ಚನ್ನಗಿರಿ: ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ12 ಜನರಿಗೆ ವಾಂತಿ - ಭೇದಿ

KannadaprabhaNewsNetwork |  
Published : Aug 30, 2024, 02:03 AM ISTUpdated : Aug 30, 2024, 11:55 AM IST
ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಬೇದಿಯ ಪ್ರಕರಣಗಳು ದಾಖಲಾಗುತ್ತಿದ್ದಂತೆಯೇ ತಾಲೂಕು ಮಟ್ಟದ ಅಧಿಕಾರಿಗಳಿಗೆ ಗ್ರಾಮಕ್ಕೆ ಭೇಟಿನೀಡಿ ಪರಿಶೀಲನೆ ನಡೆಸುತ್ತೀರುವುದು | Kannada Prabha

ಸಾರಾಂಶ

ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 12 ಜನರು ವಾಂತಿ-ಭೇದಿಯಿಂದ ಬಳಲಿ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ಗುರುವಾರ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 ಚನ್ನಗಿರಿ:  ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 12 ಜನರು ವಾಂತಿ-ಭೇದಿಯಿಂದ ಬಳಲಿ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ಗುರುವಾರ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ಬೆಳಗ್ಗೆಯಿಂದಲೇ ವಾಂತಿ-ಬೇದಿ ಪೀಡಿತ ರೋಗಿಗಳು ಪಟ್ಟಣದ ಸರ್ಕಾರಿ ಆಸ್ಫತ್ರೆಗೆ ಬರುತ್ತಿದ್ದು ಬಂದ ರೋಗಿಗಳಿಗ ಆಸ್ಪತ್ರೆಯ ವೈದ್ಯ, ಸಿಬ್ಬಂದ್ದಿಗಳು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ತಾಲೂಕು ಆರೋಗ್ಯಾಧಿಕಾರಿ ಡಾ.ಶಿವಕುಮಾರ್ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಪ್ಪ, ಗ್ರಾಮೀಣ ಕುಡಿಯುವ ನೀರು ವಿಭಾಗದ ಅಭಿಯಂತರ ಲೋಹಿತ್, ತಾಪಂ ಕಾರ್ಯನಿರ್ವಾಣಾಧಿಕಾರಿ ಬಿ.ಕೆ.ಉತ್ತಮ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಕ ಲೋಕೇಶ್ ಅಧಿಕಾರಿಗಳ ತಂಡವೇ ಗ್ರಾಮಕ್ಕೆ ಭೇಟಿ ನೀಡಿ ಯಾವುದರಿಂದ ಈ ಘಟನೆ ಸಂಭವಿಸಿದೆ ಎಂದು ಪರಿಶೀಲನೆ ನಡೆಸಿದರು. ಗ್ರಾಮದಲ್ಲಿರುವ ಕುಡಿಯುವ ನೀರು ಸರಬರಾಜಿನ ಓವರ್ ಹೆಡ್ ಟ್ಯಾಂಕ್‌ನ ಸ್ವಚ್ಛಗೊಳಿಸುವ ಪ್ರಕ್ರಿಯೆ ನಡೆದಿದ್ದು, ಗ್ರಾಮದ ಜನರು ಶೋಧಿಸಿದ ನೀರು, ಕಾಯಿಸಿ ಆರಿಸಿದ ನೀರನ್ನು ಕುಡಿಯಬೇಕು ಎಂದು ಪ್ರಚಾರ ಪಡಿಸಲಾಗಿದ್ದು ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗ್ರಾಮೀಣ ನೀರು ಸರಬರಾಜು ಅಭಿಯಂತರ ಲೋಹಿತ್ ತಿಳಿಸಿದ್ದಾರೆ.

ವಾಂತಿ-ಬೇದಿಗೆ ಒಳಗಾದವರ ಮಲ ಮತ್ತು ವಾಂತಿಯ ಮಾದರಿಯನ್ನು ದಾವಣಗೆರೆಯ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯರು ವಾಂತಿ-ಬೇದಿ ಪೀಡಿತರು ಗುಣಮುಖರಾಗುತ್ತಿದ್ದಾರೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಚ್ಚೆತ್ತ ಬೆಂ.ವಿವಿ: ಲೋಪ ಸರಿಪಡಿಸಿ 400 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ
ಕುದುರೆಗಳಲ್ಲಿ ಗ್ಲ್ಯಾಂಡರ್ಸ್ ರೋಗ ಪತ್ತೆ: ಟರ್ಫ್ ಕ್ಲಬ್‌ ಸುತ್ತ ಪ್ರಾಣಿ ಸಂಚಾರ ನಿರ್ಬಂಧ