ನಿರಂತರ ಓದು ಆಸಕ್ತಿದಾಯಕ ಕಲಿಕೆಗೆ ಪೂರಕ

KannadaprabhaNewsNetwork |  
Published : Nov 09, 2024, 01:11 AM ISTUpdated : Nov 09, 2024, 01:12 AM IST
ಗದಗ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.1ರಲ್ಲಿ ಕುರ್ಚಿ-ಟೇಬಲ್, ನೀರಿನ ಬಾಟಲ್, ಗ್ರಂಥಾಲಯದ ಪುಸ್ತಕಗಳು, ರ್ಯಾಕ್, ಕ್ರೀಡಾ ಸಾಮಗ್ರಿಗಳ ವಿತರಣಾ ಸಮಾರಂಭ ಜರುಗಿತು. | Kannada Prabha

ಸಾರಾಂಶ

ಶಾಲೆಯ ಭೌತಿಕ ಅವಶ್ಯಕತೆಗಳನ್ನು ಪೂರೈಸಿ ಸರ್ಕಾರಿ ಶಾಲೆಗಳ ಸಬಲೀಕರಣ ಮಾಡುವಲ್ಲಿ ಶ್ರಮಿಸುತ್ತಿದ್ದಾರೆ

ಗದಗ: ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮಾನಸಿಕ ಹಾಗೂ ದೈಹಿಕ ಸದೃಢತೆ ಅವಶ್ಯಕ. ಆಟ-ಪಾಠಗಳೊಂದಿಗೆ ನಿರಂತರ ಓದು-ಬರಹ ವಿದ್ಯಾರ್ಥಿಗಳಲ್ಲಿ ಆಸಕ್ತಿದಾಯಕ ಕಲಿಕೆಯನ್ನುಂಟು ಮಾಡುತ್ತದೆ ಎಂದು ಸಂಪನ್ಮೂಲ ವ್ಯಕ್ತಿ ಕವಿತಾ ಬೇಲೇರಿ ಹೇಳಿದರು.

ಅವರು ಇನ್ನರ್‌ ವೀಲ್ ಕ್ಲಬ್ ಗದಗ-ಬೆಟಗೇರಿ ದತ್ತು ಪಡೆದ ನಗರದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.1ರಲ್ಲಿ ಕ್ಲಬ್ ವತಿಯಿಂದ ಕೊಡ ಮಾಡಿದ ಕುರ್ಚಿ-ಟೇಬಲ್, ನೀರಿನ ಬಾಟಲ್, ಗ್ರಂಥಾಲಯದ ಪುಸ್ತಕಗಳು, ರ್ಯಾಕ್, ಕ್ರೀಡಾ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಅಂತಾರಾಷ್ಠ್ರೀಯ ಸಂಸ್ಥೆ ಇನ್ನರ್‌ ವೀಲ್ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಶಾಲೆಗೆ ಬೇಕಾದ ಸಾಮಗ್ರಿ ಹಾಗೂ ಶಾಲೆಯ ಭೌತಿಕ ಅವಶ್ಯಕತೆಗಳನ್ನು ಪೂರೈಸಿ ಸರ್ಕಾರಿ ಶಾಲೆಗಳ ಸಬಲೀಕರಣ ಮಾಡುವಲ್ಲಿ ಶ್ರಮಿಸುತ್ತಿದ್ದಾರೆ. ನಮ್ಮ ಶಿಕ್ಷಣ ಇಲಾಖೆ ಇವರಿಗೆ ಅಭಾರಿಯಾಗಿದೆ ಎಂದರು.

ಕ್ಲಬ್ ಅಧ್ಯಕ್ಷೆ ನಾಗರತ್ನಾ ಮಾರನಬಸರಿ ಮಾತನಾಡಿ, ಗದಗ 4 ಹಾಗೂ ಗ್ರಾಮೀಣ ಭಾಗದ 1 ಶಾಲೆಯನ್ನು ಈ ವರ್ಷಕ್ಕೆ ದತ್ತು ಪಡೆಯಲಾಗಿದ್ದು, ಶಾಲೆಯ ಕಲಿಕಾ ಚಟುವಟಿಕೆಗಳಿಗೆ ಪೂರಕವಾಗಿ ಶ್ರಮಿಸಲಾಗುತ್ತಿದೆ ಎಂದರು.

ಕ್ಲಬ್‌ನ ಸಿಎಲ್‌ಸಿಸಿ ಸುಮಾ ಪಾಟೀಲ ಮಾತನಾಡಿ, ಅತ್ಯಂತ ಹಳೆಯದಾದ ಸರ್ಕಾರಿ ಮಾದರಿ ನಂ.1 ಶಾಲೆಯನ್ನು ನಾವು ದತ್ತು ಪಡಯಲು ನಮಗೆ ಹೆಮ್ಮೆಯಾಯಿತು. ಈ ಶಾಲೆಯಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳು ಇಂದು ದೇಶದ ಎಲ್ಲ ಕಡೆ ಇದ್ದು ಶತಮಾನೋತ್ಸವ ಸಂಭ್ರಮಾಚರಣೆ ಜರುಗಲಿ ಎಂದರು.

ಪ್ರಾಯೋಜಕತ್ವವನ್ನು ಕ್ಲಬ್‌ನ ಅನ್ನಪೂರ್ಣ ವರವಿ, ಶಾಂತಾ ನಿಂಬಣ್ಣವರ, ಮೀನಾಕ್ಷಿ ಕೊರವನವರ ವಹಿಸಿಕೊಂಡಿದ್ದರು.

ಕ್ಲಬ್‌ನ ಪಿಡಿಸಿ ಪ್ರೇಮಾ ಗುಳಗೌಡ್ರ, ಕಾರ್ಯದರ್ಶಿ ವೀಣಾ ತಿರ್ಲಾಪೂರ, ಪುಷ್ಪಾ ಬಂಡಾರಿ, ಮೀನಾಕ್ಷಿ ಕೊರವನವರ, ಶಾಲೆಯ ಮುಖ್ಯೋಪಾಧ್ಯಾಯಿನಿ ವಿಜಯಾ ಜಕರಡ್ಡಿ, ಸಹಶಿಕ್ಷಕರಾದ ಪವಿತ್ರಾ ಹಿರೇಮಠ, ವಿಜಯಲಕ್ಷ್ಮೀ ಕುಂಟೋಜಿ, ಪ್ರೀಯಾ ಪವಾರ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5-6 ತಿಂಗಳಿಂದ ನೀರು ಪೋಲು: ಕ್ರಮಕೈಗೊಳ್ಳದ ಅಧಿಕಾರಿಗಳು
ತಮ್ಮ ಮೇಲಿನ ಆರೋಪ ಸುಳ್ಳು, ಆಧಾರ ರಹಿತ : ಮುನೀಶ್‌ ಮೌದ್ಗಿಲ್‌