ಮಹದಾಯಿ ಜಾರಿಗೆ ಕೇಂದ್ರದ ಮೇಲೆ ನಿರಂತರ ಒತ್ತಡ

KannadaprabhaNewsNetwork |  
Published : Jul 10, 2026, 04:00 AM IST
ಫೋಟೊನಾರಾಯಣಪುರ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಆಗ್ರಹಿಸಿ ಬುಧವಾರ ನಡೆದ ಧರಣಿಯಲ್ಲಿ ರೈತರು, ಸಾರ್ವಜನಿಕರನ್ನು ಉದ್ದೇಶಿಸಿ ಯುವ ಮುಖಂಡ ಹಣಮಂತನಾಯಕ (ಬಬಲುಗೌಡ) ಮಾತನಾಡಿದರು.  | Kannada Prabha

ಸಾರಾಂಶ

ಮಹದಾಯಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಯೋಜನೆಗೆ ಸಂಬಂಧಿಸಿದ ಬಾಕಿ ಇರುವ ಎಲ್ಲ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಲು ಕೇಂದ್ರ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮಹದಾಯಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಯೋಜನೆಗೆ ಸಂಬಂಧಿಸಿದ ಬಾಕಿ ಇರುವ ಎಲ್ಲ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಲು ಕೇಂದ್ರ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ ಸೇರಿದಂತೆ ರಾಜ್ಯದ ಜಲಸಂಪನ್ಮೂಲ ಯೋಜನೆಗಳ ಕುರಿತು ಕೇಂದ್ರದೊಂದಿಗೆ ನಿರಂತರ ಮಾತುಕತೆ ನಡೆಸಲಾಗುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಸಂಬಂಧಪಟ್ಟ ಸಚಿವರನ್ನು ಹಲವು ಬಾರಿ ಭೇಟಿ ಮಾಡಿ ಯೋಜನೆಗಳಿಗೆ ಅಗತ್ಯ ಅನುಮತಿಗಳನ್ನು ಶೀಘ್ರ ನೀಡುವಂತೆ ಮನವಿ ಮಾಡಲಾಗಿದೆ ಎಂದರು.

ಕೇಂದ್ರ ಸಚಿವರನ್ನು ಹಲವು ಬಾರಿ ಭೇಟಿ ಮಾಡಿ ಚರ್ಚಿಸಿದ್ದೇನೆ. ದೆಹಲಿಯಲ್ಲೂ ಮತ್ತೆ ಈ ವಿಷಯವನ್ನು ಪ್ರಸ್ತಾಪಿಸಿದ್ದೇನೆ. ಜಲಸಂಪನ್ಮೂಲ ಯೋಜನೆಗಳ ವಿಚಾರದಲ್ಲಿ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ರೈತರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ ಎಂದರು.ಆಲಮಟ್ಟಿ ಜಲಾಶಯದಿಂದ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಸಮ್ಮತ ಪರಿಹಾರ ಹಾಗೂ ಸಮರ್ಪಕ ಪುನರ್ವಸತಿ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಕಳೆದ ಹಲವು ದಶಕಗಳಿಂದ ಆಲಮಟ್ಟಿ ಸಂತ್ರಸ್ತ ರೈತರಿಗೆ ಪೂರ್ಣ ಪ್ರಮಾಣದ ಪರಿಹಾರ ದೊರೆಯದೆ ಸಂಕಷ್ಟ ಎದುರಾಗಿದೆ. ಈ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಹಂತ ಹಂತವಾಗಿ ಪರಿಹಾರ ಒದಗಿಸುವ ಕಾರ್ಯ ಮುಂದುವರಿಯಲಿದೆ ಎಂದು ತಿಳಿಸಿದರು.ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೇ ಪರಿಹಾರ ಹೆಚ್ಚಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿತ್ತು. ಈಗಲೂ ಆಲಮಟ್ಟಿ ಸಂತ್ರಸ್ತ ರೈತರ ಸಮಸ್ಯೆಯನ್ನು ಆದ್ಯತೆಯಾಗಿ ಪರಿಗಣಿಸಿದ್ದೇವೆ. ಜಮೀನು ಕಳೆದುಕೊಂಡ ಪ್ರತಿಯೊಬ್ಬ ರೈತನಿಗೂ ನ್ಯಾಯಸಮ್ಮತ ಪರಿಹಾರ ದೊರೆಯಬೇಕು ಎಂಬುದು ಸರ್ಕಾರದ ನಿಲುವಾಗಿದೆ ಎಂದ ಅವರು, ಕೆಲವು ರೈತರು ನ್ಯಾಯಾಲಯದ ಮೊರೆ ಹೋಗಿ ಹೆಚ್ಚಿನ ಪರಿಹಾರಕ್ಕೆ ಆದೇಶ ಪಡೆದಿದ್ದರು. ಆದರೆ ಆ ಪ್ರಕರಣಗಳು ಸುಪ್ರೀಂನಲ್ಲಿ ಮರುಪರಿಶೀಲನೆಗೆ ಒಳಪಟ್ಟಿರುವ ಹಿನ್ನೆಲೆಯಲ್ಲಿ ಎಲ್ಲ ವಿಷಯಗಳನ್ನು ಕಾನೂನುಬದ್ಧವಾಗಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಪುನರ್ವಸತಿ ಯೋಜನೆಗೂ ಹೊಸ ರೂಪ ನೀಡುವ ಕುರಿತು ಸರ್ಕಾರ ಚರ್ಚೆ ನಡೆಸುತ್ತಿದೆ. ರೈತರಿಗೆ ಯಾವ ರೀತಿಯ ಪುನರ್ವಸತಿ ಹಾಗೂ ಪರಿಹಾರ ನೀಡಬೇಕು ಎಂಬುದರ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಯುತ್ತಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭರ್ತಿ ಮಾಡಿದ ಅರ್ಜಿಗಳನ್ನು ವಾರದೊಳಗೆ ಮರಳಿ ನೀಡಿ
ಅರಣ್ಯದಲ್ಲಿ ಹಿಡಿದ ಕುರಿಗಳ ಬಿಡುಗಡೆಗೆ ಆಗ್ರಹ