ಕನ್ನಡಪ್ರಭ ವಾರ್ತೆ ಚಾಮರಾಜನಗರ
ತೂತುಕುಡಿಯಿಂದ ಚಾಮರಾಜನಗರಕ್ಕೆ ಪ್ರಥಮ ಬಾರಿಗೆ 21 ಬೋಗಿಗಳಲ್ಲಿ ರಸಗೊಬ್ಬರ ಸಾಗಣೆ ಮಾಡಿದ ಗೂಡ್ಸ್ ರೈಲಿಗೆ ಜಿಲ್ಲೆಯ ರಸಗೊಬ್ಬರ ಮಾರಾಟಗಾರರ ಜತೆ ಸ್ವಾಗತಿಸಿ ಪೂಜೆ ಸಲ್ಲಿಸಿ ಮಾತನಾಡಿದರು.
ಜಿಲ್ಲಾಧಿಕಾರಿಗಳು, ಕೇಂದ್ರ ಕಚೇರಿಯ ಉನ್ನತ ಮಟ್ಟದ ಅಧಿಕಾರಿಗಳ ಶ್ರಮದಿಂದ ತೂತುಕುಡಿಯಿಂದ ಚಾಮರಾಜನಗರಕ್ಕೆ ಗೂಡ್ಸ್ ರೈಲಿನ 21 ಬೋಗಿಗಳಲ್ಲಿ ಸ್ಪಿಕ್ ಕಂಪನಿಯ ರಸಗೊಬ್ಬರ ತುಂಬಿಕೊಂಡು ಬಂದಿದ್ದು, ರೈಲ್ವೆ ನಿಲ್ದಾಣದಿಂದ ನಗರದ ಮುಖ್ಯ ರಸ್ತೆವರೆಗೆ ಉತ್ತಮ ರಸ್ತೆ ಆಗಬೇಕಿದೆ. ಸ್ಟಿಕ್ ಕಂಪನಿಯು ಕೂಡ ನಮ್ಮ ಮನವಿಗೆ ಸ್ಪಂದಿಸಿ 21 ಬೋಗಿ ರಸಗೊಬ್ಬರ ಕಳುಹಿಸಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ರಸಗೊಬ್ಬರ ಜಿಲ್ಲೆಗೆ ಬರುತ್ತದೆ. ಜಿಲ್ಲೆಯಲ್ಲಿ ಯಾವುದೇ ರಸಗೊಬ್ಬರ ಕೊರತೆ ಆಗುವುದಿಲ್ಲ ಎಂದು ಹೇಳಿದರು.ರೈಲ್ವೆ ಸಮಿತಿ ಸದಸ್ಯ ವಿ. ಪ್ರಭಾಕರ್ ಮಾತನಾಡಿ, ಜಿಲ್ಲೆಯನ್ನು ಅಭಿವೃದ್ಧಿಪಡಿಸಬೇಕೆಂಬ ಒಳ್ಳೆಯ ಉದ್ದೇಶದಿಂದ ರೈಲ್ವೆ ವಿಭಾಗೀಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪಡಿತರ ಮಾತ್ರ ಸಾಗಣೆ ಮಾಡುತ್ತೀರಿ, ರಸಗೊಬ್ಬರ ಸಾಗಣೆ ಏಕೆ ಮಾಡುತ್ತಿಲ್ಲ ಎಂದು ಗಮನ ಸೆಳೆದ ಪರಿಣಾಮದಿಂದ ಈಗಾಗಲೇ ಮಂಗಳೂರಿನಿಂದ 10 ಬೋಗಿಯಲ್ಲಿ ರಸಗೊಬ್ಬರ ಸಾಗಣೆ ಆಗಿದ್ದು, ಇಂದು ಕೂಡ ತೂತುಕುಡಿಯಿಂದ 21 ಬೋಗಿಯಲ್ಲಿ ಸ್ಪಿಕ್ ಕಂಪನಿ ರಸಗೊಬ್ಬರ ಗೂಡ್ಸ್ ರೈಲು ಮೂಲಕ ತಂದಿರುವುದು ಜಿಲ್ಲೆಯ ಜನತೆಗೆ ಅನುಕೂಲವಾಗಲಿದೆ. ಮುಂದೆ ನಿರಂತರವಾಗಿ ರಸಗೊಬ್ಬರ ಸಾಗಣೆ ಮಾಡುತ್ತಾರೆ ಲಾరి ಮಾಲೀಕರು, ಕಾರ್ಮಿಕರು ಸಹಕಾರ ಅಗತ್ಯವಾಗಿದೆ. ಜನತೆಯ ಬೇಡಿಕೆಯಂತೆ ಲಾರಿ ಸಂಚಾರಕ್ಕೆ ಒಳ್ಳೆಯ ರಸ್ತೆ ಮಾಡಿಸಿಕೊಡಲು, ರಸಗೊಬ್ಬರವನ್ನು ಮಳೆಗಾಲದಲ್ಲಿ ಅನ್ಲೋಡ್ ಮಾಡಲು ಸೂಕ್ತ ವ್ಯವಸ್ಥೆ ಮಾಡಿಸಲು ರೈಲ್ವೆ ಅಧಿಕಾರಿಗಳ ಸಭೆಯಲ್ಲಿ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.
ಸ್ಪಿಕ್ ಗ್ರೀನ್ ಸ್ಟಾರ್ ಫರ್ಟಿಲೈಸರ್ ಕಂಪನಿ ಸಹಾಯಕ ವ್ಯವಸ್ಥಾಪಕ ವಿಜಯ್ ಕುಮಾರ್ ನಾಯಕ ಮಾತನಾಡಿದರು.