ಕನ್ನಡಪ್ರಭ ವಾರ್ತೆ ಪಾವಗಡ
ಅವರು ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಡಾ.ಅಬ್ದುಲ್ ಕಲಾಂ ಮಹಾ ವೇದಿಕೆಯ ವತಿಯಿಂದ ಸೋಮವಾರ ಪಟ್ಟಣದ ಎಸ್ಎಸ್ಕೆ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ತಾಲೂಕಿನ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಕಾಣಬೇಕು.ಈ ಹಿನ್ನಲೆಯಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದೇನೆ.ಈಗಾಗಲೇ ಶಾಲಾ ಕಾಲೇಜು ಕೊಠಡಿ ನಿರ್ಮಾಣ ಇತರೆ ಪ್ರಗತಿ ಕಾರ್ಯಗಳಿಗೆ ವಿವಿಧ ಯೋಜನೆಯ ಕೋಟ್ಯಂತರ ರು ಹಣ ವಿನಿಯೋಗಿಸಲಾಗಿದೆ ಎಂದರು.ತಾಲೂಕಿನ ಯುವಕರಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ತಾಂತ್ರಿಕ, ಐಟಿಐ ಹಾಗೂ ಡಿಪ್ಲೋಮಾ ಕಾಲೇಜು ತೆರೆಯಲು ಉದ್ದೇಶಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು ಮಂಜೂರಾತಿ ಕಲ್ಪಿಸುವ ಭರವಸೆ ವ್ಯಕ್ತವಾಗಿದೆ ಎಂದರು. ಮರಿದಾಸನಹಳ್ಳಿ ಸಿ.ಕೆ.ಪುರ ಹಾಗೂ ನಗರದ ಬಿಸಿಎಂ ಹಾಸ್ಟಲ್ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ.ಸುಸಜ್ಜಿತ ಹಾಸ್ಚಲ್ ವ್ಯವಸ್ಥೆಯಿದ್ದು ವಿದ್ಯಾರ್ಥಿನಿಲಯಗಳ ಸೌಲಭ್ಯ ಪಡೆಯುವಂತೆ ಸಲಹೆ ನೀಡಿದರು.
ಈ ವೇಳೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಮ್ಮ, ಪ್ರಾಧ್ಯಾಪಕ ಅನಿಲ್ಕುಮಾರ್ ಇಕ್ಬಾಲ್, ಸುದೇಶ್ಬಾಬು ಮಹಮ್ಮದ್ ಫಜುಲುಲ್ಲಾ, ಅನ್ವರ್ಸಾಬ್, ವೆಂಕಟಮ್ಮನಹಳ್ಳಿ ನಾಗೇಂದ್ರರಾವ್, ಮಾಜಿ ಅಧ್ಯಕ್ಷ ವೇಲುರಾಜು, ಮೈಲಪ್ಪ, ರೈತ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ, ಎ.ಶಂಕರರೆಡ್ಡಿ, ತೆಂಗಿನಕಾಯಿ ರವಿ, ಪಿ.ಎಚ್.ರಾಜೇಶ್, ಆರ್.ಎ.ಹನುಮಂತರಾಯಪ್ಪ, ಮಹಮ್ಮದ್ ಇರ್ಮಾನ್, ಬಾಲಸುಬ್ರಮಣ್ಯಂ, ರಿಜ್ವಾನ್, ಅನಿಲ್ ಅಂಡೆ, ಸ್ಟುಡಿಯೋ ಅಮರ್ ಇತರೆ ಆನೇಕ ಮಂದಿ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.