ದತ್ತು ಗ್ರಾಮದ ಉದ್ಘಾಟನೆ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಕನಸು ನನಸಾಗಬೇಕಾದರೆ ಎಲ್ಲ ಗ್ರಾಮಗಳು ಸ್ವಚ್ಛತೆಯಿಂದ ಕೂಡಿರಬೇಕು. ಅಂದಾಗ ಮಾತ್ರ ಅವರ ಕನಸು ನನಸಾಗುತ್ತದೆ. ಈಗ ನಡೆಯುತ್ತಿರುವ ಸ್ವಚ್ಛತಾ ಅಭಿಯಾನದ ಕಾರ್ಯಕ್ರಮವೂ ಒಂದೇ ದಿನಕ್ಕೆ ಸೀಮಿತವಾಗದೆ ದಿನನಿತ್ಯವೂ ಸಹಿತ ಗ್ರಾಮಸ್ಥರೆಲ್ಲರೂ ತಮ್ಮ ಮನೆಯ ಜೊತೆಗೆ ಸುತ್ತಮುತ್ತಲು ಸ್ವಚ್ಛಗೊಳಿಸುವ ಮೂಲಕ ರೋಗ ಮುಕ್ತ ಗ್ರಾಮ ಮಾಡುವಲ್ಲಿ ಮುಂದಾಗಬೇಕು ಎಂದರು.
ತಾಪಂ ಇಒ ಪಂಪಾಪತಿ ಹಿರೇಮಠ ಮಾತನಾಡಿ, ಗ್ರಾಮದಲ್ಲಿ ಎಲ್ಲರೂ ಶಿಕ್ಷಣವಂತರಾಗಬೇಕು, ಅನಕ್ಷರತೆ ತೊಲಗಬೇಕು. ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ಮುಂದಾಗಬೇಕು. ಸಾರ್ವಜನಿಕರು ಹೆಸರಿಗೆ ಮಾತ್ರ ಶೌಚಾಲಯಗಳನ್ನು ನಿರ್ಮಿಸಿಕೊಂಡಿದ್ದು, ಅದನ್ನು ಸದುಪಯೋಗ ಮಾಡುತ್ತಿಲ್ಲ. ಈಗಲೂ ಸಹಿತ ಬಯಲು ಬಹಿರ್ದೆಸೆಗೆ ಹೋಗುತ್ತಿದ್ದು, ಇದರಿಂದ ಅನೇಕ ಕಾಯಿಲೆಗಳಿಗೆ ತುತ್ತಾಗಬೇಕಾಗುತ್ತದೆ, ವಾತಾವರಣ ಮಲೀನವಾಗುತ್ತದೆ. ಬಯಲಿಗೆ ಹೋಗುವ ಬದಲಿಗೆ ನಿರ್ಮಿಸಿಕೊಂಡ ಶೌಚಾಲಯಗಳನ್ನು ಬಳಸಿಕೊಳ್ಳಬೇಕು ಎಂದರು.
ಈ ಸಂದರ್ಭ ತಾಲೂಕು ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್. ಪೂಜೇರಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಚೌಳಗಿ, ಬಿಇಒ ಸುರೇಂದ್ರ ಕಾಂಬಳೆ, ಸಿಡಿಪಿಒ ಯಲ್ಲಮ್ಮ ಹಂಡಿ, ಮೇಲ್ವಿಚಾರಕಿ ಅನ್ನಪೂರ್ಣ ಪಾಟೀಲ, ಪಿಡಿಒ ದಸ್ತಗೀರಸಾಬ ಬಡಿಗೇರ, ಎನ್ಎಸ್ಎಸ್ ಅಧಿಕಾರಿ ಡಾ. ನಾಗರಾಜ ಹೀರಾ, ವಕೀಲರಾದ ಎಚ್.ಬಿ ಕುರಿ, ಅಯ್ಯಪ್ಪ ಪಲ್ಲೇದ, ಪರಸಪ್ಪ ಗುಜಮಾಗಡಿ, ರಾಯನಗೌಡ ಎಲ್., ಮಹಾಂತೇಶ ನಾಯಕ, ಆನಂದ ಡೊಳ್ಳಿನ, ಎಎಸೈ ತಾಯಪ್ಪ ಸೇರಿದಂತೆ ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ, ಬೆಂಚಮಟ್ಟಿ ಗ್ರಾಮಸ್ಥರು ಇದ್ದರು. ವಕೀಲರ ಸಂಘದ ಅಧ್ಯಕ್ಷ ಸಂಗನಗೌಡ ಪಾಟೀಲ ಸ್ವಚ್ಛತಾ ಆಂದೋಲನದ ಪ್ರಮಾಣ ವಚನ ಬೋಧಿಸಿದರು. ಸುರೇಶ ಜರಕುಂಟಿ ಸ್ವಾಗತಿಸಿದರು.