- ವಿಪ ಸದಸ್ಯ ಡಾ.ಎಂ.ಜಿ.ಮೂಳೆ ಸಲಹೆ । ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪತ್ತಿನ ಸಹಕಾರ ಸಂಘ ಉದ್ಘಾಟನೆ
ಕನ್ನಡಪ್ರಭ ವಾರ್ತೆ ಹೊನ್ನಾಳಿ
ದೇಶದ ಇತಿಹಾಸದಲ್ಲಿ ಮರಾಠಿಗರಿಗೆ ವಿಶೇಷ ಸ್ಥಾನಮಾನಗಳಿದ್ದು, ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹೆಚ್ಚು ಅಭಿವೃದ್ಧಿ ಹೊಂದಬೇಕಾಗಿದೆ ಎಂದು ವಿಧಾನ ಪರಿಷತ್ತು ಸದಸ್ಯ ಡಾ. ಎಂ.ಜಿ. ಮೂಳೆ ಹೇಳಿದರು.ಹೊನ್ನಾಳಿ ಹಿರೇಕಲ್ಮಠದ ಸಮುದಾಯ ಭವನದಲ್ಲಿ ನಡೆದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪತ್ತಿನ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ನೂತನ ಸಂಘಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶದ ಇತಿಹಾಸದಲ್ಲಿ ಮೊಗಲರ ವಿರುದ್ಧ ಹೋರಾಡಿದಮ ಹಿಂದುತ್ವದ ಉಳಿವಿಗೆ ವಿಶೇಷ ಕೊಡುಗೆ ನೀಡಿದ ಛತ್ರಪತಿ ಶಿವಾಜಿ ಅವರ ತಂದೆ ಷಹಾಜಿರಾಜ್ ಭೋಸ್ಲೆ ಸಮಾಧಿ ಚನ್ನಗಿರಿ ತಾಲೂಕಿನ ಹೊದಿಗೆರೆಯಲ್ಲಿದೆ. ಪ್ರವಾಸಿ ತಾಣವಾಗಿ ಗಮನ ಸೆಳೆಯಬೇಕಿದ್ದ ಈ ಸ್ಥಳವು ಪ್ರಸ್ತುತ ಅತ್ಯಂತ ದುಸ್ಥಿತಿಯಲ್ಲಿ ಇರುವುದು ನೋವಿನ ಸಂಗತಿ ಎಂದು ಹೇಳಿದರು.
ನೂತನ ಸಂಘದ ಅಧ್ಯಕ್ಷ ಎಚ್.ಜಿ. ದೇವರಾಜ್ ನೆಲಹೊನ್ನೆ ಅಧ್ಯಕ್ಷತೆ ವಹಿಸಿ, ಈ ಸಂಘದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅರ್ಥಿಕ ಸಹಾಯ ನೀಡುವ ಜೊತೆಗೆ ಮರಾಠ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಪ್ರೋತ್ಸಾಹ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಶಾಸಕ ಡಿ.ಜಿ. ಶಾಂತನಗೌಡ, ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಬೆಂಗಳೂರಿನ ವೀರ ಶಿವಾಜಿ ಸೇನೆ ಅಧ್ಯಕ್ಷ ಕಮೇಲೇಶ್ ರಾವ್, ಹೊನ್ನಾಳಿ ತಾಲೂಕು ಮರಾಠ ಸಮಾಜ ಅಧ್ಯಕ್ಷ ಎ.ಆರ್. ಚಂದ್ರಶೇಖರಪ್ಪ, ದಾವಣಗೆರೆ ಜಿಲ್ಲೆ ದೂಡಾ ಮಾಜಿ ಅಧ್ಯಕ್ಷ ಯಶವಂತ ರಾವ್, ಚನ್ನಗಿರಿ ಮರಾಠ ಸಮಾಜದ ಅಧ್ಯಕ್ಷ ಶಿವಾಜಿ ರಾವ್, ತಾಲೂಕು ಮರಾಠ ಸಮಾಜದ ಉಪಾಧ್ಯಕ್ಷ ಸುರೇಶ್ ಕೆ., ಪದಾಧಿಕಾರಿಗಳು, ಕವಿತ ಪುರಕ್ಕನವರ್, ಚನ್ನಗಿರಿ ವಕೀಲರಾದ ರಾಮಚಂದ್ರ ರಾವ್, ಶಿವಾಜಿ ರಾವ್ ಭೋಸ್ಲೆ ಭದ್ರಾವತಿ ಮಾತನಾಡಿದರು. ಮುಖಂಡರು, ಸಮಾಜ ಬಾಂಧವರು ಭಾಗವಹಿಸಿದ್ದರು.
- - -