ಆಟಲ್ ಭೂ ಜಲ ಯೋಜನೆಯಡಿ ಚೆಕ್ ಡ್ಯಾಂ ನಿರ್ಮಾಣ

KannadaprabhaNewsNetwork |  
Published : Sep 30, 2024, 01:26 AM IST
28ಕೆಆರ್ ಎಂಎನ್ 10.ಜೆಪಿಜಿಹಾರೋಹಳ್ಳಿ ತಾಲೂಕು ಮರೀಗೌಡನದೊಡ್ಡಿ ಸಮೀಪ ಚೆಕ್‌ಡ್ಯಾಂ ನಿರ್ಮಾಣಕ್ಕೆ ಶಾಸಕ ಇಕ್ಬಾಲ್ ಹುಸೇನ್ ಗುದ್ದಲಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಹಾರೋಹಳ್ಳಿ: ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಹಾಗೂ ರೈತರ ಅನುಕೂಲಕ್ಕಾಗಿ ಅಟಲ್ ಭೂಜಲ ಯೋಜನೆಯಡಿ ಚೆಕ್‌ ಡ್ಯಾಂ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ಹಾರೋಹಳ್ಳಿ: ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಹಾಗೂ ರೈತರ ಅನುಕೂಲಕ್ಕಾಗಿ ಅಟಲ್ ಭೂಜಲ ಯೋಜನೆಯಡಿ ಚೆಕ್‌ ಡ್ಯಾಂ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ತಾಲೂಕಿನ ಮರಳವಾಡಿ ಹೋಬಳಿ ಮರೀಗೌಡನದೊಡ್ಡಿಯಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಚೆಕ್‌ಡ್ಯಾಂ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿ ಮಾತನಾಡಿದರು. ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಮಳೆಯ ನೀರು ಹರಿದು ವ್ಯರ್ಥವಾಗುವುದನ್ನು ತಪ್ಪಿಸಲು ಇಂತಹ ಚೆಕ್‌ ಡ್ಯಾಂಗಳ ನಿರ್ಮಾಣ ಅಗತ್ಯವಾಗಿದೆ. ಇಂತಹ ಕಾಮಗಾರಿಗಳಿಗೆ ರೈತರು ಸಹಕಾರ ನೀಡಬೇಕು ಎಂದರು.

ವಿವಿಧ ಕಾಮಗಾರಿಗಳಿಗೆ ಚಾಲನೆ: ಹಾರೋಹಳ್ಳಿ ಹೋಬಳಿಯ ಮುತ್ತರಾಯನಪುರ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿ, ಬಡೇಸಾಬರದೊಡ್ಡಿ, ಚಿಕ್ಕಸಾದೇನಹಳ್ಳಿ ಮತ್ತು ದೊಡ್ಡಸಾದೇನಹಳ್ಳಿಯಲ್ಲಿ ರಸ್ತೆ ಕಾಮಗಾರಿ, ಅಣೆದೊಡ್ಡಿ ಹಾಗೂ ಸೊಂಟೇನಹಳ್ಳಿ ಸಮೀಪ ತೂಗುಕಾಲುವೆ ಅಭಿವೃದ್ಧಿ ಕಾಮಗಾರಿ ಹಾಗೂ ಹೊನ್ನಾಗಲದೊಡ್ಡಿ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿದರು.

ಸ್ಮಶಾನಕ್ಕೆ ಬೇಗನೆ ಜಾಗ ಗುರುತಿಸಿ: ಇದೇ ವೇಳೆ ಅಣೆದೊಡ್ದ ಗ್ರಾಮದಲ್ಲಿ ಸಾವಿರಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದು ಸ್ಮಶಾನದ ಜಾಗವಿಲ್ಲ ಎಂದು ಅಣೆದೊಡ್ದ ಗ್ರಾಮಸ್ಥರು ಶಾಸಕರ ಬಳಿ ಅಳಲು ತೋಡಿಕೊಂಡರು. ಇದಕ್ಕೆ ಶಾಸಕರು ಗ್ರಾಮ ಲೆಕ್ಕಾಧಿಕಾರಿಗಳಿಗೆ ಆದಷ್ಟು ಬೇಗನೆ ಜಾಗ ಗುರುತಿಸುವಂತೆ ಸೂಚನೆ ನೀಡಿದರು.

ಜೆ.ಸಿ.ಬಿ ಅಶೋಕ್, ಬಮುಲ್ ನಿರ್ದೇಶಕ ಎಚ್.ಎಸ್.ಹರೀಶ್‌ಕುಮಾರ್, ಶಿವಾನಂದ, ದಿನೇಶ್, ಸುಶೀಲ್, ಸೋಮಣ್ಣ, ಕೋಟೆ ಕುಮಾರ, ಸುರೇಶ್ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!