ರಾಮನಾಥಪುರ: ಹೋಬಳಿಯ ಕಾಳೆನಹಳ್ಳಿ ಗ್ರಾಮದಲ್ಲಿ ₹65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆರೋಗ್ಯ ಉಪಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕರಾದ ಎ. ಮಂಜು ಅವರುಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಆರೋಗ್ಯ ಉಪಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿರುವುದರಿಂದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು. ಈ ಆರೋಗ್ಯ ಉಪಕೇಂದ್ರದಿಂದ ಗ್ರಾಮದ ಜನರಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರಿಗೆ ಅಗತ್ಯ ಆರೋಗ್ಯ ಸೇವೆಗಳು ಸ್ಥಳೀಯವಾಗಿಯೇ ದೊರೆಯಲಿವೆ. ಕಟ್ಟಡ ನಿರ್ಮಾಣ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದರ ಜೊತೆಗೆ ಗುಣಮಟ್ಟವನ್ನು ಕಾಪಾಡಿಕೊಂಡು ಕಾಮಗಾರಿ ನಿರ್ವಹಿಸುವಂತೆ ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಎ. ಮಂಜು ಸೂಚನೆ ನೀಡಿದರು.