ಕಾರ್ಮಿಕ ಸಂಘಟನೆಗಳಿಂದ ನಿರಂತರ ಹೋರಾಟ

KannadaprabhaNewsNetwork |  
Published : May 02, 2025, 12:15 AM IST

ಸಾರಾಂಶ

ಗ್ಯಾಟ್ ಒಪ್ಪಂದ, ಡೆಂಕಲ್ ಒಪ್ಪಂದಕ್ಕೆ ಸಹಿ ಹಾಕಿದಾಗ ಆರಂಭವಾದ ಖಾಸಗೀಕರಣ, ಜಾಗತೀಕರಣ, ಉದಾರೀಕರಣದಂತಹ ಅತಂಕರಣಗಳಿಲ್ಲದ ಕರಣಗಳು ಪ್ರಾರಂಭವಾಗಿ ಉದ್ಯೋಗ, ಸಾಮಾಜಿಕ ಭದ್ರತೆಗಳನ್ನು ಕಿತ್ತುಕೊಳ್ಳುವ ಕೆಲಸಗಳು ನಡೆಯುತ್ತಿವೆ

ಕನ್ನಡಪ್ರಭ ವಾರ್ತೆ, ತುಮಕೂರು

ಗ್ಯಾಟ್ ಒಪ್ಪಂದ, ಡೆಂಕಲ್ ಒಪ್ಪಂದಕ್ಕೆ ಸಹಿ ಹಾಕಿದಾಗ ಆರಂಭವಾದ ಖಾಸಗೀಕರಣ, ಜಾಗತೀಕರಣ, ಉದಾರೀಕರಣದಂತಹ ಅತಂಕರಣಗಳಿಲ್ಲದ ಕರಣಗಳು ಪ್ರಾರಂಭವಾಗಿ ಉದ್ಯೋಗ, ಸಾಮಾಜಿಕ ಭದ್ರತೆಗಳನ್ನು ಕಿತ್ತುಕೊಳ್ಳುವ ಕೆಲಸಗಳು ನಡೆಯುತ್ತಿವೆ. ಈ ನೀತಿಗಳ ವಿರುದ್ದ ಕಾರ್ಮಿಕ ಸಂಘಗಳು ನಿರಂತರವಾಗಿ ಸಾಮಾಜಿಕ ಭದ್ರತೆಗಾಗಿ ಹೋರಾಟಗಳನ್ನು ನಡೆಸುತ್ತಿವೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ, ರಂಗಕರ್ಮಿ, ನಟ ಬಿ. ಸುರೇಶ್ ಅಭಿಪ್ರಾಯಪಟ್ಟರು.

ಅವರು ವಿಶ್ವಕಾರ್ಮಿಕರ ದಿನಾಚರಣೆಯ ಅಂಗವಾಗಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ತುಮಕೂರು ನಗರದ ಟೌನ್‌ಹಾಲ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ದಿನಕ್ಕೆ 16 ರಿಂದ 18 ಗಂಟೆಗಳ ಕಾಲ ದುಡಿಸಿಕೊಳ್ಳುತ್ತಿದ್ದ ಬಂಡವಾಳಗಾರರ ವ್ಯವಸ್ಥೆಯ ವಿರುದ್ದ ದಿನಕ್ಕೆ 8 ಗಂಟೆಯ ಕೆಲಸಕ್ಕೆ ಆಗ್ರಹಿಸಿ ನಡೆಸಿದ ಹೋರಾಟಕ್ಕೆ ಸುಮಾರು 250 ವರ್ಷಗಳ ಇತಿಹಾಸವಿದೆ. ತಮಗೆ ದಕ್ಕಬೇಕಾದ ಪ್ರಸ್ತುತ ಸವಲತ್ತುಗಳ ಬಗ್ಗೆ ಕಾರ್ಮಿಕರು ಮಾತನಾಡದ ರೀತಿಯಲ್ಲಿ ಹಲವು ರೀತಿಯ ಬೀಗಗಳನ್ನು ಹಾಕಲಾಗುತ್ತಿದೆ. ಕಾನೂನಿನ ಬೀಗ, ಭಯದ ಬೀಗ, ಸಂಬಳದ ಬೀಗ, ವಜಾಗೊಳಿಸುವ ಬೀಗ ಇಂತಹ ಸಂಧರ್ಭದಲ್ಲಿ ಕಾರ್ಮಿಕರ ಹಕ್ಕುಗಳ ಬಗ್ಗೆ ಧ್ವನಿ ಎತ್ತುವ ರೀತಿಯಲ್ಲಿ ಕಾರ್ಮಿಕ ದಿನಾಚರಣೆಯ ಮೂಲಕ ಜಾಗೃತಗೊಳಿಸುವ ಕೆಲಸಗಳನ್ನು ಕಾರ್ಮಿಕ ಸಂಘಟನೆಗಳು ಇಂದು ಮಾಡುತ್ತಿವೆ ಎಂದರು.

ಇದೇ ತುಮಕೂರು ನಗರದಲ್ಲಿ ಸುಮಾರು 15 ರಿಂದ 20 ಸಾವಿರ ಮಂದಿಗೆ ಉದ್ಯೋಗ ನೀಡಿದ್ದ ಎಚ್.ಎಂ.ಟಿ. ಕೈಗಡಿಯಾರ ಕಾರ್ಖಾನೆ ಇಂದು ಖಾಸಗೀಕರಣದ ಉತ್ತೇಜನದಿಂದ ನಾಶವಾಗಿದೆ. ಇದರಿಂದ ಸಾಮಾಜಿಕ ಭದ್ರತೆ, ಉದ್ಯೋಗ ಭದ್ರತೆ ಇಲ್ಲದಂತಾಗಿದೆ ಎಂದರು.

