ಕನ್ನಡಪ್ರಭ ವಾರ್ತೆ, ಚಾಮರಾಜನಗರ
ನ. 20ರ ಬೆಳಗ್ಗೆ 11 ಗಂಟೆಗೆ ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಮಾರೋಪ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪಶುಸಂಗೋಪನೆ, ರೇಷ್ಮೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ , ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ. ದೇವೇಗೌಡ ಭಾಗವಹಿಸಲಿದ್ದಾರೆ.
ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವ ನಾವೀನ್ಯತೆಯ ಸಹಕಾರಿ ವ್ಯವಹಾರ ಮಾದರಿಗಳು ವಿಷಯ ಕುರಿತು ಡಾ. ಕೆ.ಪಿ. ರಮೇಶ್ ಉಪನ್ಯಾಸ ನೀಡಲಿದ್ದು ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ.25ಸಾವಿರಕ್ಕು ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದ್ದು 25 ಸಾವಿರ ಆಸನ ವ್ಯವಸ್ಥೆ ಹಾಗೂ ಜರ್ಮನ್ ಟೆಂಟ್ನಿಂದ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದ್ದು 25 ಸಾವಿರ ಮಂದಿಗೆ ಪಲಾವ್ ಹಾಗೂ ಮೊಸರನ್ನ, 25 ಸಾವಿರ ಮಜ್ಜಿಗೆ ಪ್ಯಾಕೇಟ್ ಹಾಗೂ ವಾಟರ್ ಬಾಟಲ್ ವ್ಯವಸ್ಥೆ ಮಾಡಲಾಗಿದೆ. ಚಾಮರಾಜನಗರದ ಬಗ್ಗೆ ವಿಶೇಷ ಮಮತೆ ಇಟ್ಟುಕೊಂಡಿರುವ ಸಿದ್ದರಾಮಯ್ಯ ಮೊದಲ ಸಿಎಂ ಅವಧಿಯಲ್ಲಿ 17 ಕ್ಕೂ ಅಧಿಕ ಬಾರಿ ಭೇಟಿ ಕೊಟ್ಟಿದ್ದರು. ಎರಡನೇ ಅವಧಿಯಲ್ಲಿ ಇದು ಮುಂದುವರಿದಿದೆ. ಒಟ್ಟಾರೆ ಸಿದ್ದರಾಮಯ್ಯ ಸಿಎಂ ಅವಧಿಯಲ್ಲಿ 20 ಕ್ಕೂ ಅಧಿಕ ಬಾರಿ ಗಡಿಜಿಲ್ಲೆಗೆ ಭೇಟಿ ನೀಡಿದ್ದಾರೆ.
ಚಾಮರಾಜನಗರ: ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭದ ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ. ೨೦ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಬುಧವಾರ ಸಿದ್ದತೆ ಪರಿಶೀಲಿಸಿದರು.
ಸಮಾರಂಭದ ಸ್ಥಳದ ಪಕ್ಕದಲ್ಲಿಯೇ ಸಾರ್ವಜನಿಕರಿಗಾಗಿ ಉಪಹಾರ ಸಿದ್ದಪಡಿಸಲು ಮಾಡಿರುವ ವ್ಯವಸ್ಥೆ ಸಂಪೂರ್ಣವಾಗಿ ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ಸಚಿವರು ನೀಡಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವೆಂಕಟೇಶ್ ಅವರು, ಸಮಾರಂಭಕ್ಕೆ ಅಂದಾಜು ೩೦ರಿಂದ ೪೦ ಸಾವಿರ ಜನರು ಬರುವ ನಿರೀಕ್ಷೆಯಿದೆ. ಈಗಾಗಲೇ ೨೫ ಸಾವಿರ ಆಸನಗಳನ್ನು ಹಾಕಲಾಗಿದೆ. ಇನ್ನೂ ೧೦ ಸಾವಿರ ಜನರಿಗೆ ಆಗುವಷ್ಟು ಹೆಚ್ಚುವರಿ ಆಸನಗಳನ್ನು ಇಟ್ಟುಕೊಳ್ಳಲಾಗಿದೆ ಎಂದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳೊಂದಿಗೆ ಕಾರ್ಯಕ್ರಮ ಸಂಬಂಧ ಸಮಾಲೋಚನೆ ನಡೆಸಿದರು.