ಕನ್ನಡಪ್ರಭ ವಾರ್ತೆ ಬೆಂಗಳೂರು
ಜೆ.ಪಿ.ನಗರದ 24ನೇ ಮುಖ್ಯರಸ್ತೆ ನಿವಾಸಿಗಳಾದ ಮೋಸಿನ್(23) ಮತ್ತು ಖಾದರ್ ಖಾನ್(27) ಗಾಯಗೊಂಡವರು. ಸದ್ಯ ಇಬ್ಬರು ಗಾಯಾಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ ಮೂಲದ ಮೋಸಿನ್ ಮತ್ತು ಖಾದರ್ ಖಾನ್ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಹೇರ್ ಸಲೂನ್ ಶಾಪ್ನಲ್ಲಿ ಕೆಲಸ ಮಾಡುವ ಈ ಇಬ್ಬರು ಬಾಡಿಗೆ ರೂಮ್ನಲ್ಲಿ ವಾಸವಿದ್ದಾರೆ. ಮಂಗಳವಾರ ಸೆಲೂನ್ ಶಾಪ್ಗೆ ರಜೆ ಇದ್ದ ಹಿನ್ನೆಲೆಯಲ್ಲಿ ಬೆಳಗ್ಗೆ 11ಕ್ಕೆ ಎದ್ದು ತಿಂಡಿ ಸಿದ್ಧಪಡಿಸಲು ಮುಂದಾಗಿದ್ದಾರೆ.ಅನ್ನ ಮಾಡುವಾಗ ಕುಕ್ಕರ್ ಸ್ಫೋಟ:
ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿ, ಕುಕ್ಕರ್ ಮಾತ್ರ ಸ್ಫೋಟಗೊಂಡಿದ್ದರಿಂದ ಕಡಿಮೆ ಪ್ರಮಾಣದಲ್ಲಿ ಹಾನಿಯಾಗಿದೆ. ಒಂದು ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರೆ ಭಾರೀ ಪ್ರಮಾಣದ ಅಪಾಯ ಉಂಟಾಗುತ್ತಿತ್ತು. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.