ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್, ಜಲ ಮಂಡಳಿ ಎಂಜಿನಿಯರ್ ಎಇಇ ಮಿಥುನ್ಕುಮಾರ್, ಎಇ ತೇಜಸ್ವಿನಿ, ಸಿಬ್ಬಂದಿಗಳಾದ ಮೋಹನ್, ಪಾಲಿಕೆ ಎಂಜಿನಿಯರ್ ಪ್ರಿಯಾ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಕಲುಷಿತ ನೀರು ಪೂರೈಕೆಯಾಗುತ್ತಿರುವ ಬಗ್ಗೆ ನಾಗರೀಕ ವಲಯದಲ್ಲಿ ವ್ಯಾಪಕ ದೂರುಗಳು ಬರುತ್ತಿವೆ. ತಕ್ಷಣವೇ ಶುದ್ಧ ಕುಡಿಯುವ ನೀರು ಪೂರೈಕೆಗೆ ಗಮನಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಗಾಜನೂರಿನ ತುಂಗಾ ಜಲಾಶಯದಿಂದ, ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಆದರೆ ಕಳೆದ ಅಕ್ಟೋಬರ್ 8ರ ರಾತ್ರಿ ಬಿದ್ದ ಭಾರೀ ಮಳೆಗೆ ತುಂಗಾ ಡ್ಯಾಂ ನೀರಿನ ಬಣ್ಣ, ಏಕಾಏಕಿ ಕೆಂಪು ಬಣ್ಣಕ್ಕೆ ತಿರುಗಿತ್ತು. ನೀರಿನಲ್ಲಿ ಟರ್ಬಿಡಿಟಿ ಪ್ರಮಾಣ ಹೆಚ್ಚಾಗಿತ್ತು.
ಕುಡಿಯಲು ಯೋಗ್ಯವಾದ ನೀರಿನ ಮಾನದಂಡಗಳ ಪ್ರಕಾರ, ನೀರಿನಲ್ಲಿನ ಟರ್ಬಿಡಿಟಿ ಪ್ರಮಾಣ 1 ಎನ್.ಟಿ.ಯು ಇರಬೇಕು. ಆದರೆ ಪ್ರಸ್ತುತ ತುಂಗಾ ನದಿ ನೀರಿನಲ್ಲಿ , ಟರ್ಬಿಡಿಟಿ ಪ್ರಮಾಣ ನಿಗದಿತ ಮಾನದಂಡಗಳಿಗಿಂತ ಹೆಚ್ಚಿದೆ ಎಂದ ದೂರುಗಳು ಕೇಳಿಬಂದಿದ್ದವು.
ಅಸಮಾಧಾನ:ನವರಾತ್ರಿ ಹಬ್ಬದ ಸಂದರ್ಭದಲ್ಲಿಯೇ ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿರುವುದಕ್ಕೆ, ನಾಗರೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಟರ್ಬಿಡಿಟಿ ಪ್ರಮಾಣ ಹೆಚ್ಚಳ
ಭಾರೀ ಮಳೆ ಕಾರಣದಿಂದ ತುಂಗಾ ಜಲಾಶಯದಲ್ಲಿ ಅಪಾರ ಪ್ರಮಾಣದ ಮಣ್ಣು ಮಿಶ್ರಿತ ನೀರು ಸಂಗ್ರಹವಾಗಿದೆ. ನೀರಿನಲ್ಲಿ ಟರ್ಬಿಡಿಟಿ ಪ್ರಮಾಣ ಹೆಚ್ಚಾಗಿದೆ. ಶುದ್ಧೀಕರಣದ ಹೊರತಾಗಿಯೂ ಟರ್ಬಿಡಿಟಿ ಪ್ರಮಾಣ ಕಡಿಮೆಯಾಗುತ್ತಿಲ್ಲ. ಇದರಿಂದ ಕೆಂಪು ಬಣ್ಣದ ನೀರು ಪೂರೈಕೆಯಾಗುತ್ತಿದೆ ಎಂದು ಭೇಟಿಯ ವೇಳೆ ಅಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಿದರು.-
ಫೋಟೋ: 13ಎಸ್ಎಂಜಿಕೆಪಿ05:ಶಿವಮೊಗ್ಗದ ಹೊರವಲಯ ಮಂಡ್ಲಿಯಲ್ಲಿರುವ ನೀರು ಶುದ್ದೀಕರಣ ಘಟಕಕ್ಕೆ ಭಾನುವಾರ ಶಾಸಕ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.