ಧಾರವಾಡ: ಗ್ರಾಮೀಣ ಭಾಗದ ಆರ್ಥಿಕ ಬೆಳವಣಿಗೆಯಲ್ಲಿ ಪತ್ತಿನ ಸಹಕಾರಿ ಸಂಘಗಳು ನಿರ್ಣಾಯಕ ಪಾತ್ರ ನಿರ್ವಹಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಿಬ್ಬಂದಿ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಬಾಪುಗೌಡ ಡಿ. ಪಾಟೀಲ, ಜಿಲ್ಲೆಯಲ್ಲಿ ಪತ್ತಿನ ಮತ್ತು ನೌಕರರ ಪತ್ತಿನ ಸಹಕಾರ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಲಿವೆ. ಸಂಘದಲ್ಲಿ ವ್ಯವಹಾರ ಮಾಡುವಾಗ ಆಗುವಂತಹ ತೊಂದರೆಗಳನ್ನು ಯೂನಿಯನ್ನಿಂದ ಜರಗಿಸುವಂತಹ ಇಂತಹ ತರಬೇತಿಯಲ್ಲಿ ಪಾಲ್ಗೊಂಡು ತರಬೇತಿ ಪ್ರಯೋಜನ ಪಡೆಯಲು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಂಕರಪ್ಪ ರಾಯನಾಳ, ಸಹಕಾರ ಚಳವಳಿ ಹುಟ್ಟು ಹಾಕಿದ ಧಾರವಾಡ ಜಿಲ್ಲೆಯಲ್ಲಿ ಸಹಕಾರ ರಂಗ ನಿರೀಕ್ಷಿತ ಮಟ್ಟದಲ್ಲಿಲ್ಲ ಎಂಬುದು ಕಳವಳಕಾರಿ ಸಂಗತಿ. ಸಂಘಗಳ ನಿರ್ವಹಣೆಯಲ್ಲಿ ಸರ್ಕಾರ ರೂಪಿಸುವ ಸಹಕಾರ ಕಾಯ್ದೆಗಳ ಬಗ್ಗೆ ಅರಿವು ಅಗತ್ಯ. ಈ ಹಿನ್ನೆಲೆಯಲ್ಲಿ ಇಂತಹ ತರಬೇತಿ ಅಗತ್ಯ ಎಂದರು.ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಶಂಕರ ಮುಗದ, ಸಹಕಾರ ಮಹಾಮಂಡಳ ನಿರ್ದೇಶಕರಾದ ಜಿ.ಪಿ. ಪಾಟೀಲ, ಗೀತಾ ಕುಂಬಿ, ಮಲ್ಲಿಕಾರ್ಜುನ ಹೊರಕೇರಿ, ಫಕ್ಕೀರಗೌಡ ಕಲ್ಲನಗೌಡ್ರ ಮತ್ತು ಸದಾಶಿವಗೌಡ ಪಾಟೀಲ ವೇದಿಕೆಯಲ್ಲಿದ್ದರು.
ಆನಂದ ತಳವಾರ ಸ್ವಾಗತಿಸಿದರು. ಸವಿತಾ ಕುರ್ಲಗೇರಿ ನಿರೂಪಿಸಿದರು. ಬಿ.ವಿ. ರವಿಂದ್ರನಾಥ ಸಹಕಾರ ಸಂಸ್ಥೆಗಳಿಗೆ ಅನ್ವಯಿಸುವಂತೆ ಆದಾಯ ತೆರಿಗೆ ಕಾಯ್ದೆಯ ಅಂಶಗಳ ಕುರಿತು ಮತ್ತು ಶಿವಾನಂದ ಕುಲಕರ್ಣಿ ಸೈಬರ್ ಸೆಕ್ಯೂರಿಟಿ ಹಾಗೂ ಫ್ರಾಡ್ ಕಂಟರೋಲ್ ಕುರಿತು ಉಪನ್ಯಾಸ ನೀಡಿದರು.