ಸಮಾಜದ ಉನ್ನತಿಗೆ ಶಿಕ್ಷಕರ ಕೊಡುಗೆ ಅಪಾರ

KannadaprabhaNewsNetwork |  
Published : Sep 06, 2026, 01:45 AM IST
ಪಟ್ಟಣದ ಶ್ರೀ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ಹನೂರು ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ | Kannada Prabha

ಸಾರಾಂಶ

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಫುಲೆ ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕು. ಆಗ ಮಾತ್ರ ಸಮಾಜ ಉನ್ನತಿ ಸಾಧಿಸಲು ಸಾಧ್ಯ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಫುಲೆ ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕು. ಆಗ ಮಾತ್ರ ಸಮಾಜ ಉನ್ನತಿ ಸಾಧಿಸಲು ಸಾಧ್ಯ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

ಪಟ್ಟಣದ ಶ್ರೀ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ಹನೂರು ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಹನೂರು ತಾಲೂಕು ಕಾಡಂಚು ಮತ್ತು ಗಡಿಯಂಚಿನ ತಾಲೂಕಾಗಿದ್ದು, ಶಾಲೆಗಳಿಗೆ ಸಾರಿಗೆ ಸಮಸ್ಯೆ ಇದೆ. ಇದನ್ನು ಬಗೆಹರಿಸಲು ಈಗಾಗಲೇ ಬಸ್ ಘಟಕ ನಿರ್ಮಾಣಕ್ಕೆ ಭೂಮಿಪೂಜೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸಾರಿಗೆ ಸಮಸ್ಯೆ ಬಗೆಹರಿಯಲಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ಭವನವನ್ನು ಈಗಿರುವ ಬಿಇಒ ಕಚೇರಿ ಪಕ್ಕದಲ್ಲೇ ನಿರ್ಮಿಸಲು ಪ್ರಯತ್ನ ಮಾಡೋಣ, ಅದಕ್ಕೆ ದಾಖಲೆಗಳನ್ನು ಒದಗಿಸಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಖಾಸಗಿ ಶಾಲೆಗಳಿಗೆ ಹೋಗುವ ಮಕ್ಕಳು ಮತ್ತೆ ಸರ್ಕಾರಿ ಶಾಲೆಗೆ ಬರುವಂತಾಗಬೇಕು. ಇದಕ್ಕಾಗಿ ಶಿಕ್ಷಕರು ತಮ್ಮ ಅನುಭವ ಮತ್ತು ವಿದ್ವತ್ತನ್ನು ಮಕ್ಕಳಿಗೆ ಧಾರೆ ಎರೆಯಬೇಕು ಎಂದರು.

ನಿವೃತ್ತರಿಗೆ ಸನ್ಮಾನ:

ಕಾರ್ಯಕ್ರಮದಲ್ಲಿ ಹನೂರು ವಲಯದಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಮುಖ್ಯ ಭಾಷಣಕಾರ ನಾಗರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾದೇಶ್, ಪ್ರಧಾನ ಕಾರ್ಯದರ್ಶಿ ಮಾದೇಶ್, ಶಿವಮಲ್ಲು, ಖಜಾಂಚಿ ಶಿವಕುಮಾರಿ, ಕೃಷ್ಣೇಗೌಡ, ಗಿರೀಶ್, ರೂಪಶ್ರೀ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಶಂಕರ್, ಬಿಇಓ ಪ್ರತಿಭಾ, ಬಿಆರ್‌ಸಿ ವೆಂಕಟೇಶ್, ಚಂದ್ರಶೇಖರ್, ಇಸಿಒಗಳು, ಬಿಆರ್‌ಪಿ, ಸಿಆರ್‌ಪಿ, ಮುಖಂಡರಾದ ರಾಜೂಗೌಡ, ನಟರಾಜು ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನ ಕೊಟ್ಟ ಅರ್ಜಿಗಳು ಕಚೇರಿಗಳಲ್ಲೇ ಕೊಳೆಯಬಾರದು
ಶಿಕ್ಷಕರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