ಮುಂದುವರಿದ ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ

KannadaprabhaNewsNetwork |  
Published : May 01, 2026, 02:30 AM IST
ತೆರವು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ರಸ್ತೆ ಅತಿಕ್ರಮಿಸಿ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದ ಗಿರಿಯಾಸ್‌ ಮಳಿಗೆ ವಿರುದ್ಧ ಮಹಾನಗರ ಪಾಲಿಕೆ ಕಠಿಣ ಕ್ರಮ ಕೈಗೊಂಡಿದೆ. ಹಿಂಡಲಗಾ ರಸ್ತೆಯಲ್ಲಿ ನಡೆದ ಆಪರೇಷನ್ ಜೆಸಿಬಿ ಕಾರ್ಯಾಚರಣೆ ಮೂಲಕ ಅನಧಿಕೃತವಾಗಿ ಅಳವಡಿಸಿದ್ದ ಬ್ಯಾನರ್‌, ಕಟೌಟ್‌, ರಸ್ತೆ ಅತಿಕ್ರಮಣವನ್ನು ತೆರವುಗೊಳಿಸಲಾಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ರಸ್ತೆ ಅತಿಕ್ರಮಿಸಿ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದ ಗಿರಿಯಾಸ್‌ ಮಳಿಗೆ ವಿರುದ್ಧ ಮಹಾನಗರ ಪಾಲಿಕೆ ಕಠಿಣ ಕ್ರಮ ಕೈಗೊಂಡಿದೆ. ಹಿಂಡಲಗಾ ರಸ್ತೆಯಲ್ಲಿ ನಡೆದ ಆಪರೇಷನ್ ಜೆಸಿಬಿ ಕಾರ್ಯಾಚರಣೆ ಮೂಲಕ ಅನಧಿಕೃತವಾಗಿ ಅಳವಡಿಸಿದ್ದ ಬ್ಯಾನರ್‌, ಕಟೌಟ್‌, ರಸ್ತೆ ಅತಿಕ್ರಮಣವನ್ನು ತೆರವುಗೊಳಿಸಲಾಯಿತು.

ಮಹಾನಗರ ಪಾಲಿಕೆಯ ಸೂಚನೆಗಳಿದ್ದರೂ ಅತಿಕ್ರಮಣ ತೆರವುಗೊಳಿಸದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ, ರಸ್ತೆ ಮೇಲೆ ಇಡಲಾಗಿದ್ದ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತೆರವುಗೊಳಿಸಿದರು. ಬಳಿಕ, ಆ ವಸ್ತುಗಳನ್ನು ಗಿರಿಯಾಸ್‌ ಮಳಿಗೆ ಅಂಗಳಕ್ಕೆ ಜೆಸಿಬಿ ಯಂತ್ರದ ಮೂಲಕ ಹಾಕಲಾಯಿತು.

ಸ್ಥಳೀಯರ ದೂರುಗಳ ಮೇರೆಗೆ ಕೈಗೊಳ್ಳಲಾದ ಈ ಕ್ರಮದಿಂದ ಸಾರ್ವಜನಿಕರಿಗೆ ಆಗುತ್ತಿದ್ದ ಸಂಚಾರ ಅಡಚಣೆ ನಿವಾರಣೆಯಾಗಿದೆ. ರಸ್ತೆಗಳನ್ನು ಅತಿಕ್ರಮಿಸಿ ವ್ಯಾಪಾರ ನಡೆಸುವುದು ಅಥವಾ ವಸ್ತುಗಳನ್ನು ಸಂಗ್ರಹಿಸುವುದು ಕಾನೂನು ಬಾಹಿರವಾಗಿದ್ದು, ಇದನ್ನು ಸಹಿಸಲಾಗುವುದಿಲ್ಲ ಎಂದು ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಹಿಂಡಲಗಾ ರಸ್ತೆಯಲ್ಲಿನ ಅನಧಿಕೃತ ಗೂಡಂಗಡಿಗಳನ್ನೂ ತೆರವುಗೊಳಿಸಲಾಯಿತು. ರಸ್ತೆ ಬದಿಗೆ ಹೊಂದಿಕೊಂಡು ಹಾಕಲಾಗಿದ್ದ ಬಾರ್‌ವೊಂದರ ಫಲಕವನ್ನು ತೆರವುಗೊಳಿಸಲಾಯಿತು. ಮುಂದಿನ ದಿನಗಳಲ್ಲಿ ಇಂತಹ ಅತಿಕ್ರಮಣಗಳ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಶಾಸಕ ವೈದ್ಯ
ರಣಬಿಸಿಲಿಗೆ ಗಣತಿದಾರರು ತೀವ್ರ ಹೈರಾಣು