ಕನ್ನಡಪ್ರಭ ವಾರ್ತೆ ಮಣಿಪಾಲ
ಅವರು ಮಂಗಳವಾರ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಏ. 26 ರಂದು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಮೇ 7 ರಂದು ಚುನಾವಣೆ ನಡೆಯಲಿದೆ. ಮತದಾರರು ಅಂದು ಮತದಾನ ಕೇಂದ್ರಗಳಿಗೆ ತೆರಳಿ ಯಾವುದೇ ಆಸೆ - ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತ ಚಲಾಯಿಸುವಂತೆ ಜಾಗೃತಿ ಮೂಡಿಸುವುದು ಸ್ವೀಪ್ ಸಮಿತಿಯ ಮುಖ್ಯ ಧ್ಯೇಯವಾಗಿದೆ. ಪ್ರತಿಯೊಬ್ಬ ಅಧಿಕಾರಿಗಳು ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು ಎಂದರು.ಮತದಾರರು ಮತದಾನ ಕೇಂದ್ರಗಳಿಗೆ ಬಂದಾಗ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವಿಶೇಷ ಗಮನ ಹರಿಸಬೇಕು ಎಂದ ಅವರು, ಬಿ.ಎಲ್.ಓ. ಗಳು ಪ್ರತಿಯೊಬ್ಬ ಮತದಾರರಿಗೂ ಮತದಾನ ಮಾಡಲು ಅನುಕೂಲವಾಗುವ ರೀತಿಯಲ್ಲಿ ಮತದಾನ ಕ್ರಮ ಸಂಖ್ಯೆಯ ಚೀಟಿಯನ್ನು ಮನೆಮನೆಗೂ ವಿತರಿಸಬೇಕು ಜೊತೆಗೆ ಮತದಾನ ಯಂತ್ರದ ಬಳಕೆಯ ಬಗ್ಗೆಯೂ ಅರಿವು ಮೂಡಿಸಬೇಕು ಎಂದರು.
ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿ.ಪಂ. ಉಪಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ಯೋಜನಾ ನಿರ್ದೇಶಕ ಕರೀಂ ಆಸಾದಿ, ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.