- ವಿಕಲಚೇತನರಿಗೆ ಸಾಮಾಜಿಕ, ಆರ್ಥಿಕ ಭದ್ರತೆ ಕಲ್ಪಿಸಲು ಮಹಾಂತೇಶ ಬ್ರಹ್ಮ ಒತ್ತಾಯ - - -
ರಾಜ್ಯದ ಸುಮಾರು 18 ಲಕ್ಷ ವಿಕಲಚೇತನರಿಗೆ ಸೂಕ್ತ ಸಾಮಾಜಿಕ, ಆರ್ಥಿಕ ಭದ್ರತೆ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ವಿಕಲಚೇತನರ ಅಭಿವೃದ್ಧಿ ಸಂಘದಿಂದ ಜಿಲ್ಲಾಮಟ್ಟದ ವಿಕಲಚೇತನರ ಸಮಾವೇಶ ಹಾಗೂ 1 ಲಕ್ಷ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮ ಆ.30ರಂದು ಜಗಳೂರು ಪಟ್ಟಣದ ಗುರು ಭವನದಲ್ಲಿ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಮಹಾಂತೇಶ ಬ್ರಹ್ಮ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 1 ಗಂಟೆಗೆ ಸಮಾವೇಶ ಉದ್ಘಾಟನೆಗೊಳ್ಳಲಿದೆ. ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿ ವರ್ಗ, ಪ್ರಮುಖರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ ವಿಕಲಚೇತನರಿಗೆ ಸಂಬಂಧಿಸಿದ ವಿವಿಧ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರ, ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಮುಂದಿಡಲಾಗುವುದು ಎಂದರು.ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಯಿಂದ ವಂಚಿತರಾದ ವಿಕಲಚೇತನರ ಜೀವನ ಸಂಕಷ್ಟದಲ್ಲಿದೆ. ಸರ್ಕಾರದ ಅನ್ಯ ಯೋಜನೆಗಳಿಗೆ ಹೋಲಿಸಿದರೆ ವಿಕಲಚೇತನರಿಗೆ ನೀಡುತ್ತಿರುವ ಸೌಲಭ್ಯಗಳಲ್ಲಿ ತೀವ್ರ ತಾರತಮ್ಯ ಎದ್ದು ಕಾಣುತ್ತಿದೆ. ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ ₹2 ಸಾವಿರ ನೀಡಲಾಗುತ್ತಿದೆ. ಶಕ್ತಿಯಡಿ ಆಧಾರ್ ಕಾರ್ಡ್ ತೋರಿಸಿದರೆ ಮಹಿಳೆಯರಿಗೆ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವಿದೆ. ಆದರೆ, ವಿಕಲಚೇತನರಿಗೆ ಅಂತಹ ಅವಕಾಶ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸಂಘದ ಮುಖಂಡರಾದ ಬರ್ಕತ್ ಅಲಿ, ಕೆ.ಬಿ.ತಿಪ್ಪಣ್ಣ, ಪೆದ್ದಣ್ಣ, ಖಲೀಲ್ ಸಾಬ್ ಇತರರು ಇದ್ದರು.
(ಬಾಕ್ಸ್)
- ರಾಜ್ಯದ ಪ್ರತಿ ತಾಲೂಕಿನಲ್ಲಿ ವಿಕಲಚೇತನರ ಭವನ ನಿರ್ಮಿಸಬೇಕು.
- ಸೇವೆಯಲ್ಲಿರುವ ವಿಆರ್ಡಬ್ಲ್ಯೂ, ಯುಆರ್ಡಬ್ಲ್ಯೂ, ಎಂಆರ್ಡಬ್ಲ್ಯು ನೌಕರರನ್ನು ಕಾಯಂಗೊಳಿಸಬೇಕು.
- ಹೊರ ಗುತ್ತಿಗೆ ಹಾಗೂ ದಿನಗೂಲಿ ಆದಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಕಲಚೇತನ ನೌಕರರಿಗೆ ಉದ್ಯೋಗ ಭದ್ರತೆ ಒದಗಿಸಬೇಕು.
-26ಕೆಡಿವಿಜಿ5: