ಕನ್ನಡಪ್ರಭ ವಾರ್ತೆ ಕೊರಟಗೆರೆ
ನಮ್ಮ ಕೊರಟಗೆರೆ ಪಟ್ಟಣದ ಬಸ್ಟಾಂಡ್ ಗೆಳೆಯರ ಬಳಗದ ಬೇಡಿಕೆಯಂತೆ ಸಾರ್ವಜನಿಕರಿಗೆ ಕುಡಿಯುವ ನೀರಿನ ಘಟಕವನ್ನು ನಮ್ಮ ನಾಯಕರಾದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ರಿಂದ ಹಾಕಿಸಿಕೊಡಲಾಗುವುದು ಮುಂದಿನ ದಿನಗಳಲ್ಲೂ ಸಹ ಸಾರ್ವಜನಿಕ ಸೇವೆಗೆ ಬದ್ದನಾಗಿರುತ್ತೇನೆ ಎಂದು ತಿಳಿಸಿದರು.ಮಾಜಿ ಜಿಪಂ ಅಧ್ಯಕ್ಷೆ ಪ್ರೇಮಮಹಾಲಿಂಗಪ್ಪ ಮಾತನಾಡಿ ಹಲವು ವರ್ಷಗಳಿಂದ ನಮ್ಮ ಕುಟುಂಬದವರು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡು ಬಂದಿದ್ದೇವೆ. ಸರ್ಕಾರಿ ಶಾಲಾ ಮಕ್ಕಳಿಗೆ ಜನಪ್ರತಿನಿಧಿಗಳಾದ ನಾವುಗಳು ಈ ರೀತಿಯ ಕಾರಣಗಳನ್ನು ಇಟ್ಟುಕೊಂಡು ಸೇವೆ ಮಾಡಿದರೆ ಗ್ರಾಮೀಣ ಭಾಗದ ಮಕ್ಕಳಿಗೆ ನೆರವಾಗುತ್ತದೆ ಎಂದರು.ಕಾಂಗ್ರೆಸ್ ಪಕ್ಷದ ಮುಖಂಡ ಕಾರ್ಮಹೇಶ್ ಮಾತನಾಡಿ ನಮ್ಮ ನಾಯಕರಾದ ಮಹಾಲಿಂಗಪ್ಪ ಅಭಿಮಾನಿ ಬಳಗದಿಂದ ಅವರ ಹುಟ್ಟು ಹಬ್ಬದ ಪ್ರಯುಕ್ತ ಕೊರಟಗೆರೆ ಬಸ್ ನಿಲ್ದಾಣದಲ್ಲಿ ಬಡವರಿಗೆ ಸಿಹಿ ಹಂಚಿಸಲಾಗಿದ್ದು, ಬಿಸಿಲು ಹೆಚ್ಚಾದರಿಂದ ಮಜ್ಜಿಗೆಯನ್ನು ವಿತರಿಸಲಾಗಿದೆ. ಮಹಾಲಿಂಗಪ್ಪನವರು ಹಲವು ವರ್ಷಗಳಿಂದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸೇವೆಯನ್ನು ಮಾಡಿಕೊಂಡು ಬರುತ್ತಿದ್ದಾರೆ ಅವರು ಮುಂದೆ ಡಾ.ಜಿ.ಪರಮೇಶ್ವರ ರವರ ಆಶೀರ್ವಾದದಿಂದ ಯಾವುದಾದರು ಕ್ಷೇತ್ರದಿಂದ ವಿಧಾನಸಭೆಯ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಲಿ ಎನ್ನವುದು ನಮ್ಮಗಳ ಆಸೆ ಎಂದರು.ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ.ಪುರುಷೋತ್ತಮ್ ನಾಯಕ್ ಕಸಬಾ ವಿ.ಎಸ್.ಎ.ಎನ್. ಆಧ್ಯಕ್ಷ ಕೆ.ಎಸ್.ವಿನಯಕುಮಾರ್, ಟಿ.ಎ.ಪಿ.ಸಿ.ಎಂ.ಎಸ್ ಅದ್ಯಕ್ಷ ಜಿ.ಎಂ.ಶಿವಾನಂದ್, ಮುಖಂಡರಾದ ಯೋಗೀಶ್, ಕುದುರೆಸತ್ಯನಾರಾಯಣ್. ಸೈಯದ್ಸೈಪುಲ್ಲಾ, ಸಿದ್ದಲಿಂಗಯ್ಯ, ನೇಗಲಾಲರಮೇಶ್, ಚಿಕ್ಕನಾರಾಯಣ್, ನಾಗೇಶ್, ಶಿವರಾಜ, ಅನಿಲ್, ಬಿದರೇಶ್ ಸೇರಿದಂತೆ ಇತರರು ಹಾಜರಿದ್ದರು.