ಉಪವ್ಯವಸ್ಥಾಪಕರ ಸ್ವಂತ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಚಾಲನೆ: ಸಿ.ಶಿವಕುಮಾರ್

KannadaprabhaNewsNetwork |  
Published : Mar 25, 2026, 01:45 AM IST
24ಕೆಎಂಎನ್ ಡಿ14  | Kannada Prabha

ಸಾರಾಂಶ

ನಾನು ಮನ್ಮುಲ್ ನಿರ್ದೇಶಕನಾದ ಬಳಿಕ ಅಂದಾಜಿ 3 ಕೋಟಿಗೂ ಅಧಿಕ ಮೊತ್ತದ ಪರಿಹಾರ ಹಣವನ್ನು ಫಲಾನುಭವಿಗಳಿಗೆ ವಿತರಿಸಿದ್ದೇನೆ. ನಮ್ಮ ರೈತರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದೆಂದು ತ್ವರಿತವಾಗಿ ಪರಿಹಾರದ ವಿಮೆ ಹಣ ಬಿಡುಗಡೆ ಮಾಡಿಸಿದ್ದೇನೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಪಟ್ಟಣದಲ್ಲಿ ಮನ್ಮುಲ್ ಒಕ್ಕೂಟದಿಂದ 4.65 ಕೋಟಿ ರು. ವೆಚ್ಚದಲ್ಲಿ ಉಪ ವ್ಯವಸ್ಥಾಪಕರ ಸ್ವಂತ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಒಕ್ಕೂಟದ ನಿರ್ದೇಶಕ ಸಿ.ಶಿವಕುಮಾರ್ ಹೇಳಿದರು.

ಪಟ್ಟಣದ ಮನ್ಮುಲ್ ಉಪ ವ್ಯವಸ್ಥಾಪಕರ ಕಚೇರಿಯಲ್ಲಿ ಒಕ್ಕೂಟದ ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ 15.36 ಲಕ್ಷ ರು. ವೆಚ್ಚದ ಚೆಕ್‌ಗಳನ್ನು ವಿತರಿಸಿ ಮಾತನಾಡಿ, ಪಟ್ಟಣದಲ್ಲಿ ಮನ್ಮುಲ್ ಉಪ ವ್ಯವಸ್ಥಾಪಕರ ಸ್ವಂತ ಕಚೇರಿ ಇಲ್ಲದೆ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿತ್ತು. ಇದೀಗ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಒಕ್ಕೂಟದಿಂದ 4.65 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಕಟ್ಟಡ ಕಾಮಗಾರಿಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದರು.

ನಾನು ಮನ್ಮುಲ್ ನಿರ್ದೇಶಕನಾದ ಬಳಿಕ ಅಂದಾಜಿ 3 ಕೋಟಿಗೂ ಅಧಿಕ ಮೊತ್ತದ ಪರಿಹಾರ ಹಣವನ್ನು ಫಲಾನುಭವಿಗಳಿಗೆ ವಿತರಿಸಿದ್ದೇನೆ. ನಮ್ಮ ರೈತರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದೆಂದು ತ್ವರಿತವಾಗಿ ಪರಿಹಾರದ ವಿಮೆ ಹಣ ಬಿಡುಗಡೆ ಮಾಡಿಸಿದ್ದೇನೆ ಎಂದರು.

ರೈತರು ಪ್ರತಿರಾಸುಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಬೇಕು. ವಿಮೆ ಪರಿಹಾರದ ಹಣದ ಮೊತ್ತವನ್ನು 80 ಸಾವಿರಕ್ಕೆ ಏರಿಸಲು ಕ್ರಮವಹಿಸಲಾಗಿದೆ ಎಂದರು.

ಮನ್ಮುಲ್ ಉಪ ವ್ಯವಸ್ಥಾಪಕ ಆರ್.ಪ್ರಸಾದ್ ಮಾತನಾಡಿ, ಒಕ್ಕೂಟವು ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅದರ ಸದ್ಬಳಕೆ ಪಡೆದಂತಹ ರೈತರು, ಫಲಾನುಭವಿಗಳು ಇತರೆ ರೈತರಿಗೂ ಸೌಲಭ್ಯದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ರಾಸು ವಿಮೆ ಯೋಜನೆಯಡಿ 12.80 ಲಕ್ಷ ರು , ರೈತ ಕಲ್ಯಾಣ ಟ್ರಸ್ಟ್‌ನಿಂದ 1.15 ಲಕ್ಷ ರು, ಹಾಲು ಕರೆಯುವ ಯಂತ್ರದ ಯೋಜನೆಯಡಿ 1.40 ಲಕ್ಷ ಮೌಲ್ಯದ ಚೆಕ್‌ಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಈ ವೇಳೆ ಮಾರ್ಗ ವಿಸ್ತರ್ಣಾಧಿಕಾರಿಗಳಾದ ಉಷಾ, ಪ್ರಜ್ವಲ್, ಟೆಕ್ನೀಶಿಯನ್ ಆನಂದ್, ಕಾರ್ಯದರ್ಶಿ ಬೋರೇಗೌಡ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವರ ಅಪಹಾಸ್ಯಕ್ಕೆ ಕ್ಷಮೆ ಕೇಳುವೆ: ರಣವೀರ್‌
ಎಲ್ಲ ಗ್ರಾಮ ಪಂಚಾಯಿತಿಗಳನ್ನು ಕ್ಷಯರೋಗ ಮುಕ್ತಗೊಳಿಸಲು ಶ್ರಮಿಸಿ: ಜಿಪಂ ಸಿಇಒ ಮೋನಾ ರೋತ್