ರೈತರ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಕೊಡುಗೆ: ಮನು ಮುತ್ತಪ್ಪ

KannadaprabhaNewsNetwork |  
Published : Nov 15, 2024, 12:30 AM IST
ಚಿತ್ರ.1: ವಿಚಾರ ಸಂರ್ಕೀಣದ ಸಮಾರಂಭದಲ್ಲಿ ಪಾಲ್ಗೊಂಡಿರುವ ಅತಿಥಿಗಳು. | Kannada Prabha

ಸಾರಾಂಶ

ಚೆಟ್ಟಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನರೇಂದ್ರಮೋದಿ ಭವನದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಚಳವಳಿ ಬಲಪಡಿಸುವ ವಿಚಾರ ಸಂಕಿರಣ ಜಿಲ್ಲಾ ಸಹಕಾರಿ ಯೂನಿಯನ್ ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘ, ರಾಜ್ಯ ಸಹಕಾರ ಮಹಾ ಮಂಡಳಿ ಬೆಂಗಳೂರು ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ವಿಕಸಿತ ಭಾರತ ಮಹತ್ವದ ಘಟ್ಟದತ್ತ ಸಾಗುತ್ತಿದ್ದು, ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರಕ್ಕೆ ಶಕ್ತಿ ತುಂಬಿಸುವ ಮೂಲಕ ಅನ್ನದಾತ ರೈತರ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ ಎಂದು ಕೊಡಗು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಹೇಳಿದ್ದಾರೆ.

ಚೆಟ್ಟಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನರೇಂದ್ರಮೋದಿ ಭವನದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಚಳವಳಿ ಬಲಪಡಿಸುವ ವಿಚಾರ ಸಂಕಿರಣದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಸಹಕಾರಿ ಯೂನಿಯನ್ ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘ, ರಾಜ್ಯ ಸಹಕಾರ ಮಹಾ ಮಂಡಳಿ ಬೆಂಗಳೂರು ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ಸಮಾರಂಭ ನಡೆಯಿತು.

ಕೇಂದ್ರ ಸರ್ಕಾರದ ವಿಕಸಿತ ಭಾರತದ ವೇಗಕ್ಕೆ ತಕ್ಕಂತೆ ಅರ್ಥಿಕ ಅಭಿವೃದ್ಧಿಗೆ ಸಹಕಾರ ಕ್ಷೇತ್ರವನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ. ಭಾರತ ಅರ್ಥಿಕವಾಗಿ ಪ್ರಪಂಚದ 4ನೇ ದೇಶವಾಗಿದ್ದು, 2028 ರಲ್ಲಿ 3ನೇ ಸ್ಥಾನ ಬರಲಿದೆ. ವಿವಿದ್ಧೋದ್ದೇಶ ಸಹಕಾರ ಸಂಘ ರಚಿಸಲು ಕೇಂದ್ರ ಸರಕಾರ ಅನುದಾನ ನೀಡುತ್ತಿರುವುದು ಆಧುನಿಕ ಕೃಷಿ ಪದ್ಧತಿಗೆ ಉತ್ತೇಜಿಸಲಾಗುತ್ತಿದೆ ಎಂದೂ ಹೇಳಿದರು.

