ಕನ್ನಡಪ್ರಭ ವಾರ್ತೆ ಹೊಸಕೋಟೆ
ಯುನೈಟೆಡ್ ವೇ ಕಂಪನಿ ಹಾಗೂ ನೆಕ್ಸ್ ಜೆನ್ ಕಂಪನಿಗಳ ಸಿಎಸ್ ಆರ್ ಅನುದಾನದಲ್ಲಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ನಂದಗುಡಿ ಪ್ರಾಥಮಿಕ ಶಾಲೆ ಆವರಣದಲ್ಲಿಯೇ 40 ಲಕ್ಷ ರು. ಅನುದಾನದಲ್ಲಿ ರಾಜ್ಯಕ್ಕೇ ಮಾದರಿ ಕೇಂದ್ರ ನಿರ್ಮಿಸಲಾಗುವುದು. ಪ್ರತ್ಯೇಕ ಮಕ್ಕಳ ಕಲಿಕಾ ಕೇಂದ್ರ, ತಾಯಂದಿಯರ ಹಾರೈಕೆ, ಆಹಾರ ವಿತರಣಾ ಕೇಂದ್ರ ಸೇರಿದಂತೆ ಎಲ್ಲಾ ಮೂಲ ಸೌಲಭ್ಯಗಳು ಒಂದೇ ಕಟ್ಟಡದಲ್ಲಿ ಲಭ್ಯವಿರುತ್ತದೆ ಎಂದರು.ಯುನೈಟೆಡ್ ವೇ ಕಂಪನಿ ಉಪಾಧ್ಯಕ್ಷ ವೆಂಕಟ ಸುಧಾಕರ್ ಮಾತನಾಡಿ, ಖಾಸಗಿ ಕಂಪನಿ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಿ ಗುಣಮಟ್ಟದ ಶಿಕ್ಷಣ ಒದಗಿಸಲು ಮುಂದಾಗಿದ್ದೇವೆ. ಶಿಕ್ಷಣದಲ್ಲಿಯೂ ಸುಧಾರಣೆ ಕಾಣಬೇಕೆಂಬುದೇ ನಮ್ಮ ಉದ್ದೇಶ ಎಂದರು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ವಿ.ರಾಜಶೇಖರ್ ಗೌಡ, ಮಾಜಿ ತಾಪಂ ಸದಸ್ಯರಾದ ಕೆಂಚೇಗೌಡ, ಭೀರಪ್ಪ, ಯುನೈಟೆಡ್ ವೇ ಕಂಪನಿ ವ್ಯವಸ್ಥಾಪಕಿ ಭಾಗ್ಯ ಕುಮಾರ್, ಸಿಡಿಪಿಒ ಶಿವಮ್ಮ, ದಾನಿಗಳಾದ ಮಲಿಯಪ್ಪನಹಳ್ಳಿ ಮಹದೇವಪ್ಪ, ಎಸ್ಎಫ್ಸಿಎಸ್ ನಿರ್ದೇಶಕ ರವೀಂದ್ರ, ಎಪಿಎಂಎಸಿ ಮಾಜಿ ಅಧ್ಯಕ್ಷ ಧರ್ಮೇಶ್, ಗ್ರಾಪಂ ಅಧ್ಯಕ್ಷೆ ಮುನಿವೆಂಕಟಮ್ಮ, ಮಂದೀಪ್ ಗೌಡ, ರಮೇಶ್ ಇತರರಿದ್ದರು.