ಕನ್ನಡಪ್ರಭ ವಾರ್ತೆ ಔರಾದ್
ತಾಲೂಕಿನ ಯನಗುಂದಾ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಾಲೆಯ ಅಭಿವೃದ್ಧಿಗೆ ಪ್ರತಿಯೊಬ್ಬರ ಕಾಣಿಕೆ ಅತ್ಯಮೂಲ್ಯವಾಗಿರುತ್ತದೆ. ಮಕ್ಕಳಿಲ್ಲದೆ ಪಾಲಕರಿಲ್ಲ, ಪಾಲಕರಿಲ್ಲದೆ ಶಿಕ್ಷಕರಿಲ್ಲ, ಶಿಕ್ಷಕರಿಲ್ಲದೆ ಶಾಲೆ ಇಲ್ಲ ಎಂಬುದನ್ನು ನಾವೆಲ್ಲರೂ ಮನವರಿಕೆ ಮಾಡಿಕೊಳ್ಳಬೇಕು ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಜಿಲ್ಲಾ ಉಪಾಧ್ಯಕ್ಷ ಪಂಡರಿ ಆಡೆ ಮಾತನಾಡಿ, ಯನಗುಂದಾ ಶಾಲೆಯು ತಾಲೂಕಿನ ಅತ್ಯುತ್ತಮ ಶಾಲೆಗಳಲ್ಲಿ ಒಂದಾಗಿದೆ. ಇಲ್ಲಿ ಕಲಿಯುವ ಮಕ್ಕಳು ಯಾವ ಖಾಸಗಿ ಶಾಲೆಗೂ ಕಮ್ಮಿ ಇಲ್ಲ ಎಂದರು.ಡಯೆಟ್ ಉಪನ್ಯಾಸಕ ಲಕ್ಷ್ಮಣ ತುರೆ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಘುಳೆ, ಎಕಲಾರ ಶಾಲೆ ಶಿಕ್ಷಕ ದಾಸ ಸಾಹಿತ್ಯ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಬಿ.ಎಂ ಅಮರವಾಡಿ, ಸುಂದಾಳ ಗ್ರಾಪಂ ಅಧ್ಯಕ್ಷ ಮಾರುತಿ ಮಾತನಾಡಿದರು.
ಶಾಲೆಯ ಮಕ್ಕಳಿಂದ ಸುಮಾರು 20ಕ್ಕೂ ಅಧಿಕ ಗೀತೆಗಳ ಮೇಲೆ ನೃತ್ಯಗಳು, ನಾಟಕ, ಏಕಪಾತ್ರಾಭಿನಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.