ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದಲ್ಲಿ ನಡೆಯುತ್ತಿರುವ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಯಕಯೋಗಿ ಬಸವಣ್ಣ ಅವರ ಸಮ ಸಮಾಜ ನಿರ್ಮಾಣವಾಗಬೇಕಾದರೆ ವೀರವೈವ ಲಿಂಗಾಯತ ಸಮಾಜ ಎಲ್ಲ ಒಳಪಂಗಡಗಳು ವೈಮನಸ್ಸು ಮರೆತು ಒಗ್ಗೂಡಿ ಒಟ್ಟಾರೆಯಾಗಿ ಕೆಲಸ ಮಾಡಿಕೊಂಡು ಹೋಗಬೇಕು ಎಂದರು.
ಭಾರತವನ್ನು ಭಿಕ್ಷುಕ ದೇಶವೆನ್ನುತ್ತಿದ್ದ ಕಾಲ ಬದಲಾಗಿ ಬಲಿಷ್ಠ ರಾಷ್ಟ್ರವಾಗಿ ರೂಪುಗೊಂಡಿದೆ. ಸ್ವಾಮಿ ವಿವೇಕಾನಂದರ ಕಾಲದಲ್ಲಿ ನಮ್ಮ ದೇಶದ ತತ್ವಜ್ಞಾನ ಏನೂ ಎಂಬುವುದು ಇಡೀ ವಿಶ್ವಕ್ಕೆ ಗೊತ್ತಿತ್ತು. ಆಗ ವಿದೇಶಿಗರಿಗೆ ಭಾರತ ದೇಶ ಬಲಿಷ್ಠ ಎಂಬುವುದು ಶ್ರೇಷ್ಠ ಎನ್ನುವುದು ತಿಳಿಯಿತು. ಇಡೀ ಭಾರತಕ್ಕೆ ಜಗತ್ತನ್ನು ತೆಗೆದುಕೊಂಡು ಹೋಗುವ ಶಕ್ತಿ ಭಗವಗ್ಗಿತೆಯಿಂದ ಬಂದಿದೆ. ಜಗತ್ತಿನ ಯಾವ ದೇಶಕ್ಕೂ ಹೋದರೂ ಪ್ರಧಾನಿ ನರೇಂದ್ರ ಮೋದಿ ಅವರು ಬಸವಣ್ಣ ಅವರನ್ನು ನೆನೆಯುತ್ತಾರೆ ಎಂದರು.ತಮ್ಮ ಜೀವಿತಾವಧಿಯಲ್ಲಿ ಸಮಾಜದ ಸುಧಾರಣೆಗೆ ಶ್ರಮಿಸಿದ ಶಿವರಾತ್ರೀಶ್ವರ ಶಿವಯೋಗಿಗಳ ಸೇವೆ ಅನನ್ಯ. ಸುತ್ತೂರು ಮಠ ಬಡವರಿಗೆ ಆಶ್ರಮದ ನೀಡುವ ಕೆಲಸ ಮಾಡಿಕೊಂಡು ಬಂದಿದೆ. ಶಿವರಾತ್ರೀಶ್ವರ ಶಿವಯೋಗಿಗಳ ಕಾರ್ಯವನ್ನು, ಈ ಮಠದ ಮಹತ್ವವನ್ನು ಜಗತ್ತಿಗೆ ಪರಿಚಯಿಸುವ ಕೆಲಸವನ್ನು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಕೆಲವರು ಕುರ್ಚಿ ಎತ್ತಿಕೊಂಡು ತಿರುಗಾಡುತ್ತಿದ್ದ ಕಂಡು ನಾನು ಇಲ್ಲಿಯೂ ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಕಾಳಗವೇ ಎಂಬಂತೆ ಭಾಶವಾಯಿತು ಎಂದು ವಿಜಯೇಂದ್ರ ಇದೇ ವೇಳೆ ಹಾಸ್ಯ ಚಟಾಕಿ ಹಾರಿಸಿದರು.