ಬಿಡಿಎ ಸಸಿ ನೆಡಲು ಕಟ್ಟಡ ಕಾರ್ಮಿಕಮಂಡಳಿಯ 1.9 ಕೋಟಿ ಬಳಕೆಗೆ ಆಕ್ಷೇಪ

KannadaprabhaNewsNetwork |  
Published : Jun 24, 2026, 02:45 AM IST
 : ಚಿಕ್ಕಜಾಜೂರಿನಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿದ ಶಾಸಕ ಡಾ.ಎಂ.ಚಂದ್ರಪ್ಪ.   | Kannada Prabha

ಸಾರಾಂಶ

ಬಿಡಿಎ ವತಿಯಿಂದ ಜೂ.27ರಂದು ನಗರದಲ್ಲಿ ಒಂದೇ ದಿನ 15 ಲಕ್ಷ ಸಸಿಗಳನ್ನು ನೆಡಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ‌ಕಾರ್ಮಿಕರ ಕಲ್ಯಾಣ ಮಂಡಳಿಯ 1.9 ಕೋಟಿ ರು. ಬಳಕೆ ಮಾಡಿಕೊಳ್ಳಲು ಮುಂದಾಗಿರುವುದಕ್ಕೆ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಆಕ್ಷೇಪ ವ್ಯಕ್ತಪಡಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬಿಡಿಎ ವತಿಯಿಂದ ಜೂ.27ರಂದು ನಗರದಲ್ಲಿ ಒಂದೇ ದಿನ 15 ಲಕ್ಷ ಸಸಿಗಳನ್ನು ನೆಡಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ‌ಕಾರ್ಮಿಕರ ಕಲ್ಯಾಣ ಮಂಡಳಿಯ 1.9 ಕೋಟಿ ರು. ಬಳಕೆ ಮಾಡಿಕೊಳ್ಳಲು ಮುಂದಾಗಿರುವುದಕ್ಕೆ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಆಕ್ಷೇಪ ವ್ಯಕ್ತಪಡಿಸಿದೆ.

ಮಂಡಳಿಯಿಂದ ಕಾರ್ಮಿಕರಿಗೆ ಪಿಂಚಣಿ, ವೈದ್ಯಕೀಯ ವಿದ್ಯಾರ್ಥಿ ವೇತನ, ಹೆರಿಗೆ ಭತ್ಯೆ, ಮರಣ ಪರಿಹಾರ ಸೇರಿದಂತೆ ಕಟ್ಟಡ ಕಾರ್ಮಿಕರಿಗಾಗಿ ನೀಡಲಾಗುವ ಸೌಲಭ್ಯಗಳಿಗಾಗಿ ನಿಧಿ ಸಂಗ್ರಹಿಸಲಾಗಿದೆ. ಆದರೆ, ಈ ಹಣವನ್ನು ಸಸಿ ನೆಡುವ ಕಾರ್ಯಕ್ಕೆ ಬಳಸುತ್ತಿರುವುದು ಸರಿಯಾದ ಕ್ರಮವಲ್ಲ. ಬಿಡಿಎದಲ್ಲೇ ನೂರಾರು ಕೋಟಿ ರು. ಹಣವಿದೆ ಅದನ್ನೇ ಬಳಸಿಕೊಳ್ಳಬಹುದಿತ್ತು ಎಂದು ಫೆಡರೇಷನ್‌ನ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ್ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ಕಾರ್ಮಿಕರಿಗೆ ತಲಾ‌ 750 ರು. ಗೌರವಧನವನ್ನು ನೀಡಲಾಗುವುದೆಂದು ಕಾರ್ಮಿಕ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ. ಆದರೆ, ಇದರಲ್ಲಿ‌ ಬೋಗಸ್ ಕಾರ್ಮಿಕರ ಪಟ್ಟಿಯನ್ನು ಸೃಷ್ಟಿಸಿ ನೈಜ ಕಾರ್ಮಿಕರ ಹೆಸರಿನಲ್ಲಿ ಹಣ ದುರುಪಯೋಗ ಮಾಡಿಕೊಳ್ಳುವ ಬಗ್ಗೆ ಕಾರ್ಮಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಹಣವನ್ನು ದುರುಪಯೋಗ ಮಾಡಿಕೊಳ್ಳದೇ ಸೂಕ್ತ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದು ಮಹಾಂತೇಶ್ ಕೋರಿದ್ದಾರೆ.

ಕಾರ್ಮಿಕರಿಗೆ ಪಾವತಿ: ಈ ಕುರಿತು ‘ಕನ್ನಡಪ್ರಭ’ಕ್ಕೆ ಪ್ರತಿಕ್ರಿಯಿಸಿದ ಬಿಡಿಎ ಆಯುಕ್ತ ಪಿ. ಮಣಿವಣ್ಣನ್, ಸಸಿ ನೆಡುವ ಕಾರ್ಯಕ್ರಮದಲ್ಲಿ ಕಾರ್ಮಿಕರು ಭಾಗಿಯಾಗುತ್ತಾರೆ. ಈ ಕಾರ್ಯಕ್ಕಾಗಿ ಅವರಿಗೆ ಅರ್ಧ ದಿನದ ಸಂಭಾವನೆ ನೀಡಲಾಗುತ್ತದೆ. ಅದರಲ್ಲಿ ಅರ್ಧ ಹಣ ಕಾರ್ಮಿಕರ ಸಂಭಾವನೆಗೆ ವಿನಿಯೋಗಿಸಲಾಗುತ್ತದೆ. ಉಳಿಕೆ ಹಣವನ್ನು ತಿಂಡಿ ಮತ್ತು ಊಟಕ್ಕೆ ವಿನಿಯೋಗಿಸಲಾಗುತ್ತದೆ. ಸಸಿ ನೆಡುವ ಕಾರ್ಯಕ್ರಮಕ್ಕೆ ಸಂಬಂಧಿಸಿದ ಎಲ್ಲಾ ವೆಚ್ಚವನ್ನು ಬಿಡಿಎ ಭರಿಸುತ್ತಿದೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಲ್ಲೀಲಿ ಕಾಲು ತೊಳೆದಿದ್ದನ್ನು ಪ್ರಶ್ನಿಸಿದಕ್ಕೆಬ್ಯಾಟಲ್ಲಿ ಹೊಡೆದು ಪಿಜಿ ಮಾಲೀಕನ ಹತ್ಯೆ
ಎಂಜಿನಿಯರ್‌ಗಳಿಗೆ ಬ್ರೈನ್‌ ಡೆಡ್‌ ಆಗಿದೆ: ಕೃಷ್ಣ