ಉತ್ತಮ ಶಿಕ್ಷಣಕ್ಕೆ ಶಿಕ್ಷಕರು, ಪೋಷಕರ ಸಹಭಾಗಿತ್ವ ಅಗತ್ಯ: ಪ್ರೊ.ಕಲ್ಯಾಟಂಡ ಪೂಣಚ್ಚ

KannadaprabhaNewsNetwork |  
Published : Jul 14, 2024, 01:37 AM IST
-ಎನ್ ಪಿ ಕೆ-1. ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ 2024 -25ರ ಸಾಲಿನ ಪೋಷಕರ ಸಭೆಯ ವೇದಿಕೆಯಲ್ಲಿದ್ದ ಗಣ್ಯರು.13-ಎನ್ ಪಿ ಕೆ-2.ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ 2024 -25ರ ಸಾಲಿನ ಪೋಷಕರ ಸಭೆಯಲ್ಲಿ ಉಪಸ್ಥಿತಿ ಇದ್ದವರು .  | Kannada Prabha

ಸಾರಾಂಶ

ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ 2024 -25ರ ಸಾಲಿನ ಪೋಷಕರ ಸಭೆ ನಡೆಯಿತು. ನಿವೃತ್ತ ಪ್ರಾಂಶುಪಾಲ ಪ್ರೊ. ಕಲ್ಯಾಟಂಡ ಪೂಣಚ್ಚ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರ ಸಹಭಾಗಿತ್ವದಿಂದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ. ಕಲ್ಯಾಟಂಡ ಪೂಣಚ್ಚ ಹೇಳಿದರು.

ಇಲ್ಲಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ 2024 -25ರ ಸಾಲಿನ ಪೋಷಕರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ, ವಿದ್ಯಾರ್ಥಿಗಳು ಪಡೆಯುವ ಶಿಕ್ಷಣ ಮೌಲ್ಯಯುತವಾಗಿರಬೇಕು. ಉತ್ತಮ ಗುಣನಡತೆಗಳನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದರು.

ಪ್ರಾಂಶುಪಾಲೆ ಬಿ.ಎಂ. ಶಾರದಾ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ತರವಾದದ್ದು. ಪಾಠ ಪ್ರವಚನಗಳ ಜೊತೆಗೆ ಪೋಷಕರು ಸಹ ವಿದ್ಯಾರ್ಥಿಗಳ ಗುಣನಡತೆಗಳ ಬಗ್ಗೆ ಮಾರ್ಗದರ್ಶನ ಮಾಡಬೇಕು ಎಂದರು.ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ವಹಿಸಿದ್ದರು.

ನಿರ್ದೇಶಕರಾದ ಕೊಂಬಂಡ ಗಣೇಶ್, ಅಪ್ಪಾರಂಡ ಅಪ್ಪಯ್ಯ, ಬಿದ್ದಾಟಂಡ ಮುತ್ತಣ್ಣ, ಅಪ್ಪಚೆಟ್ಟೋಳಂಡ ನವೀನ್ ಅಪ್ಪಯ್ಯ, ಕಲಿಯಂಡ ಕೌಶಿಕ್ ಕುಶಾಲಪ್ಪ, ಚೌರೀರ ಮಂದಣ್ಣ ಉಪಸ್ಥಿತರಿದ್ದರು. ಸಭೆಯಲ್ಲಿ ಪಾಲ್ಗೊಂಡಿದ್ದ ಪೋಷಕರು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಶಿಕ್ಷಕಿ ಚಂದ್ರಕಲಾ ಮಹೇಶ್ ಪ್ರಾರ್ಥಿಸಿದರು. ಶಾರದಾ ಬಿ.ಎಂ. ಸ್ವಾಗತಿಸಿದರು. ಶೋಭಿತಾ ಕೆ.ಡಿ. ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮಲಾಕರ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌! - ಖಾಸಗಿ ಕ್ಷಣಗಳ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌
ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ : ಸಾವಿರ ವ್ಯಸನಿಗಳ ಸೆರೆ