ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ
ಹೋಬಳಿ ಕೇಂದ್ರದ ತಿಪಟೂರು ರಸ್ತೆಯಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಜೀರ್ಣೋದ್ಧಾರಗೊಳ್ಳುತ್ತಿರುವ ದೇವಾಲಯದ ಕಾಮಗಾರಿಗಳ ಬಗ್ಗೆ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಮಾಹಿತಿ ಪಡೆದು ಮಾತನಾಡಿದರು.
ಗ್ರಾಮದ ಶ್ರೀ ಚಂದ್ರಮೌಳೇಶ್ವರ ದೇವಾಲಯಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು ಕಳೆದ ಅನೇಕ ವರ್ಷಗಳ ವರ್ಷಗಳ ಹಿಂದೆ ಈ ದೇವಾಲಯದ ಆವರಣದಲ್ಲಿ ದನಗಳ ಜಾತ್ರೆ ನಡೆಯುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಜಾತ್ರೆ ಸೇರುತ್ತಿಲ್ಲ. ಈ ಬಗ್ಗೆ ಸ್ಥಳೀಯರೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.ಗ್ರಾಮ ಪಂಚಾಯಿತಿ ಸದಸ್ಯ ಎನ್ ಎಸ್ ಮಂಜುನಾಥ್ ಮಾತನಾಡಿ, ಶಾಸಕರು ಶ್ರೀ ಚಂದ್ರಮೌಳೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಹೆಚ್ಚಿನ ಸಹಕಾರ ನೀಡುತ್ತಾ ಬಂದಿದ್ದಾರೆ. ಮುಂದಿನ ಫೆಬ್ರವರಿ ತಿಂಗಳ 23, 24ರಂದು ದೇವಾಲಯ ಲೋಕಾರ್ಪಣೆ ಕಾರ್ಯಕ್ರಮವಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಫೋಟೋ : ನುಗ್ಗೇಹಳ್ಳಿ ಹೋಬಳಿ ಕೇಂದ್ರದ ತಿಪಟೂರು ರಸ್ತೆಯಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಾಲಯಕ್ಕೆ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ ನೀಡಿ ಜೀರ್ಣೋದ್ಧಾರಗೊಳ್ಳುತ್ತಿರುವ ದೇವಾಲಯದ ಕಾಮಗಾರಿಗಳ ಬಗ್ಗೆ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಮಾಹಿತಿ ಪಡೆದು ಮಾತನಾಡಿದರು.