ಸಹಕಾರಿ ಸಂಘಗಳು ರೈತರ ಜೀವನಾಡಿ: ಶಾಸಕ ಪಾಟೀಲ

KannadaprabhaNewsNetwork |  
Published : Feb 14, 2026, 03:00 AM IST
ಕುಂದಗೋಳ ತಾಲೂಕಿನಲ್ಲಿ ಶಿರೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕರ ಸಂಘದ ಗೋದಾಮು ನಿರ್ಮಾ‌ಣ‌ ಕಾಮಗಾರಿಗೆ ಶಾಸಕ ಎಂ.ಆರ್‌. ಪಾಟೀಲ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಶಿರೂರ ಗ್ರಾಮದ ಪ್ರಾಥಮಿಕ ಸಹಕಾರ ಸಂಘದ ಬಿತ್ತನೆ ಬೀಜ ವಿತರಣೆ, ಗೊಬ್ಬರ ವಿತರಣೆಗೆ ಅವಕಾಶ ಕಲ್ಪಿಸಲಾಗಿದೆ. ಕಮಡೊಳ್ಳಿಗೆ ಸಂಪರ್ಕಿಸುವ ರಸ್ತೆಗೆ ಕಾಂಕ್ರಿಟ್ ಹಾಗೂ ಚರಂಡಿ ನಿರ್ಮಿಸಲಾಗಿದೆ. ಜತೆಗೆ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಿದ್ದು ನೂತನವಾಗಿ ಬೋರ್‌ವೆಲ್ ಕೊರೆಯಿಸಲಾಗಿದೆ.

ಕುಂದಗೋಳ:

ಗ್ರಾಮೀಣ ಭಾಗಗಳಲ್ಲಿ ಸಹಕಾರ ಸಂಘಗಳು ರೈತರ ಜೀವ ನಾಡಿಯಾಗಿವೆ. ಪಕ್ಷಾತೀತವಾಗಿ ಇಲ್ಲಿ ಆಡಳಿತ ಮಾಡಿದರೆ ಮಾತ್ರ ಸಂಘದ ಬೆಳವಣಿಗೆ ಸಾಧ್ಯ ಎಂದು ಶಾಸಕ ಎಂ.ಆರ್. ಪಾಟೀಲ ಹೇಳಿದರು.

ತಾಲೂಕಿನಲ್ಲಿ ಶಿರೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಗೋದಾಮು ನಿರ್ಮಾ‌ಣ‌ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಶಿರೂರ ಗ್ರಾಮದ ಪ್ರಾಥಮಿಕ ಸಹಕಾರ ಸಂಘದ ಬಿತ್ತನೆ ಬೀಜ ವಿತರಣೆ, ಗೊಬ್ಬರ ವಿತರಣೆಗೆ ಅವಕಾಶ ಕಲ್ಪಿಸಲಾಗಿದೆ. ಕಮಡೊಳ್ಳಿಗೆ ಸಂಪರ್ಕಿಸುವ ರಸ್ತೆಗೆ ಕಾಂಕ್ರಿಟ್ ಹಾಗೂ ಚರಂಡಿ ನಿರ್ಮಿಸಲಾಗಿದೆ. ಜತೆಗೆ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಿದ್ದು ನೂತನವಾಗಿ ಬೋರ್‌ವೆಲ್ ಕೊರೆಯಿಸಲಾಗಿದೆ. ಹೊಲದ ದಾರಿಯಲ್ಲಿನ ಮುಳ್ಳು-ಕಂಟಿ ತೆರವುಗೊಳಿಸಲಾಗಿದೆ. ಹೀಗೆ ಹಲವು ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮೂಲಕ ಗ್ರಾಮದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಮುಂದೆಯೂ ಇದೇ ರೀತಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದರು ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಈಶ್ವರಪ್ಪ ಬೆಂಗೇರಿ ಸಂಘದ ಬೆಳವಣಿಗೆ ಕುರಿತು ಪ್ರಾಸ್ತಾವಿಕ ಮಾತನಾಡಿದರು. ಮೃತ್ಯುಂಜಯ ಸ್ವಾಮಿ ಹಿರೇಮಠ ಸಾನ್ನಿಧ್ಯ ವಹಿಸಿದ್ದರು. ಸಹಕಾರ ಸಂಘದ ಉಪಾಧ್ಯಕ್ಷ ಭರಮಪ್ಪ ಬನಪ್ಪನವರ, ಮುಖಂಡರಾದ ಬಾಬುಗೌಡ ಪಾಟೀಲ, ಮಲ್ಲನಗೌಡ ಪಾಟೀಲ, ಷಡಕ್ಷರಯ್ಯ ಹಿರೇಮಠ, ದೇವಪ್ಪ ತಾಯಿತಂದಿ, ಫಕೀರಗೌಡ ನಾಗನಗೌಡ್ರ, ಮಂಜುನಾಥ ಕಮಡೊಳ್ಳಿ, ಹುಲೆಪ್ಪ ಭಜಮ್ಮನವರ, ಬಸವರಾಜ ಸುಣಗಾರ, ಯಲ್ಲಪ್ಪ‌‌ ಕಮಡೊಳ್ಳಿ, ಸುರೇಶ ಬೆಂಗೇರಿ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾ.1ರಿಂದ ಸೇವೆ ಬಂದ್‌ ಸರ್ಕಾರಿ ವೈದ್ಯರಿಂದ ಎಚ್ಚರಿಕೆ
ಚರಿತ್ರೆ ತಿಳಿದಿದ್ದರಷ್ಟೇ ಚರಿತ್ರೆ ಸೃಷ್ಟಿಸಲು ಸಾಧ್ಯ: ಸಿಎಂ