ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಕಂಬಕ್ಕೆ ಅಳವಡಿಸಿದ್ದ ಉಕ್ಕಿನ ಸಲಾಕೆ ನಂದೀಶ್ ಅವರ ಸೊಂಟದ ಭಾಗಕ್ಕೆ ಆಳವಾಗಿ ಚುಚ್ಚಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಗಾಯಾಳುವನ್ನು ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ನಂತರ ಮಡಿಕೇರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಇದೇ ವೇಳೆ ಈ ಕಂಬದ ಸಮೀಪದ ಮತ್ತೊಂದು ಕಂಬದಲ್ಲಿದ್ದ ಇನ್ನೊಬ್ಬ ಗುತ್ತಿಗೆ ಕಾರ್ಮಿಕ ಯೋಗೇಶ್ ಎಂಬವರು ಕೂಡ ಕೆಳಗೆ ಬಿದ್ದು ಕೈ ಮುರಿದುಕೊಂಡಿದ್ದಾರೆ.ಸಾರ್ವಜನಿಕರ ಆಕ್ರೋಶ: ಸುಂಟಿಕೊಪ್ಪ ಸೇರಿದಂತೆ ಈ ವ್ಯಾಪ್ತಿಯಲ್ಲಿ ಅಳವಡಿಸಿರುವ ಎಲ್ಲ ವಿದ್ಯುತ್ ಕಂಬಗಳು ಕೇವಲ 2 ಅಡಿಗಳ ಆಳದಲ್ಲಿದ್ದು, ಅಪಾಯದ ಮುನ್ಸೂಚನೆ ನೀಡುತ್ತಿದೆ. ಕೋಟಿಗಟ್ಟಲೇ ಅನುದಾನದಲ್ಲಿ ಆಳವಡಿಸುತ್ತಿರುವ ಹೊಸ ವಿದ್ಯುತ್ ಕಂಬಗಳು ಈಗಾಗಲೇ ಆಳವಿಲ್ಲದೇ ವಾಲುತ್ತಿವೆ ಎಂದು ಸಾರ್ವಜನಿಕರು ಆಕ್ಷೇಪಿಸಿದ್ದಾರೆ.ಕೂಡಲೇ ಅವೈಜ್ಞಾನಿಕ ಮಾದರಿಯಲ್ಲಿ ಕಂಬಗಳನ್ನು ಅಳವಡಿಸಿದ ಗುತ್ತಿಗೆದಾರ ಹಾಗೂ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಿ ಅವರ ಮೇಲೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎಂ.ಲತೀಫ್, ಪೊಲೀಸರು, ಸೆಸ್ಕ್ ಕಿರಿಯ ಅಭಿಯಂತರ ಲವ ಭೇಟಿ ಪರಿಶೀಲನೆ ನಡೆಸಿದ್ದಾರೆ.ಘಟನೆ ಸಂಬಂಧ ಕಾರ್ಮಿಕರನ್ನು ಕರೆತಂದ ಮೇಲ್ವಿಚಾರಕರ ಮೇಲೆ ನಿರ್ಲಕ್ಷ್ಯ ಆರೋಪದಡಿ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.