ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಂವಿಧಾನ ಜಾಗೃತಿ ಕುರಿತಂತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ಭಾರತ ಸಂವಿಧಾನ ಜಾಗೃತಿ ಜಾಥಾವು ಜ.26ರಂದು ಜಿಲ್ಲಾಮಟ್ಟದಲ್ಲಿ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ ಅವರು ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.ಸಂವಿಧಾನ ಜಾಗೃತಿ ಜಾಥಾವು ಯಾದಗಿರಿ ಜಿಲ್ಲೆಯ ಪ್ರತಿಯೊಂದು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ 122 ಗ್ರಾಮ ಪಂಚಾಯಿತಿ ಹಾಗೂ 07 ಸ್ಥಳೀಯ ನಗರ ಪ್ರದೇಶಗಳವರೆಗೆ ಪ್ರತಿದಿನ ಒಂದು ತಾಲೂಕಿನಲ್ಲಿ ನಾಲ್ಕರಿಂದ ಐದು ಗ್ರಾಮ ಪಂಚಾಯಿತಿಗಳಿಗೆ ಸ್ತಬ್ಧಚಿತ್ರಗಳೊಂದಿಗೆ ಆಗಮಿಸಲಿದೆ. ಸಂವಿಧಾನ ಜಾಗೃತಿ ಜಾಥಾವು ಯಾವುದೇ ಆಕ್ಷೇಪಣೆಗಳಿಗೆ ಅವಕಾಶ ಮಾಡದಂತೆ ಜವಾಬ್ದಾರಿಯಿಂದ ನಿರ್ವಹಿಸುವ ಉದ್ದೇಶದಿಂದ ಪ್ರತಿ ತಾಲೂಕು ಮತ್ತು ಪ್ರತಿ ಪಂಚಾಯಿಯಿಗಳಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದರು.
ಸಂವಿಧಾನ ಜಾಗೃತಿ ಜಾಥಾದಲ್ಲಿ ಎಲ್ಲಾ ಸಂಘ ಸಂಸ್ಥೆಗಳು, ಸಾರ್ವಜನಿಕರು, ನಾಗರಿಕರು, ಶಿಕ್ಷಕರು, ಕಾಲೇಜು ವಿದ್ಯಾರ್ಥಿಗಳು, ನೌಕರರು ಮತ್ತು ಅಧಿಕಾರಿಗಳನ್ನು ಒಳಗೊಂಡಂತೆ ಸಂವಿಧಾನ ಜಾಗೃತಿ ಜಾಥಾದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಈ ಕುರಿತು ಹಲವಾರು ಜನ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಎಲ್ಲರಿಗೂ ಯಾದಗಿರಿ ಜಿಲ್ಲೆಯ ಸಾಮಾಜಿಕ ಜಾಲತಾಣಗಳಾದ ಟ್ವಿಟ್ಟರ್, ಫೇಸಬುಕ್, ಯೂಟ್ಯೂಬ್, ಇನ್ ಸ್ಟಾಗ್ರಾಂ, ವಾಟ್ಸಪ್ ಅಪ್ಲೋಡ್ ಮಾಡಲಾದ ವೀಡಿಯೋಗಳಿಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಲೈಕ್ ಮಾಡಲು ಹಾಗೂ ಯಶಸ್ವಿಗೊಳಿಸುವಂತೆ ಕೋರುತ್ತೇವೆ ಎಂದು ಅವರು ತಿಳಿಸಿದ್ದಾರೆ.