ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಪ್ರಾಧಿಕಾರಿದ ಅನುಮತಿ ಕಡ್ಡಾಯ
ಕೆ.ಜಿ.ಎಫ್ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಅಕ್ರಮ ಬಡಾವಣೆಗಳನ್ನು ನಿರ್ಮಿಸಬಾರದು ಹಾಗೂ ಪ್ರಾಧಿಕಾರದ ಅನುಮೋದನೆ ಪಡೆದು ವಸತಿ ಬಡಾವಣೆಗಳನ್ನು ಕಡ್ಡಾಯವಾಗಿ ನಿರ್ಮಿಸಬೇಕು. ಕೆ.ಜಿ.ಎಫ್ ತಾಲ್ಲೂಕು, ಬೇತಮಂಗಲ ಹೋಬಳಿ, ಗುಟ್ಟಹಳ್ಳಿ ಮತ್ತು ಗರುಡಾದ್ರಿಹಳ್ಳಿ ಗ್ರಾಗಳ ವಿವಿಧ ಸರ್ವೆ ನಂಬರ್ಗಳಲ್ಲಿ 26ಎ-04.08ಗುಂಟೆ ಜಮೀನಿನಲ್ಲಿ ಭೂ ಮಾಲಿಕರು ಹಾಗೂ ಪ್ರಾಧಿಕಾರದ ಸಹಭಾಗಿತ್ವದೊಂದಿಗೆ ಶೇ 50:50ರ ಅನುಪಾತದಲ್ಲಿ ವಸತಿ ಯೋಜನೆಯನ್ನು ಕೈಗೊಳ್ಳಲು ಯೋಜನಾ ವರದಿಯನ್ನು ತಯಾರಿಸಿ ಸರ್ಕಾರದ ಮಂಜೂರಾತಿಗಾಗಿ ಸಲ್ಲಿಸಲಾಗಿದೆ ಎಂದರು.ಹಾಗೂ ಪ್ರಾಧಿಕಾರದ ಅಧಿನದಲ್ಲಿ ಇರುವ ವಾಣಿಜ್ಯ ನಿವೇಶನದಲ್ಲಿ ವಾಣಿಜ್ಯ ಸಂಕೀರ್ಣ ಕಟ್ಟಡ ನಿರ್ಮಾಣ ಮಾಡಲು ಐದು ಕೋಟಿ ವೆಚ್ಚಕ್ಕೆ ಯೋಜನಾ ವರದಿಯನ್ನು ತಯಾರಿಸಿ ಸರ್ಕಾರದಿಂದ ಮಂಜೂರಾತಿಗಾಗಿ ಸಲ್ಲಿಸಲಾಗಿದೆ ಎಂದರು.
ಇಂಟಿಗ್ರೇಟೆಡ್ ಟೌನ್ಶಿಪ್ ನಿರ್ಮಾಣಕ್ಕಾಗಿ ಈ ಪ್ರಾಧಿಕಾರಕ್ಕೆ ಸರ್ಕಾರದಿಂದ ಹಸ್ತಾಂತರಿಸಿರುವ ಕೋಲಾರ ಜಿಲ್ಲೆ, ಕೆ.ಜಿ.ಎಫ್ ತಾಲೂಕಿನ ಬಂಗಾರದಗಣಿ ಗ್ರಾಮದ ಸ.ನಂ.03ರಲ್ಲಿನ 294ಎ-0ಗು ಜಮೀನಿಗೆ ತಂತಿ ಬೇಲಿ ನಿರ್ಮಿಸಲು 5 ಕೋಟಿ ವೆಚ್ಚವಾಗುತ್ತದೆ ಎಂದು ತಿಳಿಸಿದರು.