ಸಹಕಾರ ಚಳವಳಿ ಬಲಪಡಿಸುವ ಬಗ್ಗೆ ಪ್ರಧಾನ ಭಾಷಣಕಾರ, ಕೊಡಗು ಜಿಲ್ಲಾ ಸಹಕಾರ ತರಬೇತಿ ಕೇಂದ್ರದ ಪ್ರಾಂಶುಪಾಲೆ ಡಾ.ರೇಣುಕಾ ಮಾತನಾಡಿ ಪ್ರಪಂಚದ 195 ರಾಷ್ಟ್ರಗಳ ಪೈಕಿ 130 ರಾಷ್ಟ್ರದಲ್ಲಿ ಸಹಕಾರ ಚಳವಳಿ ನಡೆಸಲಾಗುತ್ತಿದೆ. ಕೇಂದ್ರ ಬಜೆಟ್‌ನಲ್ಲಿ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಒದಗಿಸಲಾಗುತ್ತಿದೆ. ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಆಹಾರ ಭದ್ರತೆಗೆ ಒತ್ತು, ಹಸಿವು ಮುಕ್ತ ಭಾರತ ದೇಶದ ಪ್ರಧಾನಿಯ ಆಶಾಯವಾಗಿದೆ. ಹೊಂಸ್ಟೇ ಮಾಲಿಕರು ಪದವೀಧರರ ಮಹಿಳೆಯರ ಸಹಕಾರ ಸಂಘ ಹೆಚ್ಚಾಗಿ ಸ್ಥಾಪನೆ ಆಗುವ ಮೂಲಕ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ವಿವರಿಸಿದರು.

ಅಧ್ಯಕ್ಷತೆ ವಹಿಸಿದ ಚೆಟ್ಟಳ್ಳಿ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲರಂಡ ಮಣಿ ಉತ್ತಪ್ಪ, ರೈತರ ಅಭಿವೃದ್ಧಿಯಾದರೆ ದೇಶವು ಎಲ್ಲಾ ರಂಗಗಳಲಲ್ಲೂ ಸುಧಾರಿಸಲಿದೆ. ಸಹಕಾರಿಗಳ ಬೆಂಬಲದಿಂದ ಸಂಘ ಬಲಿಷ್ಠವಾಗಿ ಬೆಳೆದಿದೆ ಎಂದರು.

ಚೆಟ್ಟಳ್ಳಿ ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಬಿದ್ದಂಡ ಅಚ್ಚಯ್ಯ, ಕೆ.ಎಂ.ಅಪ್ಪಣ್ಣ, ಮಾಜಿ ಉಪಾಧ್ಯಕ್ಷರಾದ ಕೊಜಾಲು ಪೂವಯ್ಯ, ಎಚ್.ಎಸ್.ತಿಮ್ಮಪ್ಪಯ್ಯ, ಮಾಜಿ ನಿರ್ದೇಶಕರಾದ ಟಿ.ಎಸ್.ದನಂಜಯ, ಅಡಿಕೇರ ಜಯ, ಸೀತಮ್ಮ ಸೇರಿದಂತೆ 27 ಮಂದಿಯನ್ನು ಸನ್ಮಾನಿಸಲಾಯಿತು.

ಜಿಲ್ಲಾ ಹಾಪ್‌ಕಾಮ್ ಅಧ್ಯಕ್ಷ ರಮೇಶ್ ಚಂಗಪ್ಪ, ಜನತಾ ಬಜಾರ್ ಅಧ್ಯಕ್ಷ ರವಿ ಬಸಪ್ಪ, ಗುಡ್ಡೆಹೊಸೂರು ಹಾಲು ಒಕ್ಕೂಟದ ಅಧ್ಯಕ್ಷ ಡಿ.ಡಿ.ಮಲೇಶ್, ಸಹಕಾರಿ ಯೂನಿಯನ್ ಉಪಾಧ್ಯಕ್ಷ ಮನು ರಾಮಚಂದ್ರ, ಸಹಕಾರಿ ಇಲಾಖೆ ಉಪನಿಬಂಧಕಿ ಶೈಲಜಾ, ಮಾಜಿ ಅಧ್ಯಕ್ಷ ಬಿದ್ದಂಡ ಅಚ್ಚಯ್ಯ ಧ್ವಜಾರೋಹಣ ನೇರವೇರಿಸಿದರು.

ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ನಿರೂಪಿಸಿದರು. ಚೆಟ್ಟಳ್ಳಿ ವಿಎಸ್‌ಎಸ್‌ಎನ್ ಸಿಇಒ ನಂದಿನಿ ಪ್ರಾರ್ಥನೆ ನೇರವೇರಿಸಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...