ಕನಿಷ್ಠ ವೇತನವಿಲ್ಲದೆ ದುಡಿಯುತ್ತಿದ್ದ ಪೌರಕಾರ್ಮಿಕರಿಗೆ ಕನಿಷ್ಠ ಕೂಲಿ ಜಾರಿಗೆ ಆಗ್ರಹಿಸಿ ಸಂಘ ಸುಮಾರು 20 ವರ್ಷಗಳಿಂದ ನಿರಂತರ ಹೋರಾಟದ ಭಾಗವಾಗಿ ಪೌರಕಾರ್ಮಿಕರಿಗೆ 18 ಸಾವಿರ ಕನಿಷ್ಠ ಕೂಲಿ ಜಾರಿಗೆ ಕೋರ್ಟ್ ಆದೇಶ ನೀಡಿದರೆ ಅವರನ್ನು ಗುತ್ತಿಗೆ ಆಧಾರದಲ್ಲಿ ದುಡಿಸಿಕೊಳ್ಳುವ ಕೆಲಸಕ್ಕೆ ದೂಡುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್‌ ಮುಜೀಬ್ ಜನರನ್ನು ಭಾವನಾತ್ಮಕವಗಿ ವಿಭಜನೆಯ ಮೂಲಕ ದ್ವೇಷ ಬೆಳೆಸಿ ಉದ್ಯೋಗ, ಬಡತನ, ಅಪೌಷ್ಠಿಕತೆ, ವಸತಿ, ಮಹಿಳೆಯರ ಮತ್ತು ದಲಿತರ ಮೇಲಿನ ದೌರ್ಜನ್ಯ, ಬೆಲೆ ಏರಿಕೆ ಸೇರಿದಂತೆ ಮುಂತಾದ ಜ್ವಲಂತ ಸಮಸ್ಯೆಗಳನ್ನು ಮರೆಮಾಚಲಾಗುತ್ತಿದೆ ಎಂದರು.

ಶ್ರಮ ಶಕ್ತಿಯನ್ನು ಅಪಮಾನಿಸಲಾಗುತ್ತಿದ್ದು ದುಡಿಯುವ ಜನರು ಇದರ ವಿರುದ್ದಸಂಘಟಿತರಾಗಿ ಮೇ 20 ರಂದು ನಡೆಯುವ ಅಖಿಲ ಭಾರತ ಮುಷ್ಕರವನ್ನು ಯಶಸ್ವಿಗೊಳಿಸಲು ಆಗ್ರಹಿಸಿದರು. ಸಿಐಟಿಯು ಜಿಲಾ ಕಾರ್ಯದರ್ಶಿ ಜಿ.ಕಮಲ, ಎ. ಲೋಕೇಶ್. ಎಚ್.ಡಿ.ನಾಗೇಶ್, ಬಿ.ಉಮೇಶ್, ಗುಲ್ಜಾರ್‌ಭಾನು, ನಾಗರಾಜು, ಅನಸೂಯ ಮಹಿಳಾ ಸಂಘಟನೆಯ ಮುಖಂಡರಾದ ಕಲ್ಪನ, ಶಿವಕುಮರಸ್ವಾಮಿ, ಕೊಳಗೇರಿ ಸಂಘಟನೆಯ ಎ. ನರಸಿಂಹಮೂರ್ತಿ, ಸ್ಟಾö್ಯನ್ಲಿ ಸುಕುಮಾರ್, ಮಧುಸೂದನ್, ವಸೀಂಅಕ್ರಂ, ಇಂತು, ಗಣಪತಿ, ಮಂಜುನಾಥ್, ಶ್ರೀನಿವಾಸ್, ಮಹೇಶ್, ಗಂಗಮ್ಮ, ಸೇರಿದಂತೆ ಇತರರು ಉಪಸ್ಥಿತರಿದ್ದರು. ಖಲೀಲ್ ಸ್ವಾಗತಿಸಿ ಎನ್.ಕೆ.ಸುಬ್ರಮಣ್ಯ ನಿರೂಪಿಸಿ ಎ.ಲೋಕೇಶ್ ವಂದಿಸಿದರು. ಪುಷ್ಪ ಮತ್ತು ಸಂಗಡಿಗರು ಕ್ರಾಂತಿಗೀತೆಗಳನ್ನು ಹಾಡಿದರು. ರಂಗಧಾಮಯ್ಯ, ಸುಜೀತ್, ಪುಷ್ಪ, ಆಧಿಲಕ್ಷಿ ನಾಗಸುಂದರರವರ ನೇತೃತ್ವದಲ್ಲಿ ನಡೆದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5-6 ತಿಂಗಳಿಂದ ನೀರು ಪೋಲು: ಕ್ರಮಕೈಗೊಳ್ಳದ ಅಧಿಕಾರಿಗಳು
ತಮ್ಮ ಮೇಲಿನ ಆರೋಪ ಸುಳ್ಳು, ಆಧಾರ ರಹಿತ : ಮುನೀಶ್‌ ಮೌದ್ಗಿಲ್‌