಬದುಕಿನ ನಡುವೆ ನರಳಾಡುತ್ತಿರುವ ರೋಗಿಯನ್ನು ಹೊತ್ತು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯಸರ್ಕಾರ ರಾಮನಗರ ಹೈಟೆಕ್ ಜಿಲ್ಲಾಸ್ಪತ್ರೆ ಆವರಣದಲ್ಲಿ ಅತಿ ತೀವ್ರ ನಿಗಾ ಘಟಕ (Critical Care Unit - CCU) ಸ್ಥಾಪನೆಗೆ ಗ್ರೀನ್ ಸಿಗ್ನಲ್ ನೀಡಿದೆ.
ರಾಮನಗರ, ವಿಜಯನಗರ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 5 ಪ್ರಮುಖ ಜಿಲ್ಲಾಸ್ಪತ್ರೆಗಳಲ್ಲಿ 137 ಕೋಟಿ ರುಪಾಯಿ ವೆಚ್ಚದಲ್ಲಿ ತಲಾ 50 ಹಾಸಿಗೆಯ ಅತಿ ತೀವ್ರ ನಿಗಾ ಘಟಕಗಳ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ.
ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಅನುಮೋದನೆಗೊಂಡ ಕ್ರಿಟಿಕಲ್ ಕೇರ್ ಗಳಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯ 5 ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ 6 ಆಸ್ಪತ್ರೆಗಳು ಸೇರಿದಂತೆ ಒಟ್ಟು 11 ಆಸ್ಪತ್ರೆಗಳಲ್ಲಿ ಅತಿ ತೀವ್ರ ನಿಗಾ ಘಟಕಗಳ ನಿರ್ಮಾಣಕ್ಕೆ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿತ್ತು. ಅದರಂತೆ ಆರೋಗ್ಯ ಇಲಾಖೆ ವ್ಯಾಪ್ತಿಗೆ ಬರುವ ರಾಮನಗರ ಸೇರಿದಂತೆ 5 ಜಿಲ್ಲಾಸ್ಪತ್ರೆಗಳಲ್ಲಿ 50 ಬೆಡ್ ಗಳ ಕ್ರಿಟಿಕಲ್ ಕೇರ್ ಯೂನಿಟ್ ಸ್ಥಾಪನೆಗೆ ಸಂಪುಟದಿಂದ ಆಡಳಿತಾತ್ಮಕ ಅನುಮೋದನೆ ದೊರಕಿದೆ.ಸಿಸಿಯು ಘಟಕ ನಿರ್ಮಾಣಕ್ಕೆ ಅಂದಾಜು 23 - 25 ಕೋಟಿ ರುಪಾಯಿ ವೆಚ್ಚ ತಗುಲಲಿದ್ದು, ರಾಷ್ಟ್ರೀಯ ಆರೋಗ್ಯ ಯೋಜನೆ ಅಡಿಯಲ್ಲಿ ಅನುದಾನ ದೊರೆಯಲಿದ್ದು, ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ವೆಚ್ಚವನ್ನು ಭರಿಸಲಿದೆ. ಶೀಘ್ರದಲ್ಲಿಯೇ ಸಿಸಿಯು ಘಟಕದ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸುವ ಸಾಧ್ಯತೆಗಳಿವೆ.
ಹೈಟೆಕ್ ಜಿಲ್ಲಾಸ್ಪತ್ರೆ ಕಟ್ಟಡವನ್ನು 5.20 ಎಕರೆ ಪೈಕಿ 3.50 ಎಕರೆಯಲ್ಲಿ 374 ಹಾಸಿಗೆಗಳ ಸಾಮರ್ಥ್ಯದಲ್ಲಿ ನಿರ್ಮಾಣ ಮಾಡಲಾಗಿದ್ದು, ಸದ್ಯಕ್ಕೆ 250 ಹಾಸಿಗೆಗಳ ವ್ಯವಸ್ಥೆಯನ್ನು ಹೊಂದಿದೆ. ಇದನ್ನು ಅಂದಾಜು 99.93 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ವಾಹನಗಳ ನಿಲುಗಡೆ ಮಾಡಲು ಉದ್ದೇಶಿಸಲಾಗಿದ್ದ ಆಸ್ಪತ್ರೆಗೆ ಸೇರಿದ ಉಳಿದ ಜಾಗದಲ್ಲಿಯೇ ಸಿಸಿಯು ಘಟಕ ನಿರ್ಮಾಣಕ್ಕೆ ಜಿಲ್ಲಾಧಿಕಾರಿಗಳು ಸ್ಥಳ ಗುರುತಿಸಿ ಅಂತಿಮಗೊಳಿಸಿದರು. ಹಾಗೊಂದು ವೇಳೆ ಭೂಮಿ ಲಭ್ಯತೆ ಇಲ್ಲದೆ ಹೋಗಿದ್ದರೆ ಸಿಸಿಯು ಘಟಕ ಬೇರೊಂದು ಜಿಲ್ಲೆಯ ಪಾಲಾಗುತ್ತಿತ್ತು ಎನ್ನುತ್ತಾರೆ ಆರೋಗ್ಯ ಇಲಾಖೆ ಅಧಿಕಾರಿಗಳು.
ಬಾಕ್ಸ್ ...............ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳು
ಬಾಕ್ಸ್ .............
ಬಗೆಹರಿಯದ ವೈದ್ಯಕೀಯ ಸಿಬ್ಬಂದಿ ಕೊರತೆಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತವರು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಮತ್ತು ಸಿಬ್ಬಂದಿ ಕೊರತೆ ಇದೆ. ಸುಸಜ್ಜಿತ ಆಸ್ಪತ್ರೆ ಇದ್ದರೂ, ಸಮರ್ಪಕ ವೈದ್ಯಕೀಯ ಸಿಬ್ಬಂದಿ ಇಲ್ಲದೇ ರೋಗಿಗಳು ಪರದಾಡುತ್ತಿದ್ದಾರೆ. ವೈದ್ಯರು, ನರ್ಸ್ಗಳು, ಸ್ವಚ್ಚತಾ ಸಿಬ್ಬಂದಿ ಕೊರತೆಯಿಂದ ಸರಿಯಾದ ಚಿಕಿತ್ಸೆ ಸಿಗದ ರೋಗಿಗಳು ನರಳಾಡುತ್ತಿದ್ದಾರೆ.
ನ್ಯೂರೋ ಸರ್ಜನ್, ನ್ಯೂರೊ ಫಿಜಿಷಿಯನ್, ಕಾರ್ಡಿಯಾಲಜಿ, ಫಲ್ಮೋನಾಲಜಿ ಚಿಕಿತ್ಸೆ ನೀಡಲು ವೈದ್ಯರಿಲ್ಲ. ಇನ್ನು ವೆಂಟಿಲೇಟರ್ಗಳಿದ್ದರೂ, ಅದರ ನಿರ್ವಾಹಣೆಗೆ ಬೇಕಾದ ನಿಯೋನೆಟಲಾಜಿಸ್ಟ್, ಟ್ರೈನ್ಡ್ ಸ್ಟಾಫ್ನರ್ಸ್ ಕೂಡ ಇಲ್ಲ. ಒಟ್ಟು 30 ಜನ ಸ್ಟಾಫ್ ನರ್ಸ್ ಹುದ್ದೆ ಭರ್ತಿಯಾಗಬೇಕಿದೆ. ಸದ್ಯಕ್ಕೆ ಐಕಾನ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳನ್ನು ಬಳಸಿಕೊಂಡು ರೋಗಿಗಳಿಗೆ ಚಿಕಿತ್ಸೆ ಕೊಡಲಾಗುತ್ತಿದೆ.
1ಕೆಆರ್ ಎಂಎನ್ 1.ಜೆಪಿಜಿರಾಮನಗರ ಜಿಲ್ಲಾಸ್ಪತ್ರೆ